ಭಾರದ್ವಾಜ್- ಸದಾನಂದರ ಭೇಟಿ ಸುಖಾಂತ್ಯ
ಬೆಂಗಳೂರು, ಜೂನ್ 30: ಮುಖ್ಯಮಂತ್ರಿ ಸದಾನಂದ ಗೌಡರು ರಾಜ್ಯಪಾಲ ಭಾರಧ್ವಾಜ್ ಜತೆಗಿನ ನಿಗದಿತ ಭೇಟಿಯನ್ನು ಕೇವಲ 15 ನಿಮಷಗಳಲ್ಲಿ ಮುಕ್ತಾವಾಗಿದ್ದು, ಉಭಯಕುಶಲೋಪರಿ ಮಧ್ಯೆ ಒಂದಷ್ಟು ಆಡಳಿತ ಸಂಬಂಧಿ ಮಾತುಕತೆ ನಡೆಸುವ ಮೂಲಕ ಭೇಟಿಯನ್ನು ಸುಖಾಂತ್ಯಗೊಳಿಸಿದ್ದಾರೆ.

ಅದಕ್ಕೂ ಮುನ್ನ ಸದಾನಂದ ಗೌಡರು ಶನಿವಾರ ಬೆಳಗ್ಗೆ ನೇರವಾಗಿ ರಾಜ್ಯಪಾಲ ಭಾರಧ್ವಾಜ್ ಅವರನ್ನು ಭೇಟಿ ಮಾಡಿ, ಸಚಿವರುಗಳು ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತಾರೆ. ಅದರೊಂದಿಗೆ ಹಾಲಿ ಬಿಜೆಪಿ ಸರಕಾರ ಪತನಗೊಳ್ಳಲಿದೆ ಎಂಬ ಸುದ್ದಿ ಸರಿದಾಡಿತ್ತು.
'ಬಜೆಟ್ ಅಂಗೀಕಾರ ಮಾಡುವುದು ಸದ್ಯಕ್ಕೆ ತಮ್ಮ top most priority ಆಗಿದೆ. ಆದ್ದರಿಂದ ವಿಧಾನಮಂಡಲ ಅಧಿವೇಶನ ಕರೆದು, ಹಣಕಾಸು ಮಸೂದೆಗೆ ಅಂಗೀಕಾರ ಪಡೆಯುವ ಮಹತ್ತರ ಜವಾಬ್ದಾರಿ ನನ್ನ ಮೇಲಿದೆ. ಸರಕಾರಿ ನೌಕರರು ಮತ್ತು ರಾಜ್ಯದ ಅಭಿವೃದ್ಧಿ ಕೆಲಸಗಳಿಗಾಗಿ ಹಣ ಬಿಡುಗಡೆ ಮಾಡುವುದಕ್ಕೆ ಈ ಬಜೆಟ್ ಅಂಗೀಕಾರ ಅತ್ಯವಶ್ಯಕವಾಗಿದೆ. ಆದನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯಪಾಲ ಭಾರಧ್ವಾಜ್ ಅವರನ್ನು ಭೇಟಿ ಮಾಡಿದ್ದೇನೆ' ಎಂದು ಮುಖ್ಯಮಂತ್ರಿ ಸದಾನಂದ ಗೌಡರು ಸ್ಪಷ್ಟಪಡಿಸಿದ್ದಾರೆ.
ಇನ್ನು ನಿನ್ನೆ ಕೆಲವು ಸಚಿವರುಗಳು ಸಾಮೂಹಿಕ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸದಾನಂದರು 'ಅದು ಪಕ್ಷದ ಆಂತರಿಕ ವಿಚಾರ. ಬಹಿರಂಗವಾಗಿ ಚರ್ಚಿಸಲಾಗದು. ಪಕ್ಷದ ವರಿಷ್ಠರ ಸೂಚನೆಯಂತೆ ಸದ್ಯಕ್ಕೆ ಸಚಿವರುಗಳ ರಾಜೀನಾಮೆ ಅಂಗೀಕರಿಸುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
ಭೇಟಿಯ ವೇಳೆ ನಿನ್ನೆ ತಮ್ಮ ಸಂಪುಟದ 9 ಸಹದ್ಯೋಗಿಗಳು ರಾಜೀನಾಮೆ ಸಲ್ಲಿಸಿರುವ ಬಗ್ಗೆಯೂ ಸೂಕ್ಷ್ಮವಾಗಿ ಮತ್ತು ಕ್ಲುಪ್ತವಾಗಿ ಚರ್ಚಿಸಿದ್ದೇನೆ. 'ಅದು ಪಕ್ಷದ ಆಂತರಿಕ ವಿಷಯವಾಗಿದ್ದು, ಸರಕಾರದ ಅಸ್ತಿತ್ವಕ್ಕೆ ಯಾವುದೇ ಬಾಧೆಯಿಲ್ಲ' ಎಂದು ರಾಜ್ಯಪಾಲ ಭಾರಧ್ವಾಜ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಅವರು ಹೇಳಿದರು.
ವಿಧಾನಮಂಡಲ ಅಧಿವೇಶನ ನಿರ್ಣಾಯಕ: ಹೇಗೂ ಮುಖ್ಯಮಂತ್ರಿಯೇ ಜುಲೈ ಮೊದಲ ವಾರದಲ್ಲಿ ವಿಧಾನಮಂಡಲ ಅಧಿವೇಶನ ಕರೆದು ಬಜೆಟ್ ಅನುಮೋದನೆ ಅಂಗೀಕರಿಸುವುದಾಗಿ ಹೇಳುತ್ತಿದ್ದಾರೆ. ಆಗ ತನ್ನಷ್ಟಕ್ಕೆ ತಾನೆ ಸರಕಾರದ ಬಂಡವಾಳ ಬಯಲಾಗುತ್ತದೆ. ಬಹುಮತವಿದ್ದರೆ ಅಂಗೀಕಾರ ಆಗುತ್ತದೆ. ಇಲ್ಲವಾದಲ್ಲಿ ಸರಕಾರ ತನ್ನಷ್ಟಕ್ಕೆ ತಾನೆ ಉರುಳಲಿದೆ. ಅಂತಹುದರಲ್ಲಿ ತಾನು ಆತುರಕ್ಕೆ ಬಿದ್ದು ಈಗಲೇ ಬಹುಮತ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿಗೆ ಸೂಚಿಸುವ ಜರೂರತ್ತು ಇಲ್ಲ ಎಂದು ಮನಗಂಡು ಸಿಎಂ ಸದಾನಂದರ ಜತೆಗಿನ ಭೇಟಿಯನ್ನು ರಾಜ್ಯಪಾಲ ಭಾರಧ್ವಾಜ್ ಅವರು ಸುಖಾಂತ್ಯದಲ್ಲಿ ಮುಗಿಸಿದ್ದಾರೆ ಎಂದು ರಾಜಕೀಯ ಪರಿಣತರು ವಿಶ್ಲೇಷಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications