ಆದಿಚುಂಚನಗಿರಿಶ್ರೀ ಮೇಲೆ ಲೋಕಾಯುಕ್ತ ತನಿಖೆ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 166(3)ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮ ಭೂಮಿ ಮಾರಾಟದ ಆರೋಪ ಹೊತ್ತಿರುವ ಬಾಲಗಂಗಾಧರನಾಥ ಸ್ವಾಮೀಜಿ, ವೀರಭದ್ರಯ್ಯ, ಪ್ರಶಾಂತನಾಥ ಸ್ವಾಮೀಜಿ ಅವರ ಮೇಲೆ ತನಿಖೆಗೆ ಮಂಗಳವಾರ(ಜೂ.12) ರಂದು ಲೋಕಾಯುಕ್ತ ವಿಶೇಷ ನ್ಯಾಯಪೀಠ ಆದೇಶಿಸಿದೆ.
ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಲಕ್ಷ್ಮಿನಾರಾಯಣ ಎಂಬುವರು ಲೋಕಾಯುಕ್ತ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದಾರೆ. ಅಲ್ಲದೆ, 23 ಕ್ಕೂ ಅಧಿಕ ಜನರ ಮೇಲೆ ದೂರು ದಾಖಲಾಗಿಸಲಾಗಿದೆ. ಆರಂಭದಲ್ಲಿ ಆರೋಪ ಪಟ್ಟಿಯಲ್ಲಿ ಬಿಬಿಎಂಪಿ ಅಧಿಕಾರಿ ಶಂಕರಲಿಂಗೇ ಗೌಡ ಅವರ ಹೆಸರು ಕಾಣಿಸಿಕೊಂಡಿತ್ತು.
ಆದರೆ, ದೂರುದಾರ ಲಕ್ಷ್ಮಿನಾರಾಯಣ ಅವರು ಕೊನೆ ಕ್ಷಣದಲ್ಲಿ ಪಟ್ಟಿ ತಿದ್ದುಪಡಿ ಮಾಡಿ ಆರೋಪಿಗಳ ಪಟ್ಟಿ ಕೋರ್ಟಿಗೆ ಸಲ್ಲಿಸಿದರು.
ಲಕ್ಷ್ಮಿನಾರಾಯಣ ಅವರು ನೀಡಿದ ದೂರನ್ನು ಸ್ವೀಕರಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮೇ.29ಕ್ಕೆ ಮುಂದೂಡಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಬೆಂಗಳೂರು ದಕ್ಷಿಣ ಭಾಗದಲ್ಲಿರುವ ಹುಳಿಮಾವು ಬಳಿ ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದ ರಾಮಲಿಂಗೇಶ್ವರ ಟ್ರಸ್ಟ್ ಗೆ 15 ಎಕರೆ ಭೂಮಿ ನೀಡಲಾಗಿತ್ತು.
ಅದರೆ ರಾಮಲಿಂಗೇಶ್ವರ ಟ್ರಸ್ಟ್ ನಿಂದ ಸದರಿ ಭೂಮಿಯನ್ನು ಪಡೆದ ಆದಿಚುಂಚನಗಿರಿ ಸ್ವಾಮೀಜಿ ಅವರು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಾನೂನು ಬಾಹಿರವಾಗಿ ಟ್ರಸ್ಟ್ ನಿಂದ ಭೂಮಿ ವರ್ಗಾವಣೆಯಾಗಿದೆ. ಈ ಅಕ್ರಮದಲ್ಲಿ ಸುಮಾರು 27ಕ್ಕೂ ಹೆಚ್ಚು ಜನ ಆರೋಪಿಗಳಿದ್ದಾರೆ. 5 ಜನ ಐಎಎಸ್ ಅಧಿಕಾರಿಗಳಿದ್ದಾರೆ ಎಂದು ತಿಳಿದು ಬಂದಿದೆ.
ಆದಿಚುಂಚನಗಿರಿ ಟ್ರಸ್ಟ್ ನಿಂದ ಶಾಲೆ, ಆಸ್ಪತ್ರೆ, ಕಾಲೇಜುಗಳನ್ನು ನಡೆಸಿಕೊಂಡು ಬರಲಾಗಿದ್ದು, ಎಲ್ಲೂ ಅಕ್ರಮ ನಡೆದಿಲ್ಲ. ಈ ಆರೋಪದಲ್ಲಿ ಹುರುಳಿಲ್ಲ ಎಂದು ಸ್ವಾಮೀಜಿ ಆಪ್ತರು ಪ್ರತಿಕ್ರಿಯಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications