ಯಡಿಯೂರಪ್ಪ ವಿರುದ್ಧ ಬಚ್ಚೇಗೌಡ ರೌದ್ರಾವತಾರ

ಮಾಜಿ ಮುಖ್ಯಮಂತ್ರಿಯೊಬ್ಬರ (ಯಡಿಯೂರಪ್ಪ) ಚಿತಾವಣೆಯ ಮೇರೆಗೆ ಅನಗತ್ಯವಾಗಿ ಕೆಲವು ಸಹೋದ್ಯೋಗಿಗಳು ನಿನ್ನೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ಆಟಾಟೋಪಕ್ಕೆ ಇತಿಶ್ರೀ ಹಾಡಬೇಕಾಗಿದೆ. ನಾಲ್ಕು ವರ್ಷಗಳ ಬಿಕ್ಕಟ್ಟಿಗೆ ಮಂಗಳಹಾಡುವ ನಿರ್ಣಾಯಕ ಹಂತಕ್ಕೆ ಬಿಜೆಪಿ ಪಕ್ಷ ಬಂದು ನಿಂತಿದೆ. ಆ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಬಿಎನ್ ಬಚ್ಚೇಗೌಡ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಮಧ್ಯೆ ಬಿಜೆಪಿ ಬಿಕ್ಕಟ್ಟಿಗೆ, ಮುಖ್ಯಮಂತ್ರಿ ಸದಾನಂದ ಗೌಡರ ಬದಲಾವಣೆ ಪಟ್ಟು ಹಿಡಿದಿರುವ ಆ ಮಾಜಿ ಮುಖ್ಯಮಂತ್ರಿಗಳು ಸಚಿವರ ರಾಜೀನಾಮೆಗೆ ಕುಮ್ಮಕ್ಕು ನೀಡಿದ್ದಾರೆ. ಅವರೆಲ್ಲ ಅಮಾಯಕರು. ಆದರೆ ಆ ಮಾಜಿ ಮುಖ್ಯಮಂತ್ರಿಯೇ ಚಿತಾವಣೆ ನಡೆಸಿದ್ದಾರೆ ಎಂದು ಯಡಿಯೂರಪ್ಪ ಅವರ ಹೆಸರನ್ನು ಉಲ್ಲೇಖಿಸದೇ ಅವರ ವಿರುದ್ಧ ಕಿಡಿಕಾರಿದರು.
ನಾಯಕತ್ವದ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಬಚ್ಚೇಗೌಡರು ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳು ಸೃಷ್ಟಿಯಾಗಿರುವುದನ್ನು ತಮ್ಮ ಮಾತುಗಳಲ್ಲಿ ಸ್ಪಷ್ಟಪಡಿಸಿದರು. ನಾವು ಯಾರೆಲ್ಲ ಹಾಲಿ ಮುಖ್ಯಮಂತ್ರಿ ಸದಾನಂದ ಗೌಡರ ಜತೆ ಗುರುತಿಸಿಕೊಂಡಿದ್ದೇವೆ. ಅವರೆಲ್ಲ ಇಂದು 12 ಗಂಟೆಗೆ ಸದಾನಂದ ಗೌಡರನ್ನು ಭೇಟಿಯಾಗಲಿದ್ದೇವೆ.
ಅಲ್ಲಿ ಆ ಮಾಜಿ ಮುಖ್ಯಮಂತ್ರಿಯ ಚಿತಾವಣೆಗೆ ಸರಿಯಾಗಿ ಪಾಠ ಕಲಿಸಬೇಕು ಮತ್ತು ಅದಕ್ಕೆ ಇಂದೇ ಕೊನೆ ಹಾಡಬೇಕು ಎಂದು ಆಗ್ರಹಿಸುತ್ತೇವೆ ಎಂದು ಸಚಿವ ಬಿಎನ್ ಬಚ್ಚೇಗೌಡ ಅವರು ಯಡಿಯೂರಪ್ಪನವರತ್ತ ಕೆಂಡಕಾರುತ್ತಲೇ ಮಾತನಾಡಿದರು.
ಈ ಮಧ್ಯೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ 9 ಸಚಿವರ ರಾಜೀನಾಮೆ ಪತ್ರಗಳನ್ನು ಮುಖ್ಯಮಂತ್ರಿ ಸದಾನಂದ ಗೌಡರು ಅಂಗೀರಿಸುವುದಿಲ್ಲ. ಇದು ವರಿಷ್ಠರ ತೀರ್ಮಾನವೂ ಆಗಿದೆ ಎಂದು ಹೇಳಿದರು.
'ಸದಾನಂದ ಗೌಡರು ರಾಜ್ಯಪಾಲ ಎಚ್ ಆರ್ ಭಾರಧ್ವಾಜ್ ಅವರನ್ನು ಭೇಟಿ ಮಾಡುತ್ತಿರುವ ಬಗ್ಗೆ ಮಾಹಿತಿಯಿಲ್ಲ. ಅದೊಂದು ಪೂರ್ವನಿಗದಿತ ಭೇಟಿ ಇರಬಹುದು. ಆದರೆ ಖಂಡಿತ ಹಾಲಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಅವರು ತೆರಳಿಲ್ಲ' ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.
ಆದರೆ ಹಾಗೆ ಈಶ್ವರಪ್ಪನವರು ಸುದ್ದಿಗಾರರಿಗೆ ಮಾಹಿತಿ ನೀಡುವ ಕೆಲವೇ ಕ್ಷಣಗಳ ಮುನ್ನ ಸದಾನಂದ ಗೌಡರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications