ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಫಲಿತಾಂಶ

ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಮಾರ್ಕ್ ಕಾರ್ಡ್ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ಸೆಕೆಂಡರಿ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ನಿರ್ದೇಶಕ ಡಿ ವೆಂಕಟೇಶಯ್ಯ ತಿಳಿಸಿದ್ದಾರೆ.
ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ ಶೇ. 76.23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದು, ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಇತಿಹಾಸದಲ್ಲಿ ಸಾರ್ವಕಾಲಿಕ ದಾಖಲೆ ಎನಿಸಿದೆ.
ಏಪ್ರಿಲ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ 2 ಲಕ್ಷ ವಿದ್ಯಾರ್ಥಿಗಳಲ್ಲಿ ಸುಮಾರು 3/4 ರಷ್ಟು ವಿದ್ಯಾರ್ಥಿಗಳು ಈ ಜೂನ್ ತಿಂಗಳಲ್ಲಿ ನಡೆದ ಸಪ್ಲಿಮೆಂಟರಿ ಪರೀಕ್ಷೆ ಬರೆದಿದ್ದರು. ಉಳಿದ ಶೇ. 25 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ. ಎಸ್ಸೆಸ್ಸೆಲ್ಸಿ ನಂತರದ ಶಿಕ್ಷಣ ಮುಂದುವರಿಸಿದಿರುವ ಸಂಗತಿ ಇಂದಿನ ಸಾಮಾಜಿಕ-ಆರ್ಥಿಕ ಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಡಿ ವೆಂಕಟೇಶಯ್ಯ ಅವರು 'ಒನ್ ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.
ಈ ಮೊದಲು ಸಪ್ಲಿಮೆಂಟರಿ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ (ಜೂನ್, ಸೆಪ್ಟೆಂಬರ್) ನಡೆಸಲಾಗುತ್ತಿತ್ತು. ಆದರೆ ಈಗ, ಒಂದು ವರ್ಷ ವಿದ್ಯಾರ್ಥಿಗಳಿಗೆ ಅನಾವಶ್ಯಕ ತಡವಾಗುವುದರಿಂದ ಏಪ್ರಿಲ್-ಜೂನ್ ತಿಂಗಳಲ್ಲೇ ನಡೆಸಲಾಗುತ್ತಿದೆ.
ಕರ್ನಾಟಕದಲ್ಲಿ ಒಟ್ಟು 14,000 ಹೈಸ್ಕೂಲುಗಳಿವೆ. ಇವುಗಳಲ್ಲಿ 4.600 ಹೈಸ್ಕೂಲುಗಳು ಸರ್ಕಾರದ ಅನುದಾನಕ್ಕೆ ಒಳಪಟ್ಟಿವೆ. ಉಳಿದ 2,500 ಪ್ರೌಢಶಾಲೆಗಳು ಖಾಸಗಿ ಸಂಸ್ಥೆಗಳ ಅಧೀನದಲ್ಲಿವೆ. ಪ್ರತಿ ಜಿಲ್ಲೆ ತಲಾ ಒಂದೊಂದು ಮೊರಾರ್ಜಿ ದೇಸಾಯಿ ಹೈಸ್ಕೂಲ್ ಗಳನ್ನು ಹೊಂದಿದ್ದಲ್ಲದೇ ಕೆಲವು ಪಟ್ಟಣ ಕಾರ್ಪೋರೇಷನ್ ಅಧೀನಕ್ಕೆ ಒಳಪಟ್ಟ ಪ್ರೌಢಶಾಲೆಗಳೂ ಇವೆ. (ಒನ್ ಇಂಡಿಯಾ ಕನ್ನಡ)
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications