ಎಲ್ಲದ್ದಕ್ಕೂ ಸೋಮನಹಳ್ಳಿ ಕೃಷ್ಣ ಕಾರಣ ಎಂದ್ರೆ ಕಷ್ಟ

ಪ್ರಥಮ ವರದಿ ಸಲ್ಲಿಸಿದ ಮೇಲೂ ಮತ್ತೊಂದು ವರದಿಯನ್ನು ಸಲ್ಲಿಸಿರುವುದು ಅವಾಸ್ತವಿಕ ಹಾಗೂ ಅಪ್ರಸ್ತುತವಾಗಿದೆ. ನನ್ನ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಈ ರೀತಿ ಕ್ರಮ ಕೈಗೊಳ್ಳಲಾಗಿದೆ. ಸಿಇಸಿಗೆ ಬಿಜೆಪಿ ಸರ್ಕಾರ ಸಲ್ಲಿಸಿರುವ ಹೆಚ್ಚುವರಿ ಅಭಿಪ್ರಾಯ ರೂಪದ ವರದಿಯನ್ನು ಕೂಡಲೇ ಹಿಂಪಡೆಯುವಂತೆ ಸದಾನಂದ ಗೌಡರನ್ನು ಎಸ್ ಎಂ ಕೃಷ್ಣ ಆಗ್ರಹಿಸಿದ್ದಾರೆ.
ಅಕ್ರಮ ಗಣಿಗಾರಿಕೆಯ ಸುಳಿಯಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ, ಧರ್ಮ ಸಿಂಗ್ ಮತ್ತು ಎಚ್ ಡಿ ಕುಮಾರಸ್ವಾಮಿ ಅವರಿಗೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಚುರುಕು ಮುಟ್ಟಿಸಿದೆ. ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಸದಾನಂದ ಗೌಡರ ಸರ್ಕಾರ 11 ಪುಟಗಳ ಪರಿಷ್ಕೃತ ವರದಿಯನ್ನು ಕೇಂದ್ರಿಯ ಉನ್ನತಾಧಿಕಾರಿಗಳ ಸಮಿತಿ(CEC)ಗೆ ಸಲ್ಲಿಸಲಾಗಿತ್ತು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ಸಿಬಿಐ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿಗಳ ಮೇಲೆ ಹೆಚ್ಚಿನ ತನಿಖೆ ಆಗ್ರಹಿಸುವಂತೆ ಸದಾನಂದ ಗೌಡರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.
ಮೂವರು ಮಾಜಿ ಸಿಎಂಗಳ ಮೇಲೆ ಸಿಬಿಐ ತನಿಖೆ ನಡೆಸುವ ಬಗ್ಗೆ ಅಭಿಪ್ರಾಯ ತಿಳಿಸುವಂತೆ ರಾಜ್ಯ ಸರ್ಕಾರವನ್ನು ಸಿಇಸಿ ಕೋರಿತ್ತು. ಆದರೆ, ಈ ಬಗ್ಗೆ ಕೇಂದ್ರ ಉನ್ನತಾಧಿಕಾರಿಗಳ ಸಮಿತಿಯೇ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು ಹೇಳಿ ಸದಾನಂದ ಗೌಡರ ಸರ್ಕಾರ ನುಣುಚಿಕೊಂಡಿದೆ.
ಸಿಇಸಿ ಮನವಿ ಇಲ್ಲದೆ ಹೆಚ್ಚುವರಿ ಅಭಿಪ್ರಾಯವನ್ನು ಬಿಜೆಪಿ ಸರ್ಕಾರ ಏಕೆ ನೀಡಿದೆ? ಡಿಸೆಂಬರ್ 16, 2002ರಲ್ಲಿ 26,464.58 ಚದರ ಕಿಮೀ ಭೂ ಪ್ರದೇಶದಲ್ಲಿ 11,620.56 ಚದರ ಕಿಮೀ ಪ್ರದೇಶ ಡಿ ರಿಸರ್ವ್ ಮಾಡಲು ಅಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಇದು ನನ್ನ ವೈಯಕ್ತಿಕ ತೀರ್ಮಾನವಲ್ಲ. ಮೊದಲ ವರದಿಯಲ್ಲಿ ಈ ಬಗ್ಗೆ ಪ್ರ್ತಸ್ತಾಪಿಸಿದ ಸರ್ಕಾರ ಮತ್ತೊಮ್ಮೆ ವರದಿಯನ್ನು ತಿರುಚಿ ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡಲಾಗಿದೆ ಎಂದು ತಪ್ಪು ಮಾಹಿತಿ ನೀಡಿದೆ.ಮತ್ತೊಮ್ಮೆ ಕಳುಹಿಸಿರುವುದು ಏಕೆ ಎಂದು ಕೃಷ್ಣ ಪ್ರಶ್ನಿಸಿದ್ದಾರೆ.
ಮೈಸೂರು ಮಿನಿರಲ್ಸ್ ಸಂಸ್ಥೆಗೆ ಅಪಾರ ನಷ್ಟವಿದ್ದಕ್ಕೂ ನನಗೂ ಸಂಬಂಧವಿಲ್ಲ. ರಾಜ್ಯ ಸರ್ಕಾರದ ಕೈಗಾರಿಕ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಈ ಸಂಸ್ಥೆ ಪ್ರತ್ಯೇಕ ನಿರ್ದೇಶಕ ಮಂಡಳಿ ಹೊಂದಿದೆ. ರಾಜ್ಯದಲ್ಲಿ ಈ ರೀತಿ 150ಕ್ಕೂ ಅಧಿಕ ಸ್ವಾಯುತ್ತ ಸಂಸ್ಥೆಗಳಿದೆ. ಆ ಸಂಸ್ಥೆಗಳ ಏಳಿಗೆ, ನಷ್ಟ ಕುರಿತು ಆಯಾ ನಿರ್ದೇಶಕರ ಮಂಡಳಿ ನಿರ್ಣಯ ಕೈಗೊಳ್ಳುತ್ತದೆ. ಆದರೆ, ಎಲ್ಲದ್ದಕ್ಕೂ ಮುಖ್ಯಮಂತ್ರಿಯೇ ಕಾರಣ ಎಂದು ಸಿಇಸಿಗೆ ತಪ್ಪು ಮಾಹಿತಿ ನೀಡಿರುವುದು ಸರಿಯಿಲ್ಲ ಎಂದು ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications