ವ್ಯಾಟ್ ಕಡಿತ : ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಪ್ರಸ್ತುತ ಪೆಟ್ರೋಲ್ ಬೆಲೆ ಲೀಟಲಿರಿಗೆ ರು.73.19 ಇದೆ. ವ್ಯಾಟ್ ಕಡಿತದಿಂದಾಗಿ ಗ್ರಾಹಕರಿಗೆ ಪೆಟ್ರೋಲ್ ಲೀಟರಿಗೆ ರು.71.80ಕ್ಕೆ ದೊರೆಯಲಿದೆ. ಪೆಟ್ರೋಲ್ ಬೆಲೆ ದೀಢೀರನೆ ಏರಿಸಿದ ಮೇಲೆ ಆಕ್ರೋಶಗೊಂಡಿದ್ದ ನಾಗರಿಕರ ಮೇಲಿನ ಭಾರವನ್ನು ಈ ಬೆಲೆ ಕಡಿತ ಸ್ವಲ್ಪವಾದರೂ ತಗ್ಗಿಸಲಿದೆ.
ಖಾಸಗಿ ತೈಲ ಕಂಪನಿಗಳು ಮೇ 23ರಂದು ಲೀಟರಿಗೆ ರು.7.54 ಬೆಲೆ ಏರಿಸಿ ಗ್ರಾಹಕರಿಗೆ ಭಾರೀ ಹೊಡೆತ ನೀಡಿತ್ತು. ನಂತರ ಕೇರಳ ಸರಕಾರ ಪೆಟ್ರೋಲ್ ಮೇಲಿನ ತೆರಿಗೆ ಇಳಿಸಿ ಮೊದಲ ದಿಟ್ಟ ಹೆಜ್ಜೆಯನ್ನು ಇಟ್ಟಿತ್ತು. ಈಗ ಕೇರಳ ಸರಕಾರದ ದಾರಿಯಲ್ಲಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಸರಕಾರ ಕೂಡ ಅಡಿಯಿಟ್ಟಿದೆ.
ಇಡೀ ದೇಶದಲ್ಲಿ ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಮಾತ್ರ ಇಲ್ಲಿಯವರೆಗೆ ತೆರಿಗೆ ಇಳಿಸಿ ಪೆಟ್ರೋಲ್ ದರ ಕಡಿಮೆ ಮಾಡುವ ಯಾವ ನಿರ್ಧಾರವನ್ನೂ ಪ್ರಕಟಿಸಿಲ್ಲ. ಕರ್ನಾಟಕದಲ್ಲಿ ವ್ಯಾಟ್ ಜೊತೆ ಪ್ರವೇಶ ತೆರಿಗೆ ಸೇರಿ ಶೇ.30ರಷ್ಟು ತೆರಿಗೆ ಗ್ರಾಹಕರ ಮೇಲೇ ಹೊರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ ರು.81.26. ಇದು ರಾಜ್ಯಕ್ಕೆ ಸಾಕಷ್ಟು ಆದಾಯ ಕೂಡ ತರುತ್ತಿರುವುದರಿಂದ ಮುಖ್ಯಮಂತ್ರಿಗಳು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ.
ಡೀಸೆಲ್, ಎಲ್ಪಿಜಿ ದರ ಏರಿಕೆ ಸದ್ಯಕ್ಕಿಲ್ಲ : ಪೆಟ್ರೋಲ್ ಬೆಲೆ ಏರಿಕೆ ಮತ್ತು ರುಪಾಯಿ ಮೌಲ್ಯ ಕುಸಿತದಿಂದಾಗಿ ದಿಕ್ಕೆಟ್ಟಿರುವ ಕೇಂದ್ರ ಸರಕಾರ ಹಣದುಬ್ಬರ ಹತ್ತಿಕ್ಕಲು ಸದ್ಯಕ್ಕೆ ಡೀಸೆಲ್, ಗೃಹ ಬಳಕೆಯ ಎಲ್ ಪಿಜಿ ಮತ್ತು ಸೀಮೆಎಣ್ಣೆ ದರವನ್ನು ಎರಿಸಲು ಚಿಂತಿಸುತ್ತಿಲ್ಲ ಎಂದು ಪೆಟ್ರೋಲಿಯಂ ಖಾತೆಯ ಸಚಿವ ಜೈಪಾಲ್ ರೆಡ್ಡಿ ಸೋಮವಾರ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications