ಬಿಇಎಂಎಲ್ ಮುಖ್ಯಸ್ಥ ವಿಆರ್ ಎಸ್ ನಟರಾಜನ್ ಅಮಾನತು

ಟಟ್ರಾ ಟ್ರೆಕ್ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಟರಾಜನ್ ಅವರ ಮೇಲೆ ಸಿಬಿಐ ಎಫ್ ಐಆರ್ ದಾಖಲಿಸಿದ ಮೇಲೆ ನಟರಾಜನ್ ಅವರ ಅಮಾನತಿಗೆ ಒತ್ತಡ ಹೆಚ್ಚಿತ್ತು. ಬೆಮೆಲ್ ಮುಖ್ಯಸ್ಥರನ್ನು ಅಮಾನತುಗೊಳಿಸುವಂತೆ ರಕ್ಷಣಾ ಸಚಿವಾಲಯಕ್ಕೆ ಸಿಬಿಐ ಕೋರಿತ್ತು. ಅದರಂತೆ ನಟರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ವಿಆರ್ ಎಸ್ ನಟರಾಜನ್ ಅವರ ಜಾಗದಲ್ಲಿ ಬೆಮೆಲ್ ನ ಹಿರಿಯ ನಿರ್ದೇಶಕ ಪಿ. ದ್ವಾರಕನಾಥ್ ಅವರನ್ನು ಸಿಎಂಡಿ ಆಗಿ ಸರ್ಕಾರ ನೇಮಕ ಮಾಡಿದೆ.
ಕಳಪೆ ಗುಣಮಟ್ಟದ ಟಟ್ರಾ ಟ್ರಕ್ಸ್ ಅನ್ನು ಸೇನೆಗೆ ಖರೀದಿಸುವ ಹಿನ್ನೆಲೆಯಲ್ಲಿ 14 ಕೋಟಿ ರು ಲಂಚದ ಆಮಿಷ ಒಡ್ಡಿದ್ದರು ಎಂದು ಜನರಲ್ ಸಿಂಗ್ ಅವರು ಅವ್ಯವಹಾರವನ್ನು ಬಯಲಿಗೆಳೆದಿದ್ದರು.
ನಟರಾಜನ್ ಪ್ರತಿಕ್ರಿಯೆ: ಜನರಲ್ ವಿಕೆ ಸಿಂಗ್ ಅವರು ಬೆಮೆಲ್ ನ ಟಟ್ರಾ ಟ್ರಕ್ಸ್ ಖರೀದಿ ಬಗ್ಗೆ ಮಾಡಿರುವ ಆರೋಪ ಎಲ್ಲವೂ ಸತ್ಯಕ್ಕೆ ದೂರ. ಲಂಚ ಆಮಿಷ ಹೇಳಿಕೆ ನೀಡಿರುವ ಜನರಲ್ ಸಿಂಗ್ ಅವರು ಕ್ಷಮಾಪಣೆ ಕೋರಬೇಕು. ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸುತ್ತೇನೆ ಎಂದು ಬೆಮೆಲ್ ನ ಮಾಜಿ ಮುಖ್ಯಸ್ಥೆ ವಿಆರ್ ಎಸ್ ನಟರಾಜನ್ ಸವಾಲೆಸೆದಿದ್ದಾರೆ.
ಕೇಸ್ ಇತಿಹಾಸ: ಟಟ್ರಾ ಟ್ರೆಕ್ ಖರೀದಿ 1.4 ಲಕ್ಷ ಅವ್ಯವಹಾರ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ (ಏ.19) ಬಿಇಎಂಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಸ್ಥ ವಿಆರ್ ಎಸ್ ನಟರಾಜನ್ ಅವರ ಮೇಲೆ ಎಫ್ ಐಆರ್ ದಾಖಲಿಸಿದರು.
ನಟರಾಜನ್ ಅವರ ಮನೆ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಕೊಯಮತ್ತೂರು ನಿವಾಸ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವೆಕ್ಟ್ರಾ ಅಧ್ಯಕ್ಷ ರವೀಂದರ್ ರಿಷಿ ಹಾಗೂ ಬಿಇಎಂಎಲ್ ಮಾಜಿ ನಿರ್ದೇಶಕ(ರಕ್ಷಣಾ ಸರಬರಾಜು) ವಿ ಮೋಹನ್ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಒಳಪಡಿಸಿತ್ತು.
ಸಿಬಿಐನ ನಾಲ್ಕು ಅಧಿಕಾರಿಗಳು ಇಂದಿರಾನಗರದ ನಟರಾಜನ್ ಅವರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ಸಂಗ್ರಹಿಸಿದೆ. ನಟರಾಜನ್ ಅವರನ್ನು ಒಂದು ಸುತ್ತಿನ ವಿಚಾರಣೆಗೆ ಒಳಪಡಿಸಲಾಗಿತ್ತು. ಅಗತ್ಯ ಬಿದ್ದರೆ ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ ಎಂದು ಸಿಬಿಐ ಮೂಲಗಳು ಹೇಳಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications