ಮಹಾಂತೇಶ್ ಹತ್ಯೆ : ಆರೋಪಿಗಳ ಗುರುತು ನಿಗೂಢ

S.P. Mahantesh
ಬೆಂಗಳೂರು, ಮೇ. 21 : ಭ್ರಷ್ಟರ ವಿರುದ್ಧ ಯುದ್ಧ ಸಾರಿದ್ದ ದಕ್ಷ ಕೆಎಎಸ್ ಅಧಿಕಾರಿ ಎಸ್.ಪಿ. ಮಹಾಂತೇಶ್ (48) ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ನಾಲ್ವರು ಆರೋಪಿಗಳ ಗುರುತನ್ನು ಬಹಿರಂಗಪಡಿಸಲು ಗೃಹ ಸಚಿವ ಆರ್ ಅಶೋಕ್ ಅವರು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿರುವ ಈ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸೋಮವಾರ ಚರ್ಚೆ ನಡೆಸಿದ ನಂತರ ಮಾಧ್ಯಮದವರೊಡನೆ ಮಾತನಾಡಿದ ಅಶೋಕ್ ಅವರು, ನಾಲ್ವರನ್ನು ಈಗಾಗಲೆ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರ ತಂಡವನ್ನು ರಾಜ್ಯದ ಹೊರಗೂ ಕಳಿಸಲಾಗಿದೆ ಎಂದು ನುಡಿದರು.

ಏ.15ರಂದು ಏಟ್ರಿಯಾ ಹೋಟೆಲ್ ಬಳಿ ಸಹಕಾರಿ ಇಲಾಖೆಯ ಲೆಕ್ಕ ವಿಭಾಗದ ಉಪ ನಿರ್ದೇಶಕರಾಗಿದ್ದ ಮಹಾಂತೇಶ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು ಮೇ 20ರಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 6.30ಕ್ಕೆ ಕೊನೆಯುಸಿರೆಳೆದರು.

ಇನ್ನೆರಡು ದಿನಗಳಲ್ಲಿ ಮಹಾಂತೇಶ್ ಮೇಲೆ ಹಲ್ಲೆ ಮಾಡಿದ ಎಲ್ಲ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಪೊಲೀಸರು ಯಶಸ್ವಿಯಾಗಲಿದ್ದಾರೆ. ಅವರ ಸುಳಿವು ಪೊಲೀಸರಿಗೆ ದೊರೆತಿದೆ ಎಂದು ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಪತ್ರಕರ್ತರಿಗೆ ತಿಳಿಸಿದ್ದಾರೆ. ಪೊಲೀಸರು ಅತ್ಯುತ್ತಮವಾಗಿ ಕರ್ತವ್ಯ ನಿಭಾಯಿಸುತ್ತಿದ್ದು, ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಬೇರೆಬೇರೆ ಸಹಕಾರಿ ಸಂಘಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳಲ್ಲಿ ಅನೇಕ ಅಧಿಕಾರಿಗಳು ಮತ್ತು ರಾಜಕಾರಣಿಗಳು ಕೂಡ ಭಾಗಿಯಾಗಿದ್ದಾರೆ ಎಂದು ಮಹಾಂತೇಶ್ ಅವರು ವರದಿ ನೀಡಿದ್ದರು. ಅವರ ಈ ದಕ್ಷತೆಯೇ ಜೀವಕ್ಕೆ ಮುಳುವಾಯಿತು. ಈ ಘಟನೆಗೆ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಪಾರುಮಾಡಲು ರಾಜಕಾರಣಿಗಳೇ ಯತ್ನಿಸುತ್ತಿದ್ದಾರೆ ಎಂದು ಮಹಾಂತೇಶ್ ಅವರು ಪತ್ನಿಯೂ ಆರೋಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+