ಕೆಐಎಡಿಬಿ ಹಗರಣ: ಯಡಿಯೂರಪ್ಪ ಮೇಲೆ ಚಾರ್ಜ್ ಶೀಟ್

ಕೆಐಎಡಿಬಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಹೊತ್ತಿರುವ ಯಡಿಯೂರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಲೋಕಾಯುಕ್ತ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ.
ದೋಷಾರೋಪ ವರದಿಯಲ್ಲಿ ಹೇಳಿರುವಂತೆ, 23 ಎಕರೆ ಉದ್ಯಮಿ ಅಲಂಪಾಷಾ ಅವರಿಗೆ ನೀಡಲಾಗಿತ್ತು. ಇದರಲ್ಲಿ KIADBಗೆ ಸೇರಿದ 20 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಲಾಗಿದೆ. ಕೈಗಾರಿಕಾ ಭೂಮಿಗೆ ತೆರಿಗೆ ಮನ್ನಾ ಮಾಡಿ, ಯಡಿಯುರಪ್ಪ ಅವರು ತಮ್ಮ ಅಪ್ತರಿಗ ಹಂಚಿಕೆ ಮಾಡಿದ್ದಾರೆ.
ಸಿಎಂ ಆಗಿದ್ದ ಯಡಿಯೂರಪ್ಪ ಅಂದಿನ ಕೈಗಾರಿಕಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಭೂಮಿಯನ್ನು ಅಕ್ರಮವಾಗಿ ಭೂಮಿಯನ್ನು ಪಡೆದಿದ್ದಾರೆ. ಈ ಪ್ರಕರಣದಲ್ಲಿ ಹಾಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಆರೋಪಿಯನ್ನಾಗಿಸಬೇಕು ಎಂದು ಉದ್ಯಮಿ ಅಲಂಪಾಷಾ ದೂರು ಸಲ್ಲಿಸಿದ್ದರು.
ಸುಮಾರು ಆರು ತಿಂಗಳ ಹಿಂದಿನ ಅರ್ಜಿಯನ್ನು ಕೈಗೆತ್ತಿಕೊಂಡ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಪೊಲೀಸರು ಸಲ್ಲಿಸಿದ ದೋಷಾರೋಪಣ ಪಟ್ಟಿಯನ್ನು ಸ್ವೀಕರಿಸಿದೆ. ಆದರೆ, ಹಾಲಿ ಕೈಗಾರಿಕಾ ಸಚಿವ ಮರುಗೇಶ್ ನಿರಾಣಿ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಲೋಕಾಯುಕ್ತ ಪೊಲೀಸರು ಸಮ್ಮತಿ ಸೂಚಿಸದೆ, ಪಟ್ಟಿಯಿಂದ ನಿರಾಣಿ ಹೆಸರು ಕೈ ಬಿಟ್ಟಿದೆ.
ಜೂನ್ 8ಕ್ಕ ಮುಂದಿನ ವಿಚಾರಣೆ ನಡೆಯಲಿದ್ದು, ಮುರುಗೇಶ್ ನಿರಾಣಿ ಅವರ ಹೆಸರನ್ನು ಕೂಡಾ ಚಾರ್ಚ್ ಶೀಟ್ ನಲ್ಲಿ ಸೇರಿಸುವಂತೆ ಕೋರಿ ಉದ್ಯಮಿ ಅಲಂಪಾಷಾ ಅವರು ಮತ್ತೊಂದು ಮನವಿಯನ್ನು ಕೋರ್ಟಿನಲ್ಲಿ ಸಲ್ಲಿಸಲಿದ್ದಾರೆ.
ಕೆಐಎಡಿಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಾ ಸುಬ್ರಮಣ್ಯ ನಾಯ್ಡು, ಕಟ್ಟಾ ಜಗದೀಶ್ ಹಾಗೂ ಇಟಾಸ್ಕಾ ಸಂಸ್ಥ ಎಂಡಿ ಶ್ರೀನಿವಾಸ್ ಅವರು ಹೈಕೋರ್ಟ್ ನಿಂದ ಮಧ್ಯಂತರ ಮತ್ತು ಷರತ್ತುಬದ್ಧ ಜಾಮೀನು ಪಡೆದಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ 1ನೇ ಶನಿವಾರ ಹಾಗೂ 3ನೇ ಶನಿವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಕಚೇರಿಗೆ ಹಾಜರಾಗಿ ಸಹಿ ಹಾಕುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications