ಮಾವು ಕೀಳಲು ಹೋದ ಬಾಲೆ ಹರಿದು ಮುಕ್ಕಿಬಿಟ್ಟರು

ಅಪ್ರಾಪ್ತವಯಸ್ಕ ಬಾಲಕಿಯ ಮೇಲೆ ಕುಡಿದ ಅಮಲಿನಲ್ಲಿ ಇಬ್ಬರು ಅತ್ಯಾಚಾರವೆಸಗಿದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಅವರ ಪಾಪಕೃತ್ಯ ಕಂಡು ತಾಲೂಕು ಬೆಚ್ಚಿಬಿದ್ದಿದೆ. ಪೋಷಕರು ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂಜರೆಯುತ್ತಿದ್ದಾರೆ.
ಆನೇಕಲ್ ತಾಲೂಕಿನ ಯಡವನಹಳ್ಳಿ ಸಮೀಪದಲ್ಲಿರುವ ಅಬ್ಬಯ್ಯನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ. ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯನ್ನು ಐದರ ಹರೆಯದ ಸಂಜನಾ ಎನ್ನಲಾಗಿದೆ.
ಅಂಗನವಾಡಿ ಶಾಲೆ ಮುಗಿಸಿ ತನ್ನೂರಿಗೆ ನಡೆದು ಬರುವ ದಾರಿಯ ಪಕ್ಕದಲ್ಲೇ ಮಾವಿನ ತೋಪಿದೆ. ಮಾವಿನ ತೋಪಿನಲ್ಲಿನ ಉದುರಿದ ಮಾವಿನ ಹಣ್ಣನ್ನು ಹೆಕ್ಕಿ ತರಲು ಶಾಲಾ ಸ್ನೇಹಿತರೊಂದಿಗೆ ತೆರಳಿದ್ದಾಳೆ.
ಆದರೆ, ದುರದೃಷ್ಟಕ್ಕೆ ಅಲ್ಲೇ ಕುಡಿದು ಕುಳಿತಿದ್ದ ಮಧು ಮತ್ತು ವಿಜಯ್ ಎಂಬವರು ಬಾಲಕಿಯನ್ನು ಕಂಡು ಕಾಮನೆ ಕೆರಳಿಸಿಕೊಂಡು ಆಕೆಯನ್ನು ಹೊತ್ತೊಯ್ದಿದ್ದಾರೆ. ಮಾವಿನ ತೋಪಿನ ಮರೆಯಲ್ಲಿ ಆಕೆಯನ್ನು ಹೊತ್ತೊಯ್ಯುವುದನ್ನು ಸಂಜನಾಳಾ ಸಹಪಾಠಿಗಳು ನೋಡಿದ್ದಾರೆ.
ಘಟನೆಯ ಬಳಿಕ ಬಾಲಕಿ ಸಂಜನಾ ಅಳುತ್ತಾ ಅಸ್ವಸ್ಥಗೊಂಡು ಮನೆಗೆ ಹಿಂತಿರುಗಿದ್ದಾಳೆ. ನಡೆಯಲು ಆಗದಂತೆ ತಡವರಿಸುತ್ತಿದ್ದ ಮಗಳನ್ನು ಕಂಡ ಪೋಷಕರಿಗೆ ವಿಷಯ ಅರ್ಥವಾದಾಗ ಆಕಾಶವೇ ತಲೆ ಮೇಲೆ ಕಳಚಿ ಬಿದ್ದಂತೆ ಆಗಿದೆ.
ಕೂಡಲೇ ಬಾಲಕಿಯನ್ನು ಆನೇಕಲ್ ಸರಕಾರಿ ಆಸ್ಪತ್ರೆಗೆ ಕರೆದೊಯ್ದ, ಚಿಕಿತ್ಸೆ ನೀಡಲಾಗಿದೆ. ಬಾಲಕಿ ಸ್ಥಿತಿ ಇನ್ನೂ ಗಂಭೀರವಾಗಿದ್ದ ಕಾರಣ ವಾಣಿ ವಿಲಾಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಅತ್ತಿಬೆಲೆ ಪಿಎಸ್ಐ ವಿರೂಪಾಕ್ಷ ಅವರು ಪ್ರಕರಣ ದಾಖಲಿಸಿಕೊಂಡು ಮಧು ಹಾಗೂ ವಿಜಯ್ ಎಂಬ ಇಬ್ಬರು ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಏನು ಮಾಡಿದೆವು ಎಂದು ಗೊತ್ತಿಲ್ಲ ಎಂದು ಆರೋಪಿ ಮಧು ಹೇಳಿಕೆ ನೀಡಿದ್ದಾನೆ. ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಮಧು ಕೆಲ ಕಾಲ ಕೆಲಸ ಮಾಡುತ್ತಿದ್ದ. ಆತನ ಮೇಲೆ ಈಗಾಗಲೇ ಹಲವು ಅಪರಾಧ ಪ್ರಕರಣಗಳು ದಾಖಲಾಗಿದೆ. ಬಾಲಕಿಯನ್ನು ತೋಪಿನೊಳಗೆ ಹೊತ್ತೊಯ್ಯುವಾಗ ತೋಟದ ಕಾವಲುಗಾರರು ಪ್ರಶ್ನಿಸಿದ್ದಾರೆ, ಬಾಲಕಿಯನ್ನು ಬಿಟ್ಟು ಬಿಡುವಂತೆ ಆಗ್ರಹಿಸಿದ್ದಾರೆ. ಆದರೆ, ಈ ಇಬ್ಬರು ದುಷ್ಕರ್ಮಿಗಳು ಅವರಿಗೆ ಚಾಕು ತೋರಿಸಿ ಬೆದರಿಸಿದ್ದಾರೆ ಎಂದು ಪೊಲೀಸರು ವಿವರಿಸಿದರು.
ಅತ್ಯಾಚಾರಕ್ಕೊಳಗಾದ ಬಾಲಕಿಯ ಪೋಷಕರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಉಳಿಗೆರೆ ಗ್ರಾಮದವರು. ಕೂಲಿ ಕೆಲಸ ಅರಸಿಕೊಂಡು ಬೆಂಗಳೂರಿನ ಆನೇಕಲ್ ತನಕ ಬಂದವರು ಇಲ್ಲೇ ನೆಲೆಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications