ಪಾವಗಡ ಟೆಕ್ಕಿ ಪವನ್ ಅಮೆರಿಕದಲ್ಲಿ ನಿಗೂಢ ಸಾವು

ನಗರದ ಕಾಗ್ನಿಜೆಂಟ್ ಟೆಕ್ನಾಲಜಿಸ್ ಸಾಫ್ಟ್ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪವನ್ ಕುಮಾರ್, ಕಂಪನಿ ಕೆಲಸದ ನಿಮಿತ್ತ 2011ರ ಫೆಬ್ರುವರಿಯಲ್ಲಿ ಅಮೆರಿಕಕ್ಕೆ ಹೋಗಿದ್ದರು.
ಪವನ್ ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. 'ಬೆಂಗಳೂರಿನಲ್ಲಿರುವ Cognizant Technology Solutions ಕಂಪನಿಯ ಪ್ರವೀಣ್ ಜೋಷಿ ಎಂಬುವವರು ಪವನ್ ತಂದೆಗೆ ಜೂನ್ 20ರಂದು ಕರೆ ಮಾಡಿ ಪವನ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
'ನಮ್ಮ ಪುತ್ರನ ಸಾವಿನ ಬಗ್ಗೆ ಕಂಪನಿಯವರು ಹೆಚ್ಚಿನ ವಿವರ ನೀಡುತ್ತಿಲ್ಲ. ಶವವನ್ನು ದೇಶಕ್ಕೆ ತರಲು ಕಂಪನಿಯವರು ಸಹಕರಿಸುತ್ತಿಲ್ಲ. ಅಮೆರಿಕದಲ್ಲಿರುವ ಮಗನ ಶವವನ್ನು ನಗರಕ್ಕೆ ತರಲು ಯಾರನ್ನು ಸಂಪರ್ಕಿಸಬೇಕೆಂದು ಗೊತ್ತಾಗುತ್ತಿಲ್ಲ' ಎಂದು ಪವನ್ ತಂದೆ-ತಾಯಿ ಅಳಲು ತೋಡಿಕೊಂಡಿದ್ದಾರೆ.
26 ವರ್ಷದ ಪವನ್ ಅವರ ತಂದೆ, ತಾಯಿ ಅಂಜಪ್ಪ ಹಾಗೂ ರಂಗರತ್ನಮ್ಮ ಪ್ರಸ್ತುತ ಸಂಜಯನಗರದಲ್ಲಿ ವಾಸವಾಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡದ ಅಂಜಪ್ಪ-ರಂಗರತ್ನಮ್ಮ ದಂಪತಿಗೆ ಪವನ್ ಮತ್ತು ಗುಣಶೀಲಾ ಎಂಬ ಇಬ್ಬರ ಮಕ್ಕಳು. ಗುಣಶೀಲಾ ಶಾಲಾ ಶಿಕ್ಷಕಿಯಾಗಿದ್ದಾರೆ.
'ಜೂನ್ 15ರಂದು ಕಡೆಯ ಬಾರಿಗೆ ಕರೆ ಮಾಡಿದ್ದ. ಪವನ್ ಜುಲೈ ಮೊದಲ ವಾರದಲ್ಲಿ ದೇಶಕ್ಕೆ ವಾಪಸ್ ಬರಬೇಕಿತ್ತು. ಆತನ ಸಾವಿನ ಬಗ್ಗೆ ವಿವರ ನೀಡುವಂತೆ ಮನವಿ ಮಾಡಿದರೂ ಕಂಪನಿಯವರು ಸ್ಪಂದಿಸುತ್ತಿಲ್ಲ' ಎಂದು ಗುಣಶೀಲಾ ದೂರಿದ್ದಾರೆ.
ಆದರೆ 'ಪವನ್ ಕುಟುಂಬದವರನ್ನು ಭೇಟಿ ಮಾಡಿ ಕಾನೂನು ನೆರವು ನೀಡುವುದಾಗಿ ಹೇಳಿದ್ದೇವೆ. ಆತನ ಶವವನ್ನು ದೇಶಕ್ಕೆ ತರಲು ವ್ಯವಸ್ಥೆ ಮಾಡುವುದಾಗಿಯೂ ಹೇಳಿದ್ದೇವೆ. ಆದರೆ ಅಮೆರಿಕದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ' ಎಂದು ಕಾಂಗ್ನಿಜೆಂಟ್ ಕಂಪನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪವನ್ ಸಾವಿಗೆ ಪ್ರೇಮ-ಪ್ರೀತಿ ಕಾರಣವೇ?
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications