ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಗನ್ ಕೇಸ್ : ಬಿಸಿಸಿಐ ಶ್ರೀನಿವಾಸನ್ ಗೆ ಸಿಬಿಐ ಸಮನ್ಸ್

By Mahesh
|
Google Oneindia Kannada News

CBI Summons N Srinivasan
ಹೈದರಾಬಾದ್, ಜೂ.8: ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಅನೇಕ ಗಣ್ಯರ ಹೆಸರುಗಳು ಬಹಿರಂಗಗೊಳ್ಳತೊಡಗಿದೆ. ಸಿಬಿಐ ತಂಡ ತನ್ನ ಮುಂದಿನ ದಾಳವನ್ನು ಉರುಳಿಸಿದ್ದು, ಬೋರ್ಡ್ ಆಫ್ ಕ್ರಿಕೆಟ್ ಇನ್ ಇಂಡಿಯಾ(BCCI) ಅಧ್ಯಕ್ಷ ಹಾಗೂ ಇಂಡಿಯಾ ಸಿಮೆಂಟ್ಸ್ ವ್ಯವಸ್ಥಾಪಕ ನಿರ್ದೇಶಕ ಎನ್ ಶ್ರೀನಿವಾಸನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಂಸ್ಥೆಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವ ಉದ್ಯಮಿಗಳ ಮೇಲೆ ಸಿಬಿಐ ಕಣ್ಣಿರಿಸಿದೆ. ಶ್ರೀನಿವಾಸನ್ ಅವರು ಜಗನ್ ಅವರ ಸಿಮೆಂಟ್ ಕಂಪನಿಯಲ್ಲಿ ತೊಡಗಿಸಿರುವ ಬಂಡವಾಳದ ಬಗ್ಗೆ ಸಿಬಿಐ ಪ್ರಶ್ನಿಸಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐಟಿ ಸಚಿವ ಪೊನ್ನಲಾ ಲಕ್ಷ್ಮಯ್ಯ ಅವರನ್ನು ಸಿಬಿಐ ಪ್ರಶ್ನಿಸಿದೆ. ವೈಎಸ್ ರಾಜಶೇಖರ ರೆಡ್ಡಿ ಅವರ ಅಧಿಕಾರವಿದ್ದ ಕಾಲದಲ್ಲಿ 2004-2009 ಸರ್ಕಾರಿ ಆದೇಶ ಹೊರಡಿಸಿದ ತಪ್ಪಿಗೆ ಲಕ್ಷ್ಮಯ್ಯ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ರಾಜಶೇಖರ್ ರೆಡ್ಡಿ ಕಾಲದಲ್ಲಿ ನೀರಾವರಿ ಸಚಿವರಾಗಿದ್ದ ಲಕ್ಷ್ಮಯ್ಯ ಅವರು ಸಿಮೆಂಟ್ ಕಂಪನಿಗಳಿಗೆ ಅಕ್ರಮವಾಗಿ ನೀರು ಸರಬರಾಜು ಮಾಡಿದ ಆರೋಪ ಹೊತ್ತಿದ್ದಾರೆ.

ಜಗನ್ ಮೋಹನ್ ರೆಡ್ಡಿ ಅಲ್ಲದೆ ಜಗನ್ ಅವರ ಆರ್ಥಿಕ ಸಲಹೆಗಾರ ವಿ ವಿಜಯ್ ಸಾಯಿ ರೆಡ್ಡಿ, ಮಾಜಿ ಆಂಧ್ರ ಸಚಿವ ಮೋಪಿದೇವಿ ವೆಂಕಟರಮಣ ರಾವ್, ಉದ್ಯಮಿ ನಿಮ್ಮಗಡ್ಡ ಪ್ರಸಾದ್ ಹಾಗೂ ಸರ್ಕಾರಿ ಅಧಿಕಾರಿ ಕೆವಿ ಬ್ರಹ್ಮಾನಂದ ರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಈ ನಡುವೆ ಜಗನ್ ಮೋಹನ್ ರೆಡ್ಡಿ ಅವರ ನ್ಯಾಯಾಂಗ ಬಂಧನ ಅವಧಿ ಜೂ.11ರ ತನಕ ಇರುವುದರಿಂದ ಜಗನ್ ಚಂಚಲಗುಡ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಐದು ದಿನಗಳ ಕಾಲ ಸಿಬಿಐ ವಶದಲ್ಲಿದ್ದ ಜಗನ್ ಅವರಿಗೆ ಗುರುವಾರ ಮುಕ್ತಿ ಸಿಕ್ಕಿತ್ತು. ಆದರೆ, ಇನ್ನೂ ಮೂರು ದಿನಗಳ ಕಾಲ ವಿಚಾರಣೆಗೆ ಜಗನ್ ಅವರನ್ನು ಒದಗಿಸುವಂತೆ ಸಿಬಿಐ ತಂಡ ಕೋರ್ಟಿನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

English summary
The Central Bureau of Investigation (CBI) that is currently investigating the case has summoned Board of Control for Cricket in India (BCCI) chief and India Cements MD N Srinivasan in connection with the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X