ಪಾವಗಡ ಟೆಕ್ಕಿ ಪವನ್ ಅಮೆರಿಕದಲ್ಲಿ ನಿಗೂಢ ಸಾವು

ನಗರದ ಕಾಗ್ನಿಜೆಂಟ್ ಟೆಕ್ನಾಲಜಿಸ್ ಸಾಫ್ಟ್ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪವನ್ ಕುಮಾರ್, ಕಂಪನಿ ಕೆಲಸದ ನಿಮಿತ್ತ 2011ರ ಫೆಬ್ರುವರಿಯಲ್ಲಿ ಅಮೆರಿಕಕ್ಕೆ ಹೋಗಿದ್ದರು.
ಪವನ್ ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. 'ಬೆಂಗಳೂರಿನಲ್ಲಿರುವ Cognizant Technology Solutions ಕಂಪನಿಯ ಪ್ರವೀಣ್ ಜೋಷಿ ಎಂಬುವವರು ಪವನ್ ತಂದೆಗೆ ಜೂನ್ 20ರಂದು ಕರೆ ಮಾಡಿ ಪವನ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
'ನಮ್ಮ ಪುತ್ರನ ಸಾವಿನ ಬಗ್ಗೆ ಕಂಪನಿಯವರು ಹೆಚ್ಚಿನ ವಿವರ ನೀಡುತ್ತಿಲ್ಲ. ಶವವನ್ನು ದೇಶಕ್ಕೆ ತರಲು ಕಂಪನಿಯವರು ಸಹಕರಿಸುತ್ತಿಲ್ಲ. ಅಮೆರಿಕದಲ್ಲಿರುವ ಮಗನ ಶವವನ್ನು ನಗರಕ್ಕೆ ತರಲು ಯಾರನ್ನು ಸಂಪರ್ಕಿಸಬೇಕೆಂದು ಗೊತ್ತಾಗುತ್ತಿಲ್ಲ' ಎಂದು ಪವನ್ ತಂದೆ-ತಾಯಿ ಅಳಲು ತೋಡಿಕೊಂಡಿದ್ದಾರೆ.
26 ವರ್ಷದ ಪವನ್ ಅವರ ತಂದೆ, ತಾಯಿ ಅಂಜಪ್ಪ ಹಾಗೂ ರಂಗರತ್ನಮ್ಮ ಪ್ರಸ್ತುತ ಸಂಜಯನಗರದಲ್ಲಿ ವಾಸವಾಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡದ ಅಂಜಪ್ಪ-ರಂಗರತ್ನಮ್ಮ ದಂಪತಿಗೆ ಪವನ್ ಮತ್ತು ಗುಣಶೀಲಾ ಎಂಬ ಇಬ್ಬರ ಮಕ್ಕಳು. ಗುಣಶೀಲಾ ಶಾಲಾ ಶಿಕ್ಷಕಿಯಾಗಿದ್ದಾರೆ.
'ಜೂನ್ 15ರಂದು ಕಡೆಯ ಬಾರಿಗೆ ಕರೆ ಮಾಡಿದ್ದ. ಪವನ್ ಜುಲೈ ಮೊದಲ ವಾರದಲ್ಲಿ ದೇಶಕ್ಕೆ ವಾಪಸ್ ಬರಬೇಕಿತ್ತು. ಆತನ ಸಾವಿನ ಬಗ್ಗೆ ವಿವರ ನೀಡುವಂತೆ ಮನವಿ ಮಾಡಿದರೂ ಕಂಪನಿಯವರು ಸ್ಪಂದಿಸುತ್ತಿಲ್ಲ' ಎಂದು ಗುಣಶೀಲಾ ದೂರಿದ್ದಾರೆ.
ಆದರೆ 'ಪವನ್ ಕುಟುಂಬದವರನ್ನು ಭೇಟಿ ಮಾಡಿ ಕಾನೂನು ನೆರವು ನೀಡುವುದಾಗಿ ಹೇಳಿದ್ದೇವೆ. ಆತನ ಶವವನ್ನು ದೇಶಕ್ಕೆ ತರಲು ವ್ಯವಸ್ಥೆ ಮಾಡುವುದಾಗಿಯೂ ಹೇಳಿದ್ದೇವೆ. ಆದರೆ ಅಮೆರಿಕದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ' ಎಂದು ಕಾಂಗ್ನಿಜೆಂಟ್ ಕಂಪನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪವನ್ ಸಾವಿಗೆ ಪ್ರೇಮ-ಪ್ರೀತಿ ಕಾರಣವೇ?
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications