ದಕ್ಷ ಸಬ್ಇನ್ಸ್ಪೆಕ್ಟರ್ ದಯಾನಾಯಕ್ ಮತ್ತೆ ಡ್ಯೂಟಿಗೆ

ಅಕ್ರಮ ಆಸ್ತಿ ಎಂಬ ಭೂತನರ್ತನಕ್ಕೆ ಸಿಕ್ಕಿ ಮಹಾಮಹಿಮ ಜನಪ್ರತಿನಿಧಿಗಳು ಹೈರಾಣಗೊಳ್ಳುತ್ತಿರುವ ಈಗಿನ ಕಾಲಮಾನದಲ್ಲಿ ಒಬ್ಬ ಖಡಕ್ ಸರಕಾರಿ ಸೇವಕ ದಯಾನಾಯಕ ತಮ್ಮ ಬೆನ್ನುಹತ್ತಿದ್ದ ಅಕ್ರಮ ಆಸ್ತಿ ಪೆಡಂಭೂತವನ್ನು ಕಿತ್ತೊಗೆಯುವಲ್ಲಿ ಯಶಸ್ವಿಯಾಗಿದ್ದು, ನಿನ್ನೆಯಿಂದ (ಜೂನ್ 16) ಡ್ಯೂಟಿಗೆ ರಿಪೋರ್ಟ್ ಮಾಡಿಕೊಂಡಿದ್ದಾರೆ.
'ಎನ್ ಕೌಂಟರ್ ಸ್ಪೆಷಲಿಸ್ಟ್' ದಯಾನಾಯಕ್ ಅವರು ಸದ್ಯಕ್ಕೆ ಇಲಾಖೆಯ ಸ್ಥಳೀಯ ಸಶಸ್ತ್ರ ವಿಭಾಗದಲ್ಲಿ ಸೇವೆಗೆ ಹಾಜರಾದರು. ಅಂದಹಾಗೆ, ಸೇವೆಗೆ ಮರುಭರ್ತಿಯಾಗುವ ಬಗ್ಗೆ ಶನಿವಾರವಷ್ಟೇ ದಯಾನಾಯಕ್ ಗೆ ಇಲಾಖೆಯು ಆದೇಶ ಹೊರಡಿಸಿತ್ತು.
'ದೇವರು ನನ್ನ ಕಡೆಗಿದ್ದಾನೆ. ಮತ್ತೆ ಸೇವೆಗೆ ಹಾಜರಾಗಿದ್ದೇನೆ. ಉಳಿದ 18 ವರ್ಷಗಳ ಸೇವೆಯನ್ನು ಈ ಹಿಂದೆ ನಿರ್ವಹಿಸಿದಂತೆಯೇ ಪ್ರಮಾಣಿಕತೆಯಿಂದ ನಿಭಾಯಿಸುವೆ ಎಂದು ಸಂತಸದ ಚಿಲುಮೆಯಂತಿದ್ದ ದಯಾನಾಯಕ್ ಪ್ರತಿಕ್ರಿಯಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಮೇಲೆ 2006ರ ಜನವರಿಯಲ್ಲಿ ಮಹಾರಾಷ್ಟ್ರದ ಭ್ರಷ್ಟಾಚಾರ ನಿಗ್ರಹ ದಳ ನಾಯಕ್ ಅವರನ್ನು ಬಂಧಿಸಿತ್ತು. ಅದಾಗುತ್ತಿದ್ದಂತೆ ದಯಾನಾಯಕ್ ಅವರನ್ನು ಸೇವೆಯಿಂದ ವಜಾಮಾಡಲಾಗಿತ್ತು.
'ದಯಾನಾಯಕ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಆದ್ದರಿಂದ ಅವರನ್ನು ಮತ್ತೆ ಸೇವೆಗೆ ತೆಗೆದುಕೊಳ್ಳಬಹುದು ಎಂದು ಮ್ಯಾಜಿಸ್ಟ್ರೇಟ್ ಕೋರ್ಟಿಗೆ ತಿಳಿಸಲಾಯಿತು. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ನಗರ ಪೊಲೀಸ್ ಆಯುಕ್ತರು ನಾಯಕ್ ಗೆ ಸೇವೆಗೆ ಮರಳುವಂತೆ ಆದೇಶಿಸಿದರು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications