ಕರ್ನಾಟಕಕ್ಕೆ ಮತ್ತೊಬ್ಬ ಸಾಂಗ್ಲಿಯಾನ ಆಗಿ ಪಚಾವೋ

'ನಾಲ್ಕು ವರ್ಷಗಳ ನಂತರ ಸಾರ್ವಜನಿಕ ಸೇವೆಗೆ ಮತ್ತೆ ತವರಿಗೆ ವಾಪಸ್ ಬಂದ ಹಾಗೆ ಅನ್ನಿಸುತ್ತಿದೆ. ನನ್ನ 30 ವರ್ಷಗಳ ಸೇವೆಯನ್ನು ಪರಿಗಣಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ನಾನು ಅಭಾರಿಯಾಗಿರುತ್ತೇನೆ' ಎಂದು ಪಚಾವೋ ತಿಳಿಸಿದರು.
ದೇಶದಲ್ಲೇ ಕರ್ನಾಟಕ ಪೊಲೀಸ್ ವ್ಯವಸ್ಥೆಗೆ ಉತ್ತಮ ಹೆಸರಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪ್ರಥಮ ಆದ್ಯತೆ ನೀಡಲಿದ್ದು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಇಲಾಖೆಯಲ್ಲಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಕ್ರಮ ಹಾಗೂ ಇಲಾಖೆಗೆ ಅಗತ್ಯವಿರುವ ವಾಹನಗಳು ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಕ್ರಮ ಕೈಗೊಳ್ಳುತ್ತೇನೆ.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ನೂತನ ಯೋಜನೆಗಳನ್ನು ಹಮ್ಮಿಕೊಳ್ಳುವ ಆಲೋಚನೆಯಲ್ಲಿದ್ದು, ಇಲಾಖೆಯ ಎಲ್ಲಾ ವಿಭಾಗಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಸಂಪೂರ್ಣ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಪಚುವೋ ಹೇಳಿದರು.
ಸಾಂಗ್ಲಿಯಾನ ಊರಿನಿಂದ ಬಂದ ಪಾಚಾವೋ: ಜನಪ್ರಿಯ ಪೊಲೀಸ್ ಅಧಿಕಾರಿ ಎಚ್ ಟಿ ಸಾಂಗ್ಲಿಯಾನ ನಂತರ ಮಿಂಜೋರಾಂನಿಂದ ಕರ್ನಾಟಕದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಎಲ್ ಆರ್ ಪಾಚಾವೋ ಎರಡನೇ ಅಧಿಕಾರಿಯಾಗಿದ್ದಾರೆ.
* 1955 ರ ಮಾ.1 ರಂದು ಮಿಜೋರಾಂನಲ್ಲಿ ಜನನ
* ಬಿಎ ಪದವೀಧರರು
* 1977ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪಚಾವೋ 1980ರಲ್ಲಿ ಮಧುಗಿರಿಯಲ್ಲಿ ಸಹಾಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು.
* 1983 ರಲ್ಲಿ ಕಾರಾವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 2 ವರ್ಷ
* ಸಿಎಆರ್ ಘಟಕದಲ್ಲಿ ಎಸ್ ಪಿ ನಂತರ ಲೋಕಾಯುಕ್ತ ಸಂಸ್ಥೆಯಲ್ಲಿ ಎಸ್ ಪಿ.
* 1988 ರಿಂದ 1991ರವರೆಗೆ ಮಿಜೋರಾಂಗೆ ನಿಯೋಜನೆ ಮೇಲೆ ತೆರಳಿದ್ದರು.
* 1992 ರಲ್ಲಿ ಕರ್ನಾಟಕಕ್ಕೆ ಮರಳಿ, ಗೃಹರಕ್ಷಕದಳ ಕಮಾಂಡೆಂಟ್ ಆಗಿದ್ದರು.
* ಭಯೋತ್ಪಾದನಾ ನಿಗ್ರಹ ದಳ ಐಜಿಪಿ, ಗುಪ್ತದಳ, ಅರಣ್ಯ ವಿಭಾಗದಲ್ಲಿ ಡಿಐಜಿಯಾಗಿದ್ದರು
* 1996 ರಿಂದ 97 ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದರು.
* ಪೊಲೀಸ್ ಆಡಳಿತ, ತರಬೇತಿ ವಿಭಾಗದ ಐಜಿಪಿ, ಈಶಾನ್ಯ ವಿಭಾಗದ ಐಜಿಪಿ, ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
* 2007ರಿಂದ 2012ರ ವರೆಗೆ ಮಿಜೋರಾಂ ರಾಜ್ಯದ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
* ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಹಾಗೂ ಮಿಜೋರಾಂ ಪೊಲೀಸ್ ವಿಶೇಷ ಕರ್ತವ್ಯ ಪದಕಗಳು ಇವರಿಗೆ ಸಂದಿದೆ. ಇದಲ್ಲದೆ ಮಿಜೋರಾಂ ಹಾಗೂ ಕರ್ನಾಟಕದ ಮಹಾ ನಿರ್ದೇಶಕ ಗಳಿಸಿ ಎರಡೂ ಕಡೆ ಡಿಜಿ ಐಜಿಪಿ ಆದ ಸಾಧನೆ ಮೆರೆದಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications