ಪ್ರೇಮಿಯ ಸಾಯಿಸಿದ ಪಾವಗಡ ಟೆಕ್ಕಿ ಪವನ್ ಆತ್ಮಹತ್ಯೆ

'ಪವನ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಅಮೆರಿಕದ ಡೆಲೆವರ್ ಕಡಲ ತೀರದ ಸಮೀಪ ಆ ಯುವತಿಯ ಶವ ಪತ್ತೆಯಾಗಿತ್ತು. ಇದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದು ಕಂಪನಿಯ ಆಡಳಿತಾಧಿಕಾರಿಗಳು ಮಗುಮ್ಮಾಗಿ ಹೇಳಿರುವುದು ಈ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಆದರೆ 'ಪವನ್, ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತು ಮತ್ತು ಮದ್ಯ ಸೇವನೆ ಮಾಡಿ ಸಾವನ್ನಪ್ಪಿದ್ದಾರೆ' ಎಂದು ನ್ಯೂಜೆರ್ಸಿ ಬೆಲ್ಲೆವೆಲೆ ಪೊಲೀಸರು ಶಂಕಿಸಿದ್ದಾರೆ.
ಪವನ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಅಲ್ಲಿನ ಪೊಲೀಸರು ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ವಿವರ ಹೀಗಿದೆ: ಬೆಂಗಳೂರಿನ 26 ವರ್ಷದದ ಟೆಕ್ಕಿ ಪವನ್ಕುಮಾರ್, ಡೇನಿಯಲ್ ಮೆಹಲ್ಮನ್ ಎಂಬ ಶಿಕ್ಷಕಿಯನ್ನು ಪ್ರೀತಿಸುತ್ತಿದ್ದ. ಆದರೆ ಅದು ಏಕಮುಖ ಪ್ರೀತಿಯಾಗಿದ್ದು, ಮೆಹಲ್ಮನ್ ಪವನ್ ಪ್ರೀತಿಯನ್ನು ತಿರಸ್ಕರಿಸಿದ್ದಳು.
ಇದರಿಂದ ಬೇಸತ್ತ ಪವನ್, ನ್ಯೂಜೆರ್ಸಿಯಿಂದ 100 ಕಿ.ಮೀ. ದೂರದಲ್ಲಿರುವ ಡೆಲೆವರ್ ಬಳಿ ಹೋಟೆಲಿನಲ್ಲಿ ಚಾಕುವಿನಿಂದ ಆ ಯುವತಿಯನ್ನು ಭೀಕರವಾಗಿ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿದ್ದರು.
ಯುವತಿಯ ಹತ್ಯೆ ಆರೋಪದ ಮೇಲೆ ಪವನ್ ಬಂಧನಕ್ಕೆ ಅಮೆರಿಕ ನ್ಯಾಯಾಲಯವೊಂದು ಪವನ್ ಬಂಧನಕ್ಕೆ ವಾರೆಂಟ್ ಸಹ ಜಾರಿ ಮಾಡಿತ್ತು. ಇದರಿಂದ ಭೀತಿಗೊಳಗಾದ Cognizant ಟೆಕ್ಕಿ ಪವನ್ಕುಮಾರ್ ಜೂನ್ 19ರಂದು ಕಡಲತೀರದಲ್ಲಿ ಮದ್ಯ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪವನ್, 2011ರ ಫೆಬ್ರವರಿಯಲ್ಲಿ ಅಮೆರಿಕಕ್ಕೆ ತೆರಳಿದ್ದ. ಪವನ್ ವಿರುದ್ಧ ಅಮೆರಿಕದ ಕಾನೂನುರೀತ್ಯ first-degree murder case ದಾಖಲಾಗಿದೆ. ಆದ್ದರಿಂದ ತನಿಖೆ ಪೂರ್ಣಗೊಳ್ಳದ ಹೊರತು, ಆತನ ಶವವನ್ನು ತಕ್ಷಣಕ್ಕೆ ಭಾರತಕ್ಕೆ ಕಳಿಸುವುದು ದೂರದ ಮಾತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರತಿಭಾವಂತ ಪವನ್ ಕಾಲೇಜಿನಲ್ಲಿ ಎಲ್ಲದರಲ್ಲೂ ಮುಂದಿದ್ದ. ಅವನು ಶಿಕ್ಷಕಿ ಮೆಹಲ್ಮನ್ ಳನ್ನು ಪ್ರೀತಿಸುತ್ತಿರುವುದಾಗಿ ನನಗೆ ಹೇಳಿದ್ದ ಎಂದು ಸ್ವತಃ ಶಿಕ್ಷಕಿಯಾದ ಪವನ್ಕುಮಾರನ ಸೋದರಿ ಗುಣಶೀಲಾ ಹೇಳಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications