ಗೌಡರ ಪದಚ್ಯುತಿ ಪ್ರಜಾಪ್ರಭುತ್ವ ವಿರೋಧಿ : ಲೋಕಸತ್ತಾ

ಹನ್ನೊಂದು ತಿಂಗಳುಗಳ ಹಿಂದೆ ಬಿಜೆಪಿ ಪಕ್ಷದ ಎಲ್ಲ ಶಾಸಕರು ಪ್ರಜಾಸತ್ತಾತ್ಮಕವಾಗಿ ಡಿ.ವಿ. ಸದಾನಂದ ಗೌಡರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದರು. ಪ್ರಸ್ತುತ ಮುಖ್ಯಮಂತ್ರಿ ಸ್ಥಾನಕ್ಕೆ ಅಭ್ಯರ್ಥಿ ಆಗಬಯಸಿರುವ ಜಗದೀಶ್ ಶೆಟ್ಟರ್ ಅವರು ಅಂದಿನ ಆಯ್ಕೆ ಪ್ರಕ್ರಿಯೆಯಲ್ಲಿಯೂ ಸದಾನಂದ ಗೌಡರಿಗೆ ಪ್ರತಿಸ್ಪರ್ಧಿಯಾಗಿದ್ದರು ಎಂಬುದು ಗಮನಾರ್ಹ ಅಂಶ.
ಈಗ ಸದಾನಂದ ಗೌಡರನ್ನು ಅಸಂವಿಧಾನಿಕವಾಗಿ ಕಿತ್ತೆಸೆದು ಜಗದೀಶ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಹೊರಟಿರುವುದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಘೋರ ಅನ್ಯಾಯ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಇಟ್ಟಿರುವ ಹಾಗೂ ಸಂವಿಧಾನಿಕ ಸಂಸ್ಥೆಗಳನ್ನು ಬಲಪಡಿಸುವತ್ತ ಹೆಜ್ಜೆ ಇಟ್ಟಿರುವ ಲೋಕಸತ್ತಾ ಪಕ್ಷವು ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಲೋಕಸತ್ತಾ ಪಕ್ಷದ ವಕ್ತಾರರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಈ ಪ್ರಹಸನವು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಧ್ಯೆ ಯಾವುದೇ ತೆರನಾದ ವ್ಯತ್ಯಾಸವಿಲ್ಲವೆಂಬುದನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ. ಹಣ ಮತ್ತು ಅಧಿಕಾರ ಈ ಎರಡು ಪಕ್ಷಗಳ ಮುಖ್ಯ ಗುರಿಯಾಗಿದೆ. ಜನತೆಯನ್ನು ಒಂದುಗೂಡಿಸಿ ಸಮಾಜದ ಒಳಿತಿಗಾಗಿ ದುಡಿಯುವ ಬದಲು ಸಮಾಜವನ್ನು ಜಾತಿ, ಧರ್ಮ, ಗಡಿಗಳ ಆಧಾರದ ಮೇಲೆ ವಿಭಜಿಸಲು ಹೊರಟಿದೆ. ಇವರಿಗೆ ಅಧಿಕಾರದಲ್ಲಿ ಮುಂದುವರೆಯಲು ಯಾವುದೇ ನೈತಿಕತೆಯಿಲ್ಲ ಎಂದು ಅವರು ನುಡಿದಿದ್ದಾರೆ.
ಪ್ರಬುದ್ಧ ನಾಯಕತ್ವದ ಕೊರತೆ ಪ್ರಸ್ತುತ ಶಾಸಕರ ವರ್ತನೆಯಿಂದ ಎದ್ದು ಕಾಣುತ್ತಿದೆ. ಜನತೆ ಮತ ಹಾಕಿ ಇವರನ್ನು ಆಯ್ಕೆ ಮಾಡಿದ್ದು ಕುದುರೆ ವ್ಯಾಪಾರಕ್ಕಾಗಿ ಅಲ್ಲ. ರಾಜ್ಯದಲ್ಲಿ ಈಗ ತಲೆದೋರಿರುವ ಬರ, ವಿದ್ಯುತ್ ಕ್ಷಾಮ, ಬೆಲೆ ಏರಿಕೆ ಮುಂತಾದ ಭೀಕರ ಸಮಸ್ಯೆಗಳನ್ನು ಮರೆತು ಜಾತಿ ಆಧಾರದ ಮೇಲೆ ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದು ನಮ್ಮ ದುರಂತ ಎಂದು ವ್ಯಂಗ್ಯವಾಡಿದ್ದಾರೆ.
ನಿಸ್ವಾರ್ಥವಾಗಿ ಸಾರ್ವಜನಿಕ ಸೇವೆ ಮಾಡಲು ಇಚ್ಛಿಸುವವರು, ಈಗಾಗಲೇ ಸಾರ್ವಜನಿಕ ರಂಗಕ್ಕೆ ಕೊಡುಗೆಯನ್ನು ನೀಡಿರುವವರು ಚುನಾವಣಾ ರಾಜಕೀಯದಲ್ಲಿ ಧುಮುಕಬೇಕೆಂದು ಈ ಮೂಲಕ ಲೋಕಸತ್ತಾ ಕರೆ ನೀಡುತ್ತಿದೆ. ನಮ್ಮ ರಾಜ್ಯಕ್ಕೆ ಹೊಸ ನಾಯಕರುಗಳು ಬೇಕಾಗಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications