ಕರ್ನಾಟಕಕ್ಕೆ ಮತ್ತೊಬ್ಬ ಸಾಂಗ್ಲಿಯಾನ ಆಗಿ ಪಚಾವೋ

'ನಾಲ್ಕು ವರ್ಷಗಳ ನಂತರ ಸಾರ್ವಜನಿಕ ಸೇವೆಗೆ ಮತ್ತೆ ತವರಿಗೆ ವಾಪಸ್ ಬಂದ ಹಾಗೆ ಅನ್ನಿಸುತ್ತಿದೆ. ನನ್ನ 30 ವರ್ಷಗಳ ಸೇವೆಯನ್ನು ಪರಿಗಣಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ನಾನು ಅಭಾರಿಯಾಗಿರುತ್ತೇನೆ' ಎಂದು ಪಚಾವೋ ತಿಳಿಸಿದರು.
ದೇಶದಲ್ಲೇ ಕರ್ನಾಟಕ ಪೊಲೀಸ್ ವ್ಯವಸ್ಥೆಗೆ ಉತ್ತಮ ಹೆಸರಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪ್ರಥಮ ಆದ್ಯತೆ ನೀಡಲಿದ್ದು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಇಲಾಖೆಯಲ್ಲಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಕ್ರಮ ಹಾಗೂ ಇಲಾಖೆಗೆ ಅಗತ್ಯವಿರುವ ವಾಹನಗಳು ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಕ್ರಮ ಕೈಗೊಳ್ಳುತ್ತೇನೆ.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ನೂತನ ಯೋಜನೆಗಳನ್ನು ಹಮ್ಮಿಕೊಳ್ಳುವ ಆಲೋಚನೆಯಲ್ಲಿದ್ದು, ಇಲಾಖೆಯ ಎಲ್ಲಾ ವಿಭಾಗಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಸಂಪೂರ್ಣ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಪಚುವೋ ಹೇಳಿದರು.
ಸಾಂಗ್ಲಿಯಾನ ಊರಿನಿಂದ ಬಂದ ಪಾಚಾವೋ: ಜನಪ್ರಿಯ ಪೊಲೀಸ್ ಅಧಿಕಾರಿ ಎಚ್ ಟಿ ಸಾಂಗ್ಲಿಯಾನ ನಂತರ ಮಿಂಜೋರಾಂನಿಂದ ಕರ್ನಾಟಕದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಎಲ್ ಆರ್ ಪಾಚಾವೋ ಎರಡನೇ ಅಧಿಕಾರಿಯಾಗಿದ್ದಾರೆ.
* 1955 ರ ಮಾ.1 ರಂದು ಮಿಜೋರಾಂನಲ್ಲಿ ಜನನ
* ಬಿಎ ಪದವೀಧರರು
* 1977ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪಚಾವೋ 1980ರಲ್ಲಿ ಮಧುಗಿರಿಯಲ್ಲಿ ಸಹಾಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು.
* 1983 ರಲ್ಲಿ ಕಾರಾವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 2 ವರ್ಷ
* ಸಿಎಆರ್ ಘಟಕದಲ್ಲಿ ಎಸ್ ಪಿ ನಂತರ ಲೋಕಾಯುಕ್ತ ಸಂಸ್ಥೆಯಲ್ಲಿ ಎಸ್ ಪಿ.
* 1988 ರಿಂದ 1991ರವರೆಗೆ ಮಿಜೋರಾಂಗೆ ನಿಯೋಜನೆ ಮೇಲೆ ತೆರಳಿದ್ದರು.
* 1992 ರಲ್ಲಿ ಕರ್ನಾಟಕಕ್ಕೆ ಮರಳಿ, ಗೃಹರಕ್ಷಕದಳ ಕಮಾಂಡೆಂಟ್ ಆಗಿದ್ದರು.
* ಭಯೋತ್ಪಾದನಾ ನಿಗ್ರಹ ದಳ ಐಜಿಪಿ, ಗುಪ್ತದಳ, ಅರಣ್ಯ ವಿಭಾಗದಲ್ಲಿ ಡಿಐಜಿಯಾಗಿದ್ದರು
* 1996 ರಿಂದ 97 ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದರು.
* ಪೊಲೀಸ್ ಆಡಳಿತ, ತರಬೇತಿ ವಿಭಾಗದ ಐಜಿಪಿ, ಈಶಾನ್ಯ ವಿಭಾಗದ ಐಜಿಪಿ, ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
* 2007ರಿಂದ 2012ರ ವರೆಗೆ ಮಿಜೋರಾಂ ರಾಜ್ಯದ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
* ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಹಾಗೂ ಮಿಜೋರಾಂ ಪೊಲೀಸ್ ವಿಶೇಷ ಕರ್ತವ್ಯ ಪದಕಗಳು ಇವರಿಗೆ ಸಂದಿದೆ. ಇದಲ್ಲದೆ ಮಿಜೋರಾಂ ಹಾಗೂ ಕರ್ನಾಟಕದ ಮಹಾ ನಿರ್ದೇಶಕ ಗಳಿಸಿ ಎರಡೂ ಕಡೆ ಡಿಜಿ ಐಜಿಪಿ ಆದ ಸಾಧನೆ ಮೆರೆದಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications