ಯುಬಿ ಸ್ಪಿರಿಟ್ಸ್ ಉಳಿಸಲು ಆರ್ ಸಿಬಿ ಮಾರಾಟ : ಕಿಂಗ್ ಮಲ್ಯ

ಕಿಂಗ್ ಫಿಷರ್ ಏರ್ ಲೈನ್ಸ್ ನಂತರ ಯುನೈಟೆಡ್ ಸ್ಪಿರಿಟ್ಸ್ ಸಾಲಬಾಧೆ ತೀರಿಸಿಕೊಳ್ಳಲು ಇಂಡಿಯನ್ ಪ್ರಿಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಾರಾಟ ಮಾಡಲು ವಿಜಯ್ ಮಲ್ಯ ಮುಂದಾಗಿದ್ದಾರೆ.
ವೈಟ್ ಅಂಡ್ ಮ್ಯಾಕೆ ಬ್ರಾಂಡ್ ಖರೀದಿಸಿದ ಮೇಲೆ ಯುನೈಟೆಡ್ ಸ್ಪಿರಿಟ್ಸ್ ಜಾಗತಿಕವಾಗಿ ಉನ್ನತ ಸ್ಥಾನಕ್ಕೇರಿತ್ತು. ಆದರೆ, ಸುಮಾರು 7,000 ಕೋಟಿ ರು ಸಾಲ ಉಳಿಸಿಕೊಂಡಿರುವ ಯುನೈಟೆಡ್ ಸ್ಪಿರಿಟ್ಸ್ ಗೆ ರಿಲೀಫ್ ನೀಡಲು ಆಸ್ತಿ ಮಾರಾಟ, ಷೇರು ಮಾರಾಟಕ್ಕೆ ಕಿಂಗ್ ಮಲ್ಯ ಮುಂದಾಗಿದ್ದಾರೆ.
ಯುನೈಟೆಡ್ ಬ್ರೂವರೀಸ್ ನ ಸಾಲ ತೀರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 1,5000 ಕೋಟಿ ರು ನಿಂದ 2,000 ಕೋಟಿ ಮೊತ್ತ ಷೇರುಗಳನ್ನು ಮಾರಾಟ ಮಾಡುವ ಸಾಧ್ಯತೆ ಹೆಚ್ಚಿದೆ.
ಸಾಲದ ಪ್ರಮಾಣ ತಗ್ಗಿಸಲು ಮೂಲ ಬಂಡವಾಳವಲ್ಲದ ಆಸ್ತಿಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ. ಆರ್ ಸಿಬಿ ಷೇರುಗಳು, ಯುಬಿಎಲ್ ಷೇರುಗಳು ಇದರಲ್ಲಿ ಸೇರಿದೆ. ಆದರೆ, ಸದ್ಯಕ್ಕೆ ಒಳ್ಳೆ ಬೆಲೆ ಸಿಗುವ ತನಕ ಕಾಯಲಾಗುವುದು ಎಂದು ಯುನೈಟೆಡ್ ಸ್ಪಿರಿಟ್ಸ್ ಲಿ.ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಕೂಪರ್ ಹೇಳಿದ್ದಾರೆ.
ಕಳೆದ ಆರ್ಥಿಕ ವರ್ಷದಲ್ಲಿ 120 ಮಿಲಿಯನ್ ಕೇಸ್ ಗಳನ್ನು ಮಾರಾಟ ಮಾಡಿದ್ದ ಯುಸಿಎಲ್, FY16ರ ಹೊತ್ತಿಗೆ 200 ಮಿಲಿಯನ್ ಕೇಸುಗಳನ್ನು ಮಾರಾಟ ಮಾಡುವ ಗುರಿ ಹೊಂದಿತ್ತು, ಯುಸಿಎಲ್ ತನ್ನ ಗುರಿ ತಲುಪಬೇಕಾದರೆ ತನ್ನ ಬ್ರಾಂಡ್ ಮೌಲ್ಯವನ್ನು ಉಳಿಸಿಕೊಳ್ಳಬೇಕಿದೆ.
ಎಣ್ಣೆ ಕಂಪನಿ ಕಥೆ: ಕೊಂಕಣಿ ಸಮುದಾಯಕ್ಕೆ ಸೇರಿದ ವಿಜಯ್ ಮಲ್ಯರ ಖಾಸಗಿ ಆಸ್ತಿ ಮೊತ್ತ 1.4 ಬಿಲಿಯನ್ ಡಾಲರ್ ಎಂದು ಫೋರ್ಬ್ಸ್ ವರದಿ ಹೇಳುತ್ತದೆ. ಕಿಂಗ್ ಆಫ್ ಗುಡ್ ಟೈಮ್ಸ್ ಎಂದೇ ಕರೆಯಲ್ಪಡುವ ಮಲ್ಯ ಮದ್ಯದ ದೊರೆಯಾಗಿ ಈಗಲೂ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿ ಕೂತಿದ್ದಾರೆ.
ಮಲ್ಯಗೆ ಇಂದಿಗೂ ಯುಬಿಗೇ ಆಧಾರ: ಸುಮಾರು 6 ಕಂಪನಿಗಳ ಸಮೂಹ ಹೊಂದಿರುವ ಯುನೈಟೆಡ್ ಬ್ರಿವೆರೆಸ್(UB)ಸಂಸ್ಥೆಯ ಒಟ್ಟಾರೆ ಮಾರುಕಟ್ಟೆ ಮೌಲ್ಯ 22,850 ಕೋಟಿ ರೂ ತೂಗುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೌಲಯ್ 464 ಕೋಟಿ ರೂ. ಇದ್ದದ್ದು ಷೇರುಗಳ ಮೌಲ್ಯವನ್ನು 1200 ಕೋಟಿಗೆ ಹೆಚ್ಚಿಸಿಕೊಂಡಿದೆ. ಅಲ್ಲದೆ ಐಪಿಎಲ್ ನಲ್ಲಿ ಆರ್ ಸಿಬಿ ಕಪ್ ಗೆಲ್ಲದಿದ್ದರೂ ಮಲ್ಯ ಬುದ್ಧಿವಂತ.
ಆಟಗಾರರು, ಅಂಪೈರ್, ಅಧಿಕಾರಿಗಳಿಗೆ ಕಿಂಗ್ ಫಿಷರ್ ವಿಮಾನ ಕಳಿಸುತ್ತಿದ್ದ. ಡೆಲ್ಲಿ ಡೇರ್ ಡೆವಿಲ್ಸ್, ರಾಜಸ್ಥಾನ್ ರಾಯಲ್ಸ್ ನಲ್ಲೂ ಒಂದಿಷ್ಟು ಷೇರು ಹಾಕಿ ಹಣ ಗಳಿಸಿಕೊಂಡ. ಎಫ್ 1 ಟೀಮ್ ಅನ್ನು 610.2 ಕೋಟಿ ರು ಕೊಟ್ಟು ಖರೀದಿಸಿದ. ಕುದುರೆ ಬೆನ್ನಿಗೂ ದುಡ್ದು ಕಟ್ಟುವುದರಲ್ಲಿ ನಿಸ್ಸೀಮನಾಗಿರುವ ಮಲ್ಯ ಸುಮಾರು 200 ರೇಸ್ ಗೆಲ್ಲುವ ಕುದುರೆಗಳನ್ನು ಸಾಕಿಕೊಂಡಿದ್ದಾನೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications