ವಕ್ಫ್ ಆಸ್ತಿ 2.5 ಲಕ್ಷ ಕೋಟಿ ಹಂಚಲು ಆಗ್ರಹ

ನಗರದ ಕೇಂದ್ರ ಭಾಗದಲ್ಲಿ ವಕ್ಫ್ ಗೆ ಸೇರಿದ ಸುಮಾರು 2.6 ಲಕ್ಷ ಕೋಟಿ ಆಸ್ತಿ ಇದೆ. ಈ ಆಸ್ತಿಗಳ ಒಟ್ಟು ಆದಾಯದಿಂದ ರಾಜ್ಯದ ಇಡೀ ಮುಸ್ಲಿಮ್ ಸಮುದಾಯದ ಅಭಿವೃದ್ಧಿ ಮಾಡಲು ಸಾಧ್ಯ. ಈ ಬಗ್ಗೆ ಮುಸ್ಲಿಮರಿಗೆ ಜಾಗೃತಿ ಮೂಡಿಸಲು ರಾಜ್ಯದೆಲ್ಲೆಡೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆ ಹೇಳಿದೆ.
ವಕ್ಫ್ ಆಸ್ತಿ ಎಲ್ಲವೂ ಧರ್ಮ ಹಾಗೂ ದೀನ ದಲಿತರ ಏಳಿಗೆಗಾಗಿ ದಾನಿಗಳು ನೀಡಿದ ಕೊಡುಗೆ. ಕರ್ನಾಟಕ ವಕ್ಫ್ ಬೋರ್ಡ್ ತನ್ನ ಆಸ್ತಿಯನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕಿದೆ. ಈಗಲೂ ಅನೇಕರು ನಿರ್ಗತಿಕರಾಗಿ ಸೂರಿಲ್ಲದೆ ಕಷ್ಟಪಡುತ್ತಿದ್ದಾರೆ. ಅನಕ್ಷರತೆ, ಬಡತನ ಕಿತ್ತು ತಿನ್ನುತ್ತಿದೆ. ಆದರೆ, ದಾನಿಗಳು ನೀಡಿದ ಹಣ ದುರುಪಯೋಗವಾಗುತ್ತಿದೆ ಎಂದು ಎನ್ ಜಿಒ ಸಂಸ್ಥೆ ಹೇಳಿದೆ.
ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಸರ್ಕಾರ ಹಿಂದೆ ಬಿದ್ದಿದೆ. ಮಮ್ತಾಜ್ ಅಲಿಖಾನ್ ನಂತರ ಸರ್ಕಾರದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಕ್ಫ್ ಬೋರ್ಡ್ ಸದಸ್ಯರ ಕಚ್ಚಾಟದಿಂದ ವಕ್ಫ್ ಭೂಮಿ ಕಬಳಿಕೆ ಬಹಿರಂಗವಾಗದೆ ಉಳಿಯುವ ಶಂಕೆ ಇದೆ.[ವಿವರಗಳಿಗೆ ಓದಿ]
ಮುಸ್ಲಿಂ ಸಮುದಾಯದಕ್ಕೆ ವಕ್ಫ್ ಬೋರ್ಡ್ ನ ಆಸ್ತಿ ವಿವರದ ಬಗ್ಗೆ ಅರಿವಿಲ್ಲ. ವಕ್ಫ್ ನಿಂದ ಬರುವ ಆದಾಯ ದೀನ ದಲಿತರ ಉಪಯೋಗಕ್ಕೆ ಮೀಸಲು ಎಂಬುದನ್ನು ಎಲ್ಲರಿಗೂ ಮನದಟ್ಟು ಮಾಡಿಕೊಡಬೇಕಿದೆ.
ಕನಕಪುರ ತಾಲೂಕಿನಲ್ಲಿ ವಕ್ಫ್ ಬೋರ್ಡ್ ಗೆ ಸೇರಿದ ಸುಮಾರು 6 ಎಕರೆ 28 ಗುಂಟೆ ಭೂಮಿಯನ್ನು ಸ್ಥಳೀಯ ಮದ್ಯದ ದೊರೆಗಳು ಕಬಳಿಸಿದ್ದಾರೆ. ಕೋರ್ಟ್ ಆದೇಶ, ಸರ್ಕಾರದ ಹುಕಂಗೆ ಬೆಲೆಯೇ ಇಲ್ಲ. ಸ್ಥಳೀಯ ಮುಸ್ಲಿಂ ಸಮುದಾಯದವನ್ನು ರೌಡಿಗಳಿಂದ ಹೆದರಿಸಿಟ್ಟುಕೊಳ್ಳಲಾಗಿದೆ ಎಂದು ಎನ್ ಜಿಒ ಆರೋಪಿಸಿದೆ.
ರಾಜ್ಯ ಅಲ್ಪ ಸಂಖ್ಯಾತರ ಆಯೋಗಕ್ಕೆ ದೂರು ನೀಡಲಾಯಿತು. ಆಯೋಗ ಸ್ಥಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ, ಕ್ರಮ ಜರುಗಿಸುವಂತೆ ಹೇಳಿದರೂ ಪ್ರಯೋಜನವಾಗಲಿಲ್ಲ.
ಬಹುಕೋಟಿ ವಕ್ಫ್ ಭೂ ಹಗರಣದ ಹಿಂದೆ ಸರ್ಕಾರದ ಪ್ರಭಾವಿ ನಾಯಕರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಭೂ ಹಗರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸುವಂತೆ ಸರ್ಕಾರ ಈ ಹಿಂದೆ ಆದೇಶಿಸಿದ್ದರೂ ಲೋಕಾಯುಕ್ತ ತನಿಖೆ ಇನ್ನೂ ಕಾರ್ಯಗತವಾಗಿಲ್ಲ. ಹೀಗಾಗಿ ಮುಸ್ಲಿಮರಿಗೆ ವಕ್ಫ್ ಬೋರ್ಡ್ ಅವ್ಯವಹಾರ, ಭೂ ಹಗರಣದ ಬಗ್ಗೆ ವಿಸ್ತಾರವಾಗಿ ವಿವರಿಸಲು ಜಾಗೃತಿ ಅಭಿಯಾನಕ್ಕೆ ಮುಂದಾಗಿದ್ದೇವೆ ಎಂದು ವಕ್ಫ್ ಸರಂಕ್ಷಣಾ ಸಮಿತಿ ಹೇಳಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications