ಸರಕಾರಿ ಕನ್ನಡ ಶಾಲೆಗಳಿಗೆ ಬೀಗ ಜಡಿದ ಕೋರ್ಟ್

ಕರ್ನಾಟಕದಲ್ಲಿ ಕನ್ನಡ ಶಾಲೆಗಳೇ ಕಣ್ಮರೆಯಾಗುತ್ತಿದ್ದು, ಐದಕ್ಕೂ ಕಡಿಮೆ ವಿದ್ಯಾರ್ಥಿಗಳಿರುವ ಸರಕಾರಿ ಶಾಲೆಗಳನ್ನು ಮುಚ್ಚಿ ಬೇರೆ ಶಾಲೆಗಳೊಂದಿಗೆ ವಿಲೀನ ಮಾಡುವ ರಾಜ್ಯ ಸರಕಾರದ ಆದೇಶವನ್ನು ತಡೆಹಿಡಿಯಬೇಕು ಎಂದು ಸಾಹಿತಿಗಳಾದ ಡಾ. ಯು.ಆರ್. ಅನಂತ ಮೂರ್ತಿ, ಡಾ. ಚಂದ್ರಶೇಖರ ಕಂಬಾರ, ಡಾ. ಗಿರೀಶ್ ಕಾರ್ನಾಡ್, ಚನ್ನವೀರ ಕಣವಿ ಮುಂತಾದವರು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಆದರೆ, ಸಾಹಿತಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಳ್ಳಿಹಾಕಿದ್ದು, ಮೂರು ಸಾವಿರಕ್ಕೂ ಅಧಿಕವಿರುವ ಸರಕಾರಿ ಕನ್ನಡ ಶಾಲೆಗಳು ಬೆರಳೆಣಿಕೆಯಷ್ಟು ಇರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸದ್ಯದಲ್ಲೇ ಸೆಂಡ್ ಆಫ್ ನೀಡಲಿವೆ. ಕಡಿಮೆ ವಿದ್ಯಾರ್ಥಿಗಳಿದ್ದರೂ ಇತರ ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ಹೊಸ ಶಿಕ್ಷಕರನ್ನು ನೇಮಿಸಲು ಸರಕಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂಬ ಕೂಗಿಗೆ ಭಾರೀ ಹೊಡೆತ ಬಿದ್ದಿದೆ.
ಕರ್ನಾಟಕ ಹೈಕೋರ್ಟ್ ಪ್ರಕಾರ, ಐದಕ್ಕೂ ಕಡಿಮೆ ವಿದ್ಯಾರ್ಥಿಗಳಿರುವ ಸರಕಾರಿ ಶಾಲೆಗಳನ್ನು 1 ಕಿ.ಮೀ. ವ್ಯಾಪ್ತಿಯಲ್ಲಿರುವ ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸಬೇಕು. ಆ ಮತ್ತೊಂದು ಶಾಲೆ 3 ಕಿ.ಮೀ. ವ್ಯಾಪ್ತಿಯಲ್ಲಿ ಇರದಿದ್ದರೆ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಸರಕಾರ ಕಲ್ಪಿಸಿಕೊಡಬೇಕು. ಹಾಗೆಯೆ, 6ನೇ ತರಗತಿಯಿಂದ 8ನೇ ತರಗತಿಯವರೆಗೆ ಸರಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿ, ವಿದ್ಯಾರ್ಥಿನಿಯರಿದ್ದರೆ ಅಂತಹ ಶಾಲೆಗಳನ್ನು ಕೂಡ 3 ಕಿ.ಮೀ. ವ್ಯಾಪ್ತಿಯೊಳಗಿನ ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸಬೇಕು.
6ನೇ ತರಗತಿಯಿಂದ ಕರ್ನಾಟಕದಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಬೇಕೆಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಚಿಂತನೆ ನಡೆಸುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕ ಹೈಕೋರ್ಟಿನಿಂದ ಈ ಆದೇಶ ಬಂದಿದೆ. ರಾಜ್ಯದಲ್ಲಿ ಶಿಕ್ಷಕರಿದ್ದೆಡೆ ಮಕ್ಕಳಿಲ್ಲ, ಭರ್ತಿ ಮಕ್ಕಳಿದ್ದೆಡೆ ಶಿಕ್ಷಕರೇ ಇಲ್ಲ ಎಂಬಂತಹ ಪರಿಸ್ಥಿತಿ ಇದೆ. ಹಾಗೆಯೆ, ಶಿಕ್ಷಕರಿದ್ದು, ಮಕ್ಕಳೂ ಇದ್ದರೂ ಅವರಿಗೆ ಸರಿಯಾದ ಕಟ್ಟಡವೂ ಇಲ್ಲ ಎಂಬಂತಹ ಗ್ರಾಮಗಳು ಅನೇಕವಿವೆ. ಕನ್ನಡ ಸಾಹಿತಿಗಳು ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುತ್ತಾರಾ? ಅಥವಾ ಕೋರ್ಟಿನೊಂದಿಗೆ ಹೊಡೆದಾಟ ಸಾಕಪ್ಪಾ ಸಾಕು, ಆದಿದ್ದಾಗಲಿ ಎಂದು ಸುಮ್ಮನೆ ಕುಳಿತುಬಿಡುತ್ತಾರಾ?
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications