ಕ್ಯಾಲಿಫ್: ಮಾಜಿ ಸೇನಾಧಿಕಾರಿ ಸಂಸಾರ ದುರಂತ ಸಾವು

47 ವರ್ಷದ ಅವತಾರ್ ಸಿಂಗ್ ಎಂಬವರು ಕ್ಯಾಲಿಫೋರ್ನಿಯಾದ ತಮ್ಮ ನಿವಾಸದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಿನ ಜಾವ 6.15ರ ಸುಮಾರಿಗೆ ಪೊಲೀಸ್ ಠಾಣೆ (Selma police) ಗೆ ಕರೆ ಮಾಡಿ, ತನ್ನ ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದು, ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದರು. ಈತ ಕಾಶ್ಮೀರಿ ಮಾನವ ಹಕ್ಕುಗಳ ವಕೀಲರೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದರು.
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಮೇಲೆ ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3 ಹಾಗೂ 15 ವರ್ಷದ ಇಬ್ಬರು ಮಕ್ಕಳ ಪೈಕಿ 15 ವರ್ಷದ ಯುವಕ ತೀವ್ರವಾಗಿ ಗಾಯಗೊಂಡಿದ್ದ ಎಂದು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಪೊಲೀಸರು (sheriff's SWAT team ) ಹೇಳಿದ್ದಾರೆ. ಜೀವನ್ಮರಣ ಹೋರಾಟ ನಡೆಸುತ್ತಿರುವ ಅವನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿ ತಿಳಿಸಿದೆ.
ಮಾಜಿ ಸೇನಾಧಿಕಾರಿ ಅವತಾರ್ ಸಿಂಗ್ ಇದ್ದಕ್ಕಿದ್ದಂತೆ ಈ ರೀತಿ ವರ್ತಿಸಲು ಕಾರಣವೇನೆಂದು ತಿಳಿದುಬಂದಿಲ್ಲ. ಕೊಲೆಯ ಉದ್ದೇಶ ಕೂಡಾ ಸ್ಪಷ್ಟವಾಗಿಲ್ಲ. Selma police ರಿಂದ ಮಾಹಿತಿ ಪಡೆದಿರುವ Fresno County ಪೊಲೀಸ್ ಅಧಿಕಾರಿಗಳು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.
1990ರಲ್ಲಿ ಭಾರತೀಯ ಸೇನೆಯ ಮೇಜರ್ ಆಗಿದ್ದ ಸಿಂಗ್, 1996ರ ಮಾರ್ಚ್ ನಲ್ಲಿ ಮಾನವ ಹಕ್ಕುಗಳ ವಕೀಲ ಜಲೀಲ್ ಅಂದ್ರಾಬಿ ಎಂಬವರನ್ನು ಶ್ರೀನಗರದಲ್ಲಿ ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದರು. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications