ಸೋಮಾರಿ ಮತದಾರರು ಹಾಗೂ ಸಮರ್ಥ ಅಭ್ಯರ್ಥಿ ಸೋಲು

ಬೆಂಗಳೂರು ಪದವೀಧರ ಕ್ಷೇತ್ರದ 15,000 ಮತದಾರರನ್ನು ಜಾಗೃತಗೊಳಿಸಿದ್ದ ಅಶ್ವಿನ್ ಅವರಿಗೆ ಕೇವಲ 4,349 ಮತಗಳು ಲಭಿಸಿದೆ. ಇದರಲ್ಲಿ 4,088 ಮೊದಲ ಪ್ರಾಶಸ್ತ್ಯ ಮತಗಳು ಸೇರಿದೆ. ವಿಜೇತ ಅಭ್ಯರ್ಥಿ ರಾಮಚಂದ್ರಗೌಡ ಅವರಿಗೆ 6,521 ಮೊದಲ ಪ್ರಾಶಸ್ತ್ಯ ಮತಗಳು ಲಭಿಸಿದ್ದು ಗಮನಾರ್ಹ.
ಮಹೇಶ್ ಅವರು ನೋಂದಾಯಿಸಿದ್ದ 15,000 ಪದವೀಧರರಲ್ಲಿ ಕೇವಲ 4 ಸಾವಿರ ಜನ ಬಂದು ಮತ ಚಲಾಯಿಸಿದ್ದು ಅಶ್ವಿನ್ ಗೆ ಮುಳುವಾಗಿದೆ.
ಎರಡನೇ ಸ್ಥಾನ ಪಡೆದ ಅಭ್ಯರ್ಥಿ ಎ ದೇವೇಗೌಡ ಅವರು 242 ಮತಗಳ ಅಂತರದಿಂದ ಸೋಲುಂಡಿದ್ದು ಗಮನಿಸಿದರೆ, ಮಹೇಶ್ ಅವರು ನೀಡಿದ ಪೈಪೋಟಿ ಅರ್ಥ ಮಾಡಿಕೊಳ್ಳಬಹುದು.
ಬೆಂಗಳೂರಿಗರದ್ದು ಹುಸಿ ಹೋರಾಟವೇ? : ಭ್ರಷ್ಟಾಚಾರ ವಿರುದ್ಧ ಅಣ್ಣಾ ಹಜಾರೆ ಅವರು ಬೆಂಗಳೂರಿನಲ್ಲಿ ಆಂದೋಲನ ಕೈಗೊಂಡಾಗ, ವಾರಾಂತ್ಯದಲ್ಲಿ ಮುಗಿಬಿದ್ದು ಬೆಂಗಳೂರಿಗರು ಜಮಾವಣೆಗೊಳ್ಳುತ್ತಿದ್ದರು. ಆದರೆ, ಟೀಂ ಅಣ್ಣಾ ಬೆಂಬಲಿತ ಅಭ್ಯರ್ಥಿ ಚುನಾವಣೆಗೆ ನಿಂತರೆ ಬೆಂಬಲಿಸುವ ಬದಲು ವಾರಾಂತ್ಯದ ಸುಖ ಕಾಣುತ್ತಾ ಪದವೀಧರ ಮತದಾರರು ಮತಗಟ್ಟೆಯಿಂದ ದೂರ ಉಳಿದಿದ್ದು ದುರ್ದೈವ.
ನಾಗರೀಕ ಸಮಸ್ಯೆಗಳು ಬಂದಾಗ ಒಕ್ಕೊರಲ ದನಿ ಏರಿಸುವ ಬೆಂಗಳೂರಿಗರು ಸಮಸ್ಯೆ ಪರ ಹೋರಾಟ ನಡೆಸುವ ಸಮರ್ಥ ಅಭ್ಯರ್ಥಿಯನ್ನು ಬೆಂಬಲಿಸುವ ಅವಕಾಶ ತಪ್ಪಿಸಿಕೊಂಡಿದ್ದಾರೆ. ಬದಲಾವಣೆ ಬೇಕು ಎನ್ನುವ ಜನರು ಬೆಂಬಲ ನೀಡುವುದನ್ನು ಕಲಿತರೆ ಒಳ್ಳೆಯದು ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕಿದೆ.
ಅಶ್ವಿನ್ ಮಹೇಶ್ ಯಾರು?: ಖಗೋಳ ಹಾಗೂ ವಾಯುಮಂಡಲ ವಿಜ್ಞಾನಿಯಾಗಿ ತರಬೇತಿ ಪಡೆದಿರುವ ಡಾ. ಅಶ್ವಿನ್ ಮಹೇಶ್ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಡಾ. ಮಹೇಶ್ ತಮ್ಮ ವೃತ್ತಿ ಜೀವನವನ್ನು ನಕ್ಷತ್ರಗಳ ರಚನೆ, ಜಾಗತಿಕ ಹವಾಮಾನ ಬದಲಾವಣೆ, ನಗರೀಕರಣ ಹಾಗೂ ಸಾರ್ವಜನಿಕ ಸಾರಿಗೆ ಮುಂತಾದ ವಿಷಯಗಳ ಕುರಿತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ ಅವರು ಸಂಶೋಧನಕಾರರಾಗಿ Centre of Excellence in Urban Governance, IIMB, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ABIDE ಸದಸ್ಯರಾಗಿ ಡಾ. ಅಶ್ವಿನ್ ಮಹೇಶ್ ಅವರು ಬೆಂಗಳೂರಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಪ್ರಮುಖವಾಗಿ ನಗರ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಇವರು ಪರಿಚಯಿಸಿದ ಬಿಗ್10/ಬಿಗ್ಸರ್ಕಲ್ ಬಸ್ಸುಗಳು ಜನಪ್ರಿಯವಾಗಿವೆ.
ಬೆಂಗಳೂರು ಸಂಚಾರ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಡೆಸಲು ದೇಶದಲ್ಲೇ ಪ್ರಥಮ ಬಾರಿಗೆ ಉತ್ಕೃಷ್ಟ ಸಂಚಾರ ನಿರ್ವಹಣಾ ಕೊಠಡಿಯನ್ನು ಸ್ಥಾಪಿಸುವಲ್ಲಿ ನೆರವಾಗಿದ್ದಾರೆ ಮತ್ತು ತಮ್ಮ ಮ್ಯಾಪಯುನಿಟಿ ಕಂಪನಿಯಿಂದ ಮಾಹಿತಿ ತಂತ್ರಜ್ಞಾನದ ನೆರವನ್ನು ನೀಡಿದ್ದಾರೆ. ಇವರ ಸಾಮಾಜಿಕ ಕೊಡುಗೆಯನ್ನು ಗುರುತಿಸಿ 2009ರಲ್ಲಿ ಸಾಮಾಜಿಕ ಉದ್ಯಮಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಶೋಕಾ ಫೇಲೊ ಗೌರವ ದೊರೆತಿದೆ.
ಡಾ. ಅಶ್ವಿನ್ ಅವರು ಭ್ರಷ್ಟಾಚಾರದ ವಿರುದ್ಧ ಭಾರತ (India Against Corruption)ದಲ್ಲಿ ಕರ್ನಾಟಕದ ಧ್ವನಿಯಾಗಿ ಹೋರಾಟ ಮಾಡಿದ್ದಾರೆ ಮತ್ತು ಕರ್ನಾಟಕದಲ್ಲಿ 'ಭ್ರಷ್ಟಾಚಾರ ಸಾಕು' ಚಳವಳಿಯನ್ನು ಪ್ರಾರಂಭಿಸಿದವರಲ್ಲಿ ಒಬ್ಬರಾಗಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications