ಮತ್ತೊಂದು ವಿಕೆಟ್: ಸುರೇಶ್ ಕುಮಾರ್ ರಾಜೀನಾಮೆ

ಅತ್ಯಂತ ಸಜ್ಜನ, ಆರ್ ಎಸ್ ಎಸ್ ನಿಷ್ಠಾವಂತ ಎನಿಸಿಕೊಂಡಿರುವ ಸುರೇಶ್ ಕುಮಾರ್ ಅವರ ರಾಜೀನಾಮೆ ನೀಡಿದ್ದಾರೆ. ಆರ್ ಎಂವಿ ಬಡಾವಣೆಯಲ್ಲಿ ಅಕ್ರಮವಾಗಿ ಜಿ ಕೆಟಗರಿಯಲ್ಲಿ ಬಿಡಿಎ ನಿವೇಶನವನ್ನು ಪಡೆದಿರುವ ದೂರಿಗೆ ಸಂಬಂಧಿಸಿದಂತೆ ಈ ರಾಜೀನಾಮೆ ಸಲ್ಲಿಸಿದ್ದಾರೆ.
4,000 ಚದರಡಿಯ ಈ ನಿವೇಶನದ ಇಂದಿನ ಮಾರುಕಟ್ಟೆ ಮೌಲ್ಯ 4 ಕೋಟಿ ರುಪಾಯಿ. ಅವರು ಈ ಹಿಂದೆ 10 ಲಕ್ಷ ರುಪಾಯಿ ನೀಡಿ ನಿವೇಶನ ಖರೀದಿಸಿದ್ದಾರೆ. ಭಾಸ್ಕರ್ ಎಂಬ RTI ಕಾರ್ಯಕರ್ತರು ಸಚಿವ ಸುರೇಶ್ ವಿರುದ್ಧ ದೂರು ಸಲ್ಲಿಸಿದ್ದರು. ಅಕ್ರಮ ನಿವೇಶನ ಆರೋಪದ ವಿವರ
ಲೋಕಾಯುಕ್ತಕ್ಕೆ ನನ್ನ ಆಸ್ತಿ ವಿವರದಲ್ಲಿ ಎಲ್ಲ ವಿವರ ನೀಡಿದ್ದೇನೆ. ನಾನೊಬ್ಬ ಪ್ರಮಾಣಿಕ ಸಚಿವ. ನನ್ನ ವಿರುದ್ಧ ಅಂತಹ ಆರೋಪ ಬಂದಾಗ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದೇನೆ. ಆರೋಪ ಮುಕ್ತನಾಗುವವರೆಗೂ ಸಚಿವ ಪದವಿ ಬೇಡವೆಂದು ಮುಖ್ಯಮಂತ್ರಿಗೆ ತಿಳಿಸಿದ್ದೇನೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ವಿವಾದಿತ ನಿವೇಶನವನ್ನು ವಾಪಸು ಮಾಡುವುದಾಗಿಯೂ ಅವರು ಇದೇ ವೇಳೆ ಪ್ರಕಟಿಸಿದ್ದಾರೆ.
ಈಗಾಗಲೇ ಸಚಿವರುಗಳ ರಾಜೀನಾಮೆಯಿಂದ ಬಸವಳಿದಿರುವ ಬಿಜೆಪಿ ಮತ್ತು ತತ್ಫಲವಾಗಿ ಈಗಾಗಲೇ 20ಕ್ಕೂ ಹೆಚ್ಚು ಸಚಿವ ಖಾತೆಗಳನ್ನು ಹೊತ್ತಿರುವ ಸದಾನಂದ ಗೌಡರಿ ಹೆಗಲಿಗೆ ಈಗ ಮತ್ತೆರಡು ಮಹತ್ವದ ಖಾತೆಗಳು ಹೆಗಲೇರಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications