ಲಿಂಗಾಯತ ಮುಖಂಡರ ಮೇಲೆ ತಿರುಗಿಬಿದ್ದ ಒಕ್ಕಲಿಗರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಮಠದ ಸ್ವಾಮೀಜಿ ನಂಜಾವದೂತ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಂಗಳೂರಿನ ಪುರಭವನದಲ್ಲಿ ಪ್ರತಿಭಟನಾ ಸಭೆಯನ್ನು ಸೋಮವಾರ ಆಯೋಜಿಸಲಾಗಿತ್ತು. ನಂತರ ಅಖಿಲ ಕರ್ನಾಟಕ ಒಕ್ಕಲಿಗರ ರಾಜಕೀಯ ವೇದಿಕೆ ವಿಶ್ವೇಶ್ವರ ಪುರದಲ್ಲಿರುವ ಒಕ್ಕಲಿಗರ ಸಂಘದಿಂದ ಟೌನ್ ಹಾಲ್ ವರೆಗೆ ಮೆರವಣಿಗೆ ನಡೆಸಿ ಸದಾನಂದ ಗೌಡರನ್ನು ಕೆಳಗಿಳಿಸಿದ್ದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿತು.
ಶಿವಮೊಗ್ಗ, ಸೂಳ್ಯ, ಮೈಸೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ, ಡಿವಿ ಸದಾನಂದ ಗೌಡರನ್ನು ಪದಚ್ಯುತಿಗೊಳಿಸಿದ್ದನ್ನು ವಿರೋಧಿಸಿ ಒಕ್ಕಲಿಗರು ಭಾರೀ ಪ್ರತಿಭಟನೆಗಿಳಿದಿದ್ದಾರೆ. ಲಿಂಗಾಯತ ಸಮುದಾಯದ ನಾಯಕರ ಪ್ರತಿಕೃತಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಲಿಂಗಾಯತ ನಾಯಕರು ರಾಜ್ಯವನ್ನು ಇಬ್ಭಾಗ ಮಾಡಲು ಹವಣಿಸುತ್ತಿದ್ದಾರೆ ಎಂದು ಅವರು ಕೆಂಡ ಕಾರಿದ್ದಾರೆ.
ಸ್ವಾಮೀಜಿ ಉವಾಚ : ಬೆಂಗಳೂರಿನ ಟೌನ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ನಂಜಾವಧೂತ ಸ್ವಾಮೀಜಿಗಳು, ಲಿಂಗಾಯತ ರಾಜಕೀಯ ನಾಯಕರು ಒಕ್ಕಲಿಗರನ್ನು ತುಳಿಯಲು ನೋಡುತ್ತಿದ್ದಾರೆ. ಆದರೆ, ಒಕ್ಕಲಿಗರು ಯಾರಿಗೂ ಅನ್ಯಾಯ ಬಯಸಿದವರಲ್ಲ, ಯಾರನ್ನೂ ತುಳಿದವರಲ್ಲ. ಒಕ್ಕಲಿಗರ ಮೇಲಿನ ದಬ್ಬಾಳಿಕೆ ಹೀಗೇ ಮುಂದುವರಿದರೆ ಒಕ್ಕಲಿಗರು ಕೂಡ ಲಿಂಗಾಯತ ಸಮುದಾಯಕ್ಕೆ ಅಷ್ಟೇ ಪ್ರಮಾಣದ ಹೊಡೆತ ನೀಡಲಿದ್ದಾರೆ ಎಂದು ಚಿತಾವಣೆ ನೀಡಿದರು. ಪ್ರತಿಭಟಿಸುವಾಗ ಕೈಗೆ ಕೆಲಸ ನೀಡಬೇಡಿ, ಬುದ್ಧಿಗೆ ಕೆಲಸ ನೀಡಿ ಎಂದು ಪ್ರತಿಭಟನಾಕಾರರಿಗೆ ಸ್ವಾಮೀಜಿ ಬುದ್ಧಿಮಾತು ಹೇಳಿದರು.
ಹಿಂದೆ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾಗ ರೈತರ ಸಾಲ ಮನ್ನಾ ಮಾಡುವಂತಹ ಧೈರ್ಯ ತೋರಿದವರು ಒಕ್ಕಲಿಗ ರಾಜಕೀಯ ನಾಯಕರು. ರಾಜ್ಯದಲ್ಲಿ ಇಂದು ಕೂಡ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ರೈತರ ರಕ್ಷಣೆಗೆ ಬರುವುದು ಒಕ್ಕಲಿಗ ರಾಜಕಾರಣಿಗಳಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಒಕ್ಕಲಿಗರಾದ ಸದಾನಂದ ಗೌಡರನ್ನು ಅವಮಾನಕರ ರೀತಿಯಲ್ಲಿ ಕೆಳಗಿಳಿಸಿದ್ದನ್ನು ಸಹಿಸಲು ಸಾಧ್ಯವೇ ಇಲ್ಲ. ಒಕ್ಕಲಿಗರು ತಿರುಗಿಬಿದ್ದರೆ ಯಾರೂ ಉಳಿಯಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, ಶಾಂತಿನಾಥ ಸ್ವಾಮಿಜಿ, ಸಿದ್ದರಾಮ ಚೈತನ್ಯ ಸ್ವಾಮೀಜಿ, ಒಕ್ಕಲಿಗರ ಒಕ್ಕೂಟ, ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭಾಗವಹಿಸಿ, ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಳಂಕವಿಲ್ಲದೆ ರಾಜ್ಯಭಾರ ಮಾಡಿದ ಸದಾನಂದ ಗೌಡರನ್ನು ಮತ್ತೆ ಮುಖ್ಯಮಂತ್ರಿ ಪದವಿಯ ಮೇಲೆ ಕೂಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜಭವನ ಮುತ್ತಿಗೆ : ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನ ಹತ್ತಿರವಾಗುತ್ತಿದ್ದಂತೆ ದೆಹಲಿಯ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ಈಗಾಗಲೆ ಬೆಂಗಳೂರಿಗೆ ಬಂದಿದ್ದಾರೆ. ಆದರೆ, ಬಿಜೆಪಿಯ ಉಳಿದ ರಾಷ್ಟ್ರೀಯ ನಾಯಕರು ಬೆಂಗಳೂರ ಒಳಗೆ ಕಾಲಿಡದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಗ್ಗೆ ಹಾಕುವುದಾಗಿ ನಾರಾಯಣ ಗೌಡ ಗುಡುಗು ಹಾಕಿದ್ದಾರೆ.
ಒಲ್ಲಗಿರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಿಜೆಪಿ ನಾಯಕರನ್ನು ನಗರದ ಒಳಗೆ ಬರಲು ಬಿಡುವುದಿಲ್ಲ. ಇಷ್ಟೇ ಅಲ್ಲ, ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕರಿಸುವ ದಿನ ರಾಜಭವನಕ್ಕೆ ಒಕ್ಕಲಿಗರೆಲ್ಲರು ಮುತ್ತಿಗೆ ಹಾಕಲಿದ್ದಾರೆ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಘೋಷಿಸಿದರು. ಜೈಲಿಗೆ ಹೋದರೂ ಸರಿ, ಪ್ರಾಣ ಹೋದರೂ ಸರಿ ಒಕ್ಕಲಿಗರ ವಿರೋಧಿ ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ ಎಂದು ನಾರಾಯಣ ಗೌಡ ನುಡಿದರು.
ಈ ನಡುವೆ ಬಂದಿರುವ ಮತ್ತೊಂದು ಸುದ್ದಿಯೆಂದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎಲ್ಲ ಒಕ್ಕಲಿಗ ಸಮುದಾಯ ಸಭೆ ಸೇರಲಿದ್ದಾರೆ. ಹಾಗೆಯೆ, ಶೆಟ್ಟರ್ ಅವರ ಪದಗ್ರಹಣವನ್ನು ವಿರೋಧಿಸಿ ಸಂಪುಟಕ್ಕೆ ಒಕ್ಕಲಿಗ ಸಮುದಾಯದ ಶಾಸಕರು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದೆಲ್ಲ ಸಾಲದು ಎಂಬಂತೆ, ಉಪ ಮುಖ್ಯಮಂತ್ರಿ ಪದವಿಗೂ ಭಾರೀ ಪೈಪೋಟಿ ಶುರುವಾಗಿದೆ. ಮಂಗಳವಾರ ಕ್ಯಾಪಿಟೋಲ್ ಹೋಟೆಲಿನಲ್ಲಿ ನಾಯಕರ ಸಭೆ ನಡೆಯಲಿದ್ದು, ಉಪಮುಖ್ಯಮಂತ್ರಿ ಪದವಿ ಸೃಷ್ಟಿ, ಸಂಪುಟ ವಿಸ್ತರಣೆ ಕುರಿತಂತೆ ಇಡೀ ದಿನ ಚರ್ಚೆ ನಡೆಯಲಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications