ಸೋಮಾರಿ ಮತದಾರರು ಹಾಗೂ ಸಮರ್ಥ ಅಭ್ಯರ್ಥಿ ಸೋಲು

ಬೆಂಗಳೂರು ಪದವೀಧರ ಕ್ಷೇತ್ರದ 15,000 ಮತದಾರರನ್ನು ಜಾಗೃತಗೊಳಿಸಿದ್ದ ಅಶ್ವಿನ್ ಅವರಿಗೆ ಕೇವಲ 4,349 ಮತಗಳು ಲಭಿಸಿದೆ. ಇದರಲ್ಲಿ 4,088 ಮೊದಲ ಪ್ರಾಶಸ್ತ್ಯ ಮತಗಳು ಸೇರಿದೆ. ವಿಜೇತ ಅಭ್ಯರ್ಥಿ ರಾಮಚಂದ್ರಗೌಡ ಅವರಿಗೆ 6,521 ಮೊದಲ ಪ್ರಾಶಸ್ತ್ಯ ಮತಗಳು ಲಭಿಸಿದ್ದು ಗಮನಾರ್ಹ.
ಮಹೇಶ್ ಅವರು ನೋಂದಾಯಿಸಿದ್ದ 15,000 ಪದವೀಧರರಲ್ಲಿ ಕೇವಲ 4 ಸಾವಿರ ಜನ ಬಂದು ಮತ ಚಲಾಯಿಸಿದ್ದು ಅಶ್ವಿನ್ ಗೆ ಮುಳುವಾಗಿದೆ.
ಎರಡನೇ ಸ್ಥಾನ ಪಡೆದ ಅಭ್ಯರ್ಥಿ ಎ ದೇವೇಗೌಡ ಅವರು 242 ಮತಗಳ ಅಂತರದಿಂದ ಸೋಲುಂಡಿದ್ದು ಗಮನಿಸಿದರೆ, ಮಹೇಶ್ ಅವರು ನೀಡಿದ ಪೈಪೋಟಿ ಅರ್ಥ ಮಾಡಿಕೊಳ್ಳಬಹುದು.
ಬೆಂಗಳೂರಿಗರದ್ದು ಹುಸಿ ಹೋರಾಟವೇ? : ಭ್ರಷ್ಟಾಚಾರ ವಿರುದ್ಧ ಅಣ್ಣಾ ಹಜಾರೆ ಅವರು ಬೆಂಗಳೂರಿನಲ್ಲಿ ಆಂದೋಲನ ಕೈಗೊಂಡಾಗ, ವಾರಾಂತ್ಯದಲ್ಲಿ ಮುಗಿಬಿದ್ದು ಬೆಂಗಳೂರಿಗರು ಜಮಾವಣೆಗೊಳ್ಳುತ್ತಿದ್ದರು. ಆದರೆ, ಟೀಂ ಅಣ್ಣಾ ಬೆಂಬಲಿತ ಅಭ್ಯರ್ಥಿ ಚುನಾವಣೆಗೆ ನಿಂತರೆ ಬೆಂಬಲಿಸುವ ಬದಲು ವಾರಾಂತ್ಯದ ಸುಖ ಕಾಣುತ್ತಾ ಪದವೀಧರ ಮತದಾರರು ಮತಗಟ್ಟೆಯಿಂದ ದೂರ ಉಳಿದಿದ್ದು ದುರ್ದೈವ.
ನಾಗರೀಕ ಸಮಸ್ಯೆಗಳು ಬಂದಾಗ ಒಕ್ಕೊರಲ ದನಿ ಏರಿಸುವ ಬೆಂಗಳೂರಿಗರು ಸಮಸ್ಯೆ ಪರ ಹೋರಾಟ ನಡೆಸುವ ಸಮರ್ಥ ಅಭ್ಯರ್ಥಿಯನ್ನು ಬೆಂಬಲಿಸುವ ಅವಕಾಶ ತಪ್ಪಿಸಿಕೊಂಡಿದ್ದಾರೆ. ಬದಲಾವಣೆ ಬೇಕು ಎನ್ನುವ ಜನರು ಬೆಂಬಲ ನೀಡುವುದನ್ನು ಕಲಿತರೆ ಒಳ್ಳೆಯದು ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕಿದೆ.
ಅಶ್ವಿನ್ ಮಹೇಶ್ ಯಾರು?: ಖಗೋಳ ಹಾಗೂ ವಾಯುಮಂಡಲ ವಿಜ್ಞಾನಿಯಾಗಿ ತರಬೇತಿ ಪಡೆದಿರುವ ಡಾ. ಅಶ್ವಿನ್ ಮಹೇಶ್ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಡಾ. ಮಹೇಶ್ ತಮ್ಮ ವೃತ್ತಿ ಜೀವನವನ್ನು ನಕ್ಷತ್ರಗಳ ರಚನೆ, ಜಾಗತಿಕ ಹವಾಮಾನ ಬದಲಾವಣೆ, ನಗರೀಕರಣ ಹಾಗೂ ಸಾರ್ವಜನಿಕ ಸಾರಿಗೆ ಮುಂತಾದ ವಿಷಯಗಳ ಕುರಿತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ ಅವರು ಸಂಶೋಧನಕಾರರಾಗಿ Centre of Excellence in Urban Governance, IIMB, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ABIDE ಸದಸ್ಯರಾಗಿ ಡಾ. ಅಶ್ವಿನ್ ಮಹೇಶ್ ಅವರು ಬೆಂಗಳೂರಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಪ್ರಮುಖವಾಗಿ ನಗರ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಇವರು ಪರಿಚಯಿಸಿದ ಬಿಗ್10/ಬಿಗ್ಸರ್ಕಲ್ ಬಸ್ಸುಗಳು ಜನಪ್ರಿಯವಾಗಿವೆ.
ಬೆಂಗಳೂರು ಸಂಚಾರ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಡೆಸಲು ದೇಶದಲ್ಲೇ ಪ್ರಥಮ ಬಾರಿಗೆ ಉತ್ಕೃಷ್ಟ ಸಂಚಾರ ನಿರ್ವಹಣಾ ಕೊಠಡಿಯನ್ನು ಸ್ಥಾಪಿಸುವಲ್ಲಿ ನೆರವಾಗಿದ್ದಾರೆ ಮತ್ತು ತಮ್ಮ ಮ್ಯಾಪಯುನಿಟಿ ಕಂಪನಿಯಿಂದ ಮಾಹಿತಿ ತಂತ್ರಜ್ಞಾನದ ನೆರವನ್ನು ನೀಡಿದ್ದಾರೆ. ಇವರ ಸಾಮಾಜಿಕ ಕೊಡುಗೆಯನ್ನು ಗುರುತಿಸಿ 2009ರಲ್ಲಿ ಸಾಮಾಜಿಕ ಉದ್ಯಮಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಶೋಕಾ ಫೇಲೊ ಗೌರವ ದೊರೆತಿದೆ.
ಡಾ. ಅಶ್ವಿನ್ ಅವರು ಭ್ರಷ್ಟಾಚಾರದ ವಿರುದ್ಧ ಭಾರತ (India Against Corruption)ದಲ್ಲಿ ಕರ್ನಾಟಕದ ಧ್ವನಿಯಾಗಿ ಹೋರಾಟ ಮಾಡಿದ್ದಾರೆ ಮತ್ತು ಕರ್ನಾಟಕದಲ್ಲಿ 'ಭ್ರಷ್ಟಾಚಾರ ಸಾಕು' ಚಳವಳಿಯನ್ನು ಪ್ರಾರಂಭಿಸಿದವರಲ್ಲಿ ಒಬ್ಬರಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications