ಸುಪ್ರೀಂನಲ್ಲಿ ಶಂಕರ್ ಬಿದರಿಗೆ ಮೊದಲ ಜಯ

ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಹಾಲಿ ಡಿಜಿ ಐಜಿಪಿ ಶಂಕರ್ ಬಿದರಿ ಅವರ ನೇಮಕಾತಿಯನ್ನು ರದ್ದುಗೊಳಿಸಿದ್ದು ಹೈಕೋರ್ಟ್ ಕೂಡಾ ಎತ್ತಿ ಹಿಡಿದಿತ್ತು. ಆದರೆ, ಶುಕ್ರವಾರ(ಜೂ.1) ಹೈ ಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಸಿಎಟಿ ವರದಿಯನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್, ಶಂಕರ್ ಬಿದರಿಯನ್ನು ನರರೂಪದ ರಕ್ಕಸ, ಸದ್ದಾಂ ಹುಸೇನ್, ಮುಹಮ್ಮರ್ ಗಡಾಫಿಗಿಂತ ಭೀಕರ ವ್ಯಕ್ತಿ ಎಂದು ವರದಿ ಆಧಾರದ ಮೇಲೆ ಕೋರ್ಟ್ ಹೇಳಿತ್ತು.
STF ಮುಖ್ಯಸ್ಥರಾಗಿದ್ದ ಬಿದರಿ ಅವರು ವಿಧವೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಈರಮ್ಮ ಎಂಬುವವರನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಪೈಶಾಚಿಕವಾಗಿ ವರ್ತಿಸಿದ ಎಸ್ ಟಿಎಫ್ ಪಡೆ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿದೆ ಎಂಬ ಆರೋಪದ ಬಗ್ಗೆ ಸ್ಪಷ್ಟನೆ ನೀಡುಂತೆ ಹೈಕೋರ್ಟ್ ಸೂಚಿಸಿತ್ತು. ಇದಕ್ಕೆ ಪ್ರತಿಯಾಗಿ ಬಿದರಿ ಅವರು ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿ, ಮಾನವ ಹಕ್ಕು ಉಲ್ಲಂಘನೆ ಆಗುವ ಯಾವ ಕೃತ್ಯವೂ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಮಾಧ್ಯಮಗಳಿಗೆ ನೋಟಿಸ್ : ಹೈಕೋರ್ಟ್ ತೀರ್ಪಿನ ಬಗ್ಗೆ ಅವಹೇಳನಕಾರಿ ಟೀಕೆ ಮಾಡಿರುವ ಆರೋಪದ ಮೇಲೆ 3 ಪತ್ರಿಕೆಗಳಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.
ವೀರಪ್ಪನ್ ಕಾರ್ಯಾಚರಣೆ ವೇಳೆ ಅಮಾಯಕ ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಅನಾಹುತಗಳನ್ನು ಮನಗಂಡ ನ್ಯಾಯಮೂರ್ತಿಗಳು, ತಮ್ಮ ತೀರ್ಪಿನಲ್ಲಿ 'ಇವೆಲ್ಲ ನಿಜವೇ ಆಗಿದ್ದರೆ ಬಿದರಿ ಅವರು ಗಡಾಫಿ, ಸದ್ದಾಂಗಿಂತ ಕಡೆ' ಎಂದಿದ್ದರು. ಆದರೆ ಪ್ರಮಾಣ ಪತ್ರದ ವಿಷಯ ಪ್ರಸ್ತಾಪಿಸದೆಯೇ ನ್ಯಾಯಮೂರ್ತಿಗಳೇ ಖುದ್ದಾಗಿ ಈ ರೀತಿ ಹೇಳಿದ್ದಾರೆ ಎಂಬಂತೆ ಅರ್ಥ ಕಲ್ಪಿಸಿ ಪತ್ರಿಕೆಗಳು ಸುದ್ದಿ ಪ್ರಕಟಿಸಿರುವುದು ಸರಿಯಲ್ಲ ಎಂದು ಆರೋಪಿಸಲಾಗಿದೆ.
ವೀರಪ್ಪನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರ್ ಬಿದರಿ ಅವರನ್ನು ನರರೂಪದ ರಕ್ಷಸ, ಗಡಾಫಿ ಎಂದು ಕರೆದಿರುವುದು ಸರಿಯಲ್ಲ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ಸೇವಾ ಹಿರಿತನ ಮತ್ತು ಉತ್ತಮ ಸೇವಾ ದಾಖಲೆಗಳ ಆಧಾರದ ಮೇಲೆ ಇನ್ಫಾಂಟ್ ಅವರಿಗೆ ಸಿಗಬೇಕಿದ್ದ ಸ್ಥಾನವನ್ನು ಸ್ವಜನಪಕ್ಷಪಾತ ಮಾಡಿ ಶಂಕರ್ ಬಿದರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಲಾಲ್ ರುಖಮಾ ಪಚಾವೋ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಗುರುವಾರ(ಮೇ.31) ಆದೇಶ ಹೊರಡಿಸಿತು. ಡಿಜಿ -ಐಜಿಪಿಯಾಗಿರುವ ಎ.ಆರ್. ಇನ್ಫಾಂಟ್ ಅವರು ಗುರುವಾರ ನಿವೃತ್ತಿಯಾದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications