ಪ್ರೇಮಿಯ ಸಾಯಿಸಿದ ಪಾವಗಡ ಟೆಕ್ಕಿ ಪವನ್ ಆತ್ಮಹತ್ಯೆ

'ಪವನ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಅಮೆರಿಕದ ಡೆಲೆವರ್ ಕಡಲ ತೀರದ ಸಮೀಪ ಆ ಯುವತಿಯ ಶವ ಪತ್ತೆಯಾಗಿತ್ತು. ಇದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದು ಕಂಪನಿಯ ಆಡಳಿತಾಧಿಕಾರಿಗಳು ಮಗುಮ್ಮಾಗಿ ಹೇಳಿರುವುದು ಈ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಆದರೆ 'ಪವನ್, ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತು ಮತ್ತು ಮದ್ಯ ಸೇವನೆ ಮಾಡಿ ಸಾವನ್ನಪ್ಪಿದ್ದಾರೆ' ಎಂದು ನ್ಯೂಜೆರ್ಸಿ ಬೆಲ್ಲೆವೆಲೆ ಪೊಲೀಸರು ಶಂಕಿಸಿದ್ದಾರೆ.
ಪವನ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಅಲ್ಲಿನ ಪೊಲೀಸರು ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ವಿವರ ಹೀಗಿದೆ: ಬೆಂಗಳೂರಿನ 26 ವರ್ಷದದ ಟೆಕ್ಕಿ ಪವನ್ಕುಮಾರ್, ಡೇನಿಯಲ್ ಮೆಹಲ್ಮನ್ ಎಂಬ ಶಿಕ್ಷಕಿಯನ್ನು ಪ್ರೀತಿಸುತ್ತಿದ್ದ. ಆದರೆ ಅದು ಏಕಮುಖ ಪ್ರೀತಿಯಾಗಿದ್ದು, ಮೆಹಲ್ಮನ್ ಪವನ್ ಪ್ರೀತಿಯನ್ನು ತಿರಸ್ಕರಿಸಿದ್ದಳು.
ಇದರಿಂದ ಬೇಸತ್ತ ಪವನ್, ನ್ಯೂಜೆರ್ಸಿಯಿಂದ 100 ಕಿ.ಮೀ. ದೂರದಲ್ಲಿರುವ ಡೆಲೆವರ್ ಬಳಿ ಹೋಟೆಲಿನಲ್ಲಿ ಚಾಕುವಿನಿಂದ ಆ ಯುವತಿಯನ್ನು ಭೀಕರವಾಗಿ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿದ್ದರು.
ಯುವತಿಯ ಹತ್ಯೆ ಆರೋಪದ ಮೇಲೆ ಪವನ್ ಬಂಧನಕ್ಕೆ ಅಮೆರಿಕ ನ್ಯಾಯಾಲಯವೊಂದು ಪವನ್ ಬಂಧನಕ್ಕೆ ವಾರೆಂಟ್ ಸಹ ಜಾರಿ ಮಾಡಿತ್ತು. ಇದರಿಂದ ಭೀತಿಗೊಳಗಾದ Cognizant ಟೆಕ್ಕಿ ಪವನ್ಕುಮಾರ್ ಜೂನ್ 19ರಂದು ಕಡಲತೀರದಲ್ಲಿ ಮದ್ಯ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪವನ್, 2011ರ ಫೆಬ್ರವರಿಯಲ್ಲಿ ಅಮೆರಿಕಕ್ಕೆ ತೆರಳಿದ್ದ. ಪವನ್ ವಿರುದ್ಧ ಅಮೆರಿಕದ ಕಾನೂನುರೀತ್ಯ first-degree murder case ದಾಖಲಾಗಿದೆ. ಆದ್ದರಿಂದ ತನಿಖೆ ಪೂರ್ಣಗೊಳ್ಳದ ಹೊರತು, ಆತನ ಶವವನ್ನು ತಕ್ಷಣಕ್ಕೆ ಭಾರತಕ್ಕೆ ಕಳಿಸುವುದು ದೂರದ ಮಾತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರತಿಭಾವಂತ ಪವನ್ ಕಾಲೇಜಿನಲ್ಲಿ ಎಲ್ಲದರಲ್ಲೂ ಮುಂದಿದ್ದ. ಅವನು ಶಿಕ್ಷಕಿ ಮೆಹಲ್ಮನ್ ಳನ್ನು ಪ್ರೀತಿಸುತ್ತಿರುವುದಾಗಿ ನನಗೆ ಹೇಳಿದ್ದ ಎಂದು ಸ್ವತಃ ಶಿಕ್ಷಕಿಯಾದ ಪವನ್ಕುಮಾರನ ಸೋದರಿ ಗುಣಶೀಲಾ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications