ಸಿಟಿ ರವಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಐಟಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಆದಾಯ ತೆರಿಗೆ ಆಯುಕ್ತ ಪಳನಿವೇಲು ರಾಜು ನೇತೃತ್ವದಲ್ಲಿ ಏಕಕಾಲಕ್ಕೆ ಈ ದಾಳಿಗಳು ನಡೆಯುತ್ತಿವೆ. ನಾಲ್ಕಾರು ತಂಡಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ಈ ದಾಳಿ ನಡೆಸಿದ್ದಾರೆ.
ಆದರೆ 2009ರಲ್ಲಿ ಕೇವಲ 1.5 ಕೋಟಿ ರೂ. ಆಸ್ತಿವಂತರಾಗಿದ್ದ ಸಿಟಿ ರವಿ ಈಗ 60 ಕೋಟಿ ರುಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಸಿ ಕುಮಾರ್ ಎಂಬುವವರು ದೂರಿದ್ದಾರೆ.
ಶಾಸಕ ರವಿ ಪ್ರತಿಕ್ರಿಯೆ: 'ತಮ್ಮ ಬಾಡಿಗೆ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ. ನೇರವಾಗಿ ನನ್ನ ಮನೆಗಳ ಮೇಲೆ ದಾಳಿ ನಡೆದಿಲ್ಲ. ಬಾಡಿಗೆ ಮನೆಗಳಲ್ಲಿರುವವರನ್ನೂ ವಿಚಾರಿಸಿದ್ದೇನೆ. ಏನೂ ಸಮಸ್ಯೆಯಿಲ್ಲ ಎಂದಿದ್ದಾರೆ. ಇನ್ನು ಐಟಿ ಅಧಿಕಾರಿಗಳು ಇದುವರೆಗೆ ನನ್ನನ್ನೇನೂ ಸಂಪರ್ಕಿಸಿಲ್ಲ. ದಾಳಿಯಿಂದ ನಾನಂತೂ ವಿಚಲಿತನಾಗಿಲ್ಲ' ಎಂದು ಶಾಸಕ ರವಿ ಅವರು ಎಂದಿನಂತೆ ತಮ್ಮ ಹಾಸ್ಯಭರಿತ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕನಕರಾಜು ಅವರ ಮನೆಯ ಮೇಲೂ ಐಟಿ ದಾಳಿ ನಡೆದಿದೆ. ಬಿಜೆಪಿ ಮುಖಂಡ ಸುದರ್ಶನ್ ಅವರ ಫಾರಂ ಹೌಸ್ ಅವರ ಮೇಲೂ ಈ ದಾಳಿ ನಡೆದಿದೆ. ಶಾಸಕ ಸಿಟಿ ರವಿಗೆ ಸೇರಿದ ಚಿಕ್ಕಮಗಳೂರು ಹೊರವಲಯ ಆಲೇನಹಳ್ಳಿಯಲ್ಲಿರುವ ಫಾರಂ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ರವಿ ಅವರ ಆಪ್ತರಾದ ಕೇಶವರಾಜು, ಕೋಟೆ ಅನಿಲ್, ನಗರ ಸಭೆ ಸದಸ್ಯ ರಾಜಪ್ಪ ಮನೆಗಳ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಜೀವಮಾನದಲ್ಲಿ ಒಮ್ಮೆಯಾದರೂ ಮಂತ್ರಿ ಅನ್ನಿಸಿಕೊಳ್ಳಬೇಕು ಎಂಬ ಹಪಹಪಿಗೆ ಬಿದ್ದಿರುವ ಶಾಸಕ ಸಿಟಿ ರವಿ ಮತ್ತು ಅವರ ಪತ್ನಿಗೆ ಇತ್ತೀಚೆಗೆ ಭೂಹಗರಣಗಳು ಸುತ್ತಿಕೊಂಡಿವೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications