ಹಂಪಿ ಎಕ್ಸ್ಪ್ರೆಸ್ ರೈಲು ದುರಂತ : ಸಹಾಯವಾಣಿ

ಮೃತರಲ್ಲಿ ಹೆಚ್ಚಿನವರು ಕೂಲಿ ಕಾರ್ಮಿಕರಾಗಿದ್ದು ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮದ ಐವರು ಸಾವಿಗೀಡಾಗಿದ್ದಾರೆ. ಘಟನೆಯ ಸ್ಥಳಕ್ಕೆ ಕೇಂದ್ರ ರೈಲ್ವೆ ಖಾತೆ ಸಚಿವ ಮುಕುಲ್ ರಾಯ್ ಅವರು ಧಾವಿಸಿದ್ದು, ಸತ್ತವರ ಕುಟುಂಬಕ್ಕೆ 5 ಲಕ್ಷ ರು., ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ರು. ಮತ್ತು ಸಣ್ಣಪುಟ್ಟ ಗಾಯ ಆದವರಿಗೆ 50 ಸಾವಿರ ರು. ರೇಲ್ವೆ ಇಲಾಖೆ ಘೋಷಿಸಿದೆ.
ಈ ಘಟನೆಯ ತನಿಖೆ ನಡೆಸಬೇಕೆಂದು ಆದೇಶಿಸಲಾಗಿದೆ. ರೈಲ್ವೆ ಸುರಕ್ಷತೆ ಆಯುಕ್ತ (ದಕ್ಷಿಣ ಸರ್ಕಲ್) ಎಸ್.ಕೆ. ಮಿಟ್ಟಲ್ ಅವರು ತನಿಖೆ ನಡೆಸಲಿದ್ದು, ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ. ಸಹಾಯಕ್ಕಾಗಿ ಕರ್ನಾಟಕದಿಂದ ಕೂಡ ಒಂದು ತಂಡ ಕಳಿಸಲಾಗಿದೆ.
ಸಹಾಯವಾಣಿ :
ಬೆಂಗಳೂರು : 080 22371166, 22156553, 22156554
ಬಳ್ಳಾರಿ : 08392 277704
ಹುಬ್ಬಳ್ಳಿ : 0836-2345338, 2346141, 2289826
ಹೊಸಪೇಟೆ : 08394-221788
ಪೆನುಕೊಂಡ : 08552-20228, 08555-2220228, 097013 74090, 09713 74091
ರೈಲಿನ ಮುಂದಿನ ಮೂರು ಬೋಗಿಗಳು ಜಾಸ್ತಿ ಹಾನಿಗೀಡಾಗಿವೆ. ಒಂಗು ಬೋಗಿಗೆ ಬೆಂಕಿ ಕೂಡ ಹೊತ್ತಿಕೊಂಡಿತ್ತು. ಮಂಗಳವಾರ ನಸುಕಿನಲ್ಲಿ ಪ್ರಯಾಣಿಕರೆಲ್ಲರು ನಿದ್ರೆಯಲ್ಲಿದ್ದಾಗ ಅಪಘಾತ ಸಂಭವಿಸಿರುವುದು ಹೆಚ್ಚಿನ ಅನಾಹುತಕ್ಕೆ ಕಾರಣವಾಗಿದೆ. ಗಾಯಗೊಂಡವರನ್ನು ಅನಂತಪುರ, ಪೆನುಕೊಂಡ, ಹಿಂದೂಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸತ್ತವರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications