ಸಿಟಿ ರವಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಐಟಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಆದಾಯ ತೆರಿಗೆ ಆಯುಕ್ತ ಪಳನಿವೇಲು ರಾಜು ನೇತೃತ್ವದಲ್ಲಿ ಏಕಕಾಲಕ್ಕೆ ಈ ದಾಳಿಗಳು ನಡೆಯುತ್ತಿವೆ. ನಾಲ್ಕಾರು ತಂಡಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ಈ ದಾಳಿ ನಡೆಸಿದ್ದಾರೆ.
ಆದರೆ 2009ರಲ್ಲಿ ಕೇವಲ 1.5 ಕೋಟಿ ರೂ. ಆಸ್ತಿವಂತರಾಗಿದ್ದ ಸಿಟಿ ರವಿ ಈಗ 60 ಕೋಟಿ ರುಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಸಿ ಕುಮಾರ್ ಎಂಬುವವರು ದೂರಿದ್ದಾರೆ.
ಶಾಸಕ ರವಿ ಪ್ರತಿಕ್ರಿಯೆ: 'ತಮ್ಮ ಬಾಡಿಗೆ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ. ನೇರವಾಗಿ ನನ್ನ ಮನೆಗಳ ಮೇಲೆ ದಾಳಿ ನಡೆದಿಲ್ಲ. ಬಾಡಿಗೆ ಮನೆಗಳಲ್ಲಿರುವವರನ್ನೂ ವಿಚಾರಿಸಿದ್ದೇನೆ. ಏನೂ ಸಮಸ್ಯೆಯಿಲ್ಲ ಎಂದಿದ್ದಾರೆ. ಇನ್ನು ಐಟಿ ಅಧಿಕಾರಿಗಳು ಇದುವರೆಗೆ ನನ್ನನ್ನೇನೂ ಸಂಪರ್ಕಿಸಿಲ್ಲ. ದಾಳಿಯಿಂದ ನಾನಂತೂ ವಿಚಲಿತನಾಗಿಲ್ಲ' ಎಂದು ಶಾಸಕ ರವಿ ಅವರು ಎಂದಿನಂತೆ ತಮ್ಮ ಹಾಸ್ಯಭರಿತ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕನಕರಾಜು ಅವರ ಮನೆಯ ಮೇಲೂ ಐಟಿ ದಾಳಿ ನಡೆದಿದೆ. ಬಿಜೆಪಿ ಮುಖಂಡ ಸುದರ್ಶನ್ ಅವರ ಫಾರಂ ಹೌಸ್ ಅವರ ಮೇಲೂ ಈ ದಾಳಿ ನಡೆದಿದೆ. ಶಾಸಕ ಸಿಟಿ ರವಿಗೆ ಸೇರಿದ ಚಿಕ್ಕಮಗಳೂರು ಹೊರವಲಯ ಆಲೇನಹಳ್ಳಿಯಲ್ಲಿರುವ ಫಾರಂ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ರವಿ ಅವರ ಆಪ್ತರಾದ ಕೇಶವರಾಜು, ಕೋಟೆ ಅನಿಲ್, ನಗರ ಸಭೆ ಸದಸ್ಯ ರಾಜಪ್ಪ ಮನೆಗಳ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಜೀವಮಾನದಲ್ಲಿ ಒಮ್ಮೆಯಾದರೂ ಮಂತ್ರಿ ಅನ್ನಿಸಿಕೊಳ್ಳಬೇಕು ಎಂಬ ಹಪಹಪಿಗೆ ಬಿದ್ದಿರುವ ಶಾಸಕ ಸಿಟಿ ರವಿ ಮತ್ತು ಅವರ ಪತ್ನಿಗೆ ಇತ್ತೀಚೆಗೆ ಭೂಹಗರಣಗಳು ಸುತ್ತಿಕೊಂಡಿವೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications