ಮಾಲ್, ಮಲ್ಟಿಪ್ಲೆಕ್ಸ್ ಗಳಿಂದ 140 ಕೋಟಿ ತೆರಿಗೆ ಬಾಕಿ

ಬುಧವಾರ ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ರಮೇಶ್, ನಗರದಲ್ಲಿ ಒಟ್ಟು 107 ಮಾಲ್ ಗಳು ಮತ್ತು ಮಲ್ಟಿಪ್ಲೆಕ್ಸ್ ಗಳಿದ್ದರೂ ಕೇವಲ 37 ಮಾಲ್ ಗಳು, 6 ಮಲ್ಟಿ ಪೆಕ್ಸ್ ಗಳಿಂದ ಸಂಗ್ರಹವಾಗುತ್ತಿರುವ ತೆರಿಗೆ ಮೊತ್ತ 11 ಕೋಟಿ ರು ದಾಟುತ್ತಿಲ್ಲ. ಉಳಿದ ಬಾಕಿ ಮೊತ್ತ ಸಂಗ್ರಹಿಸಿ, ತೆರಿಗೆ ವಂಚನೆಯನ್ನು ತಪ್ಪಿಸಬೇಕಿದೆ ಎಂದು ಮೇಯರ್ ಗಮನಕ್ಕೆ ವಿಷಯ ತಂದರು.
8 ವಲಯಗಳಲ್ಲಿರುವ 107 ಮಾಲ್ ಗಳು ಸುಮಾರು 14 ಕೋಟಿ ಚದರ ಅಡಿಗಳ ವಿಸ್ತೀರ್ಣದ ಭೂಮಿ ಹೊಂದಿದೆ. ಆದರೆ, ಮಾಲ್ ಮಾಲೀಕರು ತೆರಿಗೆ ವಂಚಿಸುತ್ತಿದ್ದಾರೆ. ದೇಶದಲ್ಲಿ ಅತಿ ದೊಡ್ಡ 10 ಶಾಪಿಂಗ್ ಮಾಲ್ ಗಳಲ್ಲಿ 6 ಶಾಪಿಂಗ್ ಮಾಲುಗಳು ನಗರದಲ್ಲಿದೆ. ಈ ಪೈಕಿ ..
* 1 ಮಿಲಿಯನ್ ಚದರ ಅಡಿಗಳಿಗೂ ವಿಸ್ತೀರ್ಣವಿರುವ ಮಾಲ್ ಗಳು ಮತ್ತು ಮಲ್ಟಿಪೆಕ್ಸ್ ಗಳ ಸಂಖ್ಯೆ 21
* ಐದು ಲಕ್ಷ ಚದರ ಅಡಿ ವಿಸ್ತೀರ್ಣವಿರುವ ಕಟ್ಟಡಗಳ ಸಂಖ್ಯೆ 39
* 2 ಲಕ್ಷ ಚದರ ಅಡಿ ವಿಸ್ತೀರ್ಣವಿರುವ ಕಟ್ಟಡಗಳ ಸಂಖ್ಯೆ 26,
* 50 ಸಾವಿರ ಚದರ ಅಡಿಗಳಷ್ಟು ವಿಸ್ತೀರ್ಣವಿರುವ ಕಟ್ಟಡಗಳ ಸಂಖ್ಯೆ 21
ರಮೇಶ್ ಅವರ ಸಲಹೆಗೆ ಪ್ರತಿಕ್ರಿಯಿಸಿದ ಮೇಯರ್ ಡಿ ವೆಂಕಟೇಶ್ ಮೂರ್ತಿ ಅವರು ಮುಂದಿನ ದಿನಗಳಲಿ 107 ಮಾಲ್ ಗಳಿಂದ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಿಬಿಎಂಪಿ ಬಜೆಟ್ ಕುತೂಹಲ : ಜೂ. 28 ರಂದು 2012-13ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕೆಎ ಮುನೀಂದ್ರ ಕುಮಾರ್ ಅವರು ಬಜೆಟ್ ಮಂಡಿಸಲಿದ್ದಾರೆ. ಚುನಾವಣಾ ದೃಷ್ಟಿಯಿಂದ ಹೆಚ್ಚು ತೆರಿಗೆ ಇಲ್ಲದ ಜನಪರ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಬಜೆಟ್ ಗಾತ್ರ 10,500 ಕೋಟಿ ರು.ಗೂ ಅಧಿಕ ಗಾತ್ರದ ಬಜೆಟ್ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿದೆ.
ಮಲ್ಟಿಪ್ಲೆಕ್ಸ್ ಗಳು, ವಾಣಿಜ್ಯ ಸಂಕೀರ್ಣಗಳನ್ನು ನಗರದ ಹೊರವಲಯದಲ್ಲಿ ಮಾತ್ರ ಸ್ಥಾಪಿಸಲು ಅನುಮತಿ ನೀಡಲಾಗುವುದು. ಸ್ಯಾಂಕಿ ರಸ್ತೆ ವಿಸ್ತರಣೆ ಕಾಮಗಾರಿ ಇನ್ನು 15 ದಿನಗಳಲ್ಲಿ ಆರಂಭವಾಗಲಿದೆ ಎಂದು ಮೇಯರ್ ವೆಂಕಟೇಶ್ ಮೂರ್ತಿ ಹೇಳಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications