ಡಿಕೆಶಿ, ಸಿಟಿ ರವಿಗೂ ಶುರುವಾಯ್ತು ಬಂಧನದ ಭೀತಿ

ಎರಡೆರಡು ಬಾರಿ ಕ್ಲೀನ್ಚಿಟ್ 'ಗಿಟ್ಟಿಸಿ' ಭೂಹಗರಣ ಆರೋಪದಿಂದ ಮುಕ್ತಿ ಪಡೆದಿದ್ದರೂ ಖುದ್ದು ಲೋಕಾಯುಕ್ತ ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಅವರೇ ತಮ್ಮ ವಿರುದ್ಧ ರಂಗಕ್ಕಿಳಿದಿರುವುದರಿಂದ ಕಂಗಾಲಾಗಿರುವ ಚಿಕ್ಕಮಗಳೂರು ಬಿಜೆಪಿ ಶಾಸಕ ಸಿಟಿ ರವಿ ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯ ಗೃಹ ನಿರ್ಮಾಣ ಮಂಡಳಿಯಿಂದ ಅಕ್ರಮ ನಿವೇಶನ ಪಡೆದಿರುವುದು ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದಾಗಿ ರವಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಲಾಗಿದೆ. ಪ್ರಕರಣದ ಸಂಬಂಧ ಜುಲೈ 2ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಿಟಿ ರವಿಗೆ ಲೋಕಾಯುಕ್ತ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
ಡಿಕೆಶಿಯೂ ನಿರೀಕ್ಷಣಾ ಜಾಮೀನಿಗೆ ಮೊರೆ: ಸರಕಾರಿ ಭೂಮಿಯನ್ನು ಕಾನೂನು ಬಾಹಿರವಾಗಿ ಖರೀದಿಸಿ, ಅಭಿವೃದ್ದಿ ಪಡಿಸಲು ಸಚಿವ ಸ್ಥಾನ ದುರುಪಯೋಗಪಡಿಸಿಕೊಂಡ ಪ್ರಕರಣ ಹಿನ್ನೆಲೆಯಲ್ಲಿ ಶಾಸಕ ಡಿಕೆ ಶಿವಕುಮಾರ್ ಸಹ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಮೊರೆಹೋಗಿದ್ದಾರೆ.
ಪ್ರಕರಣ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಡಿಕೆಶಿ ಸಹ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಸುಭಾಷ್ ಬಿ. ಆದಿ ಅವರು, ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದರು. ಜತೆಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು.
ಡಿಕೆಶಿ ಪ್ರಕರಣವೇನು: ಎನ್ಜಿಇಎಫ್ ಬಡಾವಣೆ ನಿರ್ಮಾಣಕ್ಕಾಗಿ ಕೆ.ಆರ್. ಪುರ ತಾಲ್ಲೂಕಿನ ಬೆನ್ನಿಗಾನಹಳ್ಳಿಯ ಸರ್ವೆ ನಂಬರ್ 50/2ರಲ್ಲಿ 4.20 ಎಕರೆ ಭೂಮಿಯನ್ನು ಬಿಡಿಎಸ್ವಾಧೀನಪಡಿಸಿಕೊಂಡಿತ್ತು. ಆದರೆ, 2002-2004ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಡಿಕೆ ಶಿವಕುಮಾರ್ ಈ ಜಮೀನು ಬಿಡಿಎ ವಶದಲ್ಲಿರುವುದನ್ನು ತಿಳಿದಿದ್ದರೂ, ಮೂಲ ಮಾಲೀಕ ಬಿ.ಕೆ. ಶ್ರಿನಿವಾಸ್ರಿಂದ 2003ರ ಡಿ.12 ರಂದು ಅಕ್ರಮವಾಗಿ ಖರೀದಿಸಿದ್ದರು.
ಜತೆಗೆ, ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗರು ಕಾನೂನು, ನಿಯಮಗಳನ್ನು ಉಲ್ಲಂಘಿಸಿ ಮತ್ತು ಕೆ.ಆರ್. ಪುರ ಉಪ ನೋಂದಣಿ ಕಚೇರಿಯ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಶಿವಕುಮಾರ್ ಎರಡೇ ದಿನಗಳಲ್ಲಿ ಖಾತೆ ಬದಲಾವಣೆ ಮಾಡಿದ್ದರು. ನಂತರ, ಒಬ್ಬ ಬಿಲ್ಡರ್ ಜತೆ ಜಂಟಿ ಪಾಲುದಾರಿಕೆ ಒಪ್ಪಂದ ಮಾಡಿಕೊಂಡು ವಸತಿ ಸಮುಚ್ಚಯ ನಿರ್ಮಿಸಿದ್ದರು ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಈ ಪ್ರಕರಣ ಕುರಿತು ಡಿಕೆ ಶಿವಕುಮಾರ್ ಹಾಗೂ ಮತ್ತಿತರರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದಾರೆ. ಕೋರ್ಟ್ ಆದೇಶದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಿಂದ ಡಿಕೆಶಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications