ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧದ ಪ್ರಕರಣವೇನು?

2008ರಲ್ಲಿ ವಿಶ್ವೇಶ್ವರ ಭಟ್ ಅವರು ಸಂಪಾದಕರಾಗಿದ್ದ ದಿನಪತ್ರಿಕೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಅಕ್ರಮಗಳ ಕುರಿತು ವರದಿಯೊಂದು ಪ್ರಕಟವಾಗಿತ್ತು. ಅದರಲ್ಲಿ ಬೆಂಗಳೂರು ವಿವಿ ಸಿಂಡಿಕೇಟಿನ ಸದಸ್ಯರಾದ ಎಪಿ ರಂಗನಾಥ್ ಅವರ ಹೆಸರು ಪ್ರಮುಖವಾಗಿ ಪ್ರಸ್ತಾಪವಾಗಿತ್ತು. ಅದರ ವಿರುದ್ಧ ವಕೀಲರೂ ಆಗಿರುವ ಎಪಿ ರಂಗನಾಥ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಬಗ್ಗೆ ಜ್ಞಾನಭಾರತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಅದರ ಸಲುವಾಗಿ ಕೋರ್ಟಿಗೆ ಹಾಜರಾಗುವಂತೆ ವಿಶ್ವೇಶ್ವರ ಭಟ್ ಅವರಿಗೆ ಈ ಹಿಂದೆಯೇ ಸಮನ್ಸ್ ಜಾರಿ ಮಾಡಲಾಗಿತ್ತು. ಏಳು ಬಾರಿ ಸಮನ್ಸ್ ಹೊರಡಿಸಿದ್ದರೂ ಭಟ್ ಅದನ್ನು ಸ್ವೀಕರಿಸಿರಲಿಲ್ಲ. ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಸತತ ಗೈರು ಹಾಜರಿನಿಂದಾಗಿ ಮ್ಯಾಜಿಸ್ಟ್ರೇಟ್ ರುಡಾಲ್ಫ್ ಪೆರೇರಾ ಅವರು ಭಟ್ ವಿರುದ್ಧ ಜಾಮೀನು ರಹಿತ ವಾರಂಟ್ (NBW) ಹೊರಡಿಸಿದ್ದರು.
ಹಾಗಾಗಿ, ಇಂದು ಬೆಳಗ್ಗೆ 11 ಗಂಟೆಗೆ ವಿಶ್ವೇಶ್ವರ ಭಟ್ ತಮ್ಮ ವಕೀಲರ ಸಮೇತ ಕೋರ್ಟಿಗೆ ಹಾಜರಾದರು. ಆದರೆ, ಸಮಯಕ್ಕೆ ಸರಿಯಾಗಿ ಕೋರ್ಟಿಗೆ ಬಾರದೆ ನ್ಯಾಯಾಲಯದ ಅಮೂಲ್ಯ ಸಮಯವನ್ನು ಭಟ್ ಹಾಳು ಮಾಡುತ್ತಿದ್ದಾರೆ ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಆನಂತರ, ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಲಾಯಿತು.
ಈ ಮಧ್ಯೆ, ವಿಶ್ವೇಶ್ವರ ಭಟ್ ಅವರು ಹಲಸೂರು ಗೇಟ್ ಪೊಲೀಸರ ವಶ ಮತ್ತು ರಕ್ಷಣೆಯಲ್ಲಿ ಇದ್ದರು. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣವು ವಕೀಲರ ಸಮುದಾಯ, ಕೆಲ ಪತ್ರಕರ್ತರು ಮತ್ತು ಭಟ್ ಅವರ ಅಭಿಮಾನಿಗಳಿಂದ ಕಿಕ್ಕಿರಿದು ತುಂಬಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಈ ಮಧ್ಯೆ, ಭಟ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಲು ಮುಂದಾದಾಗ ಭಟ್ ಪರ ವಕಾಲತ್ತು ವಹಿಸಬಾರದು ಎಂದು ಕೆಲ ವಕೀಲರು ತಗಾದೆ ತೆಗೆದರು. ಅಂತಿಮವಾಗಿ ನ್ಯಾಯಾಧೀಶರು ಭಟ್ಟರಿಗೆ ಜಾಮೀನು ಮಂಜೂರು ಮಾಡಿದರು. ಇದೆ ವೇಳೆ, ಕೋರ್ಟ್ ಆವರಣದಿಂದ ಹೊರಬರುತ್ತಿದ್ದ ವೇಳೆ ಭಟ್ಟರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆಯೂ ನಡೆಯಿತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications