ಜಗದೀಶ್ ಶೆಟ್ಟರ್ ಮೇಲೆ ಅಕ್ರಮ ಡಿನೋಟಿಫೈ ಆರೋಪ

ಬೆಂಗಳೂರು ಉತ್ತರ ತಾಲೂಕು ದಾಸನಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮ ವಾಗಿ ಡಿನೋಟಿ ಫೈ ಮಾಡಿಸಿಕೊಂಡು ಖಾಸಗಿ ಅವರಿಗೆ ಮಾರಾಟ ಮಾಡಿರುವ ಆರೋಪವನ್ನು ನಿಯೋಜಿತ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಮೇಲೆ ಹೊರೆಸಲಾಗಿದೆ.
ಸದ್ಯದಲ್ಲೇ ಈ ಸಂಬಂಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗುವುದು ಎಂದಿರುವ ರಂಗೇಗೌಡ, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೇರುತ್ತಿರುವ ಸಂದರ್ಭದಲ್ಲಿ ಆರೋಪಿಸುತ್ತಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶ ಅಥವಾ ಹುನ್ನಾರವಿಲ್ಲ. ನಮಗೆ ಅಗತ್ಯವಾದ ದಾಖಲೆಗಳು ಸಿಕ್ಕಿರಲಿಲ್ಲ. ಹೀಗಾಗಿ ಇಷ್ಟು ದಿನ ಮಾಧ್ಯಮಗಳ ಮುಂದೆ ವಿಷಯ ಮುಂದಿಡಲು ಆಗಿರಲಿಲ್ಲ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಂಗೇಗೌಡ, 2004ರಲ್ಲಿ ಸರ್ಕಾರ ದಾಸನಪುರದಲ್ಲಿ 188 ಎಕರೆ ಜಮೀನನ್ನು ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆಂದು ವಶಪಡಿಸಿಕೊಂಡಿತ್ತು ಎಂದು ಹೇಳಿದರು.
ನಂತರ 2006ರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಸಚಿವ ಜಗದೀಶ್ ಶೆಟ್ಟರ್ ದಾಸನಪುರದಲ್ಲಿರುವ 188 ಎಕರೆ ಜಮೀನನ್ನು ಡಿ ನೋಟಿಫೈ ಮಾಡಿದ್ದಾರೆ. ಈಗ ಅಲ್ಲಿ ಖಾಸಗಿ ಅವರು ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ.
ಈ ಜಮೀನನ್ನು ಮೂಲ ಮಾಲೀಕರಿಗೆ ಕೊಟ್ಟಿದ್ದರೆ ನಮ್ಮ ಅಭ್ಯಂತರವಿರಲಿಲ್ಲ, ಅದು ಬಿಟ್ಟು ಖಾಸಗಿಯವರಿಗೆ ನೀಡಿರುವುದು ಸರಿಯಿಲ್ಲ. ಇಲ್ಲಿ ಅವ್ಯವಹಾರ ನಡೆದಿದೆ ಎಂದು ತಲಕಾಡು ಚಿಕ್ಕರಂಗೇಗೌಡ ಅವರು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಮೇಲೆ ಲೋಕಾಯುಕ್ತ ಸಂಸ್ಥೆ ದೂರು ನೀಡಿ, ತನಿಖೆಗೆ ಆದೇಶಿಸುವ ಹೊತ್ತಿಗೆ ಸಿಎಂ ಕುರ್ಚಿಯಲ್ಲಿ ಕೂತಿರುತ್ತಾರೆಯೇ? ಗೊತ್ತಿಲ್ಲ. ಅಲ್ಲದೆ, ಇದು ಸಣ್ಣ ಪ್ರಮಾಣದ ಹಗರಣ ಎನ್ನಬಹುದು. ಬಿಜೆಪಿ ಸರ್ಕಾರದ ಮುಖಂಡರ ಅಕ್ರಮಗಳ ಅಸಮಗ್ರ ಪಟ್ಟಿಯತ್ತ ಕಣ್ಣು ಹಾಯಿಸಿ. ಇದರಲ್ಲಿ ಹುಬ್ಬಳ್ಳಿ ಧಾರವಾಡದಲ್ಲಿ ಲೋಕೋಪಯೋಗಿ ಕಾಮಗಾರಿಗಳ ಮೂಲಕ ಜಗದೀಶ್ ಶೆಟ್ಟರ್ ಅವರು ಗಳಿಸಿದ ಲಾಭ ಗಳಿಯ ಮೊತ್ತವೂ ಸೇರಿದೆ. ಇದೆಲ್ಲವೂ ಅಂದಾಜು ಮೊತ್ತವಾದರೂ ಹಗರಣಗಳಲ್ಲಿ ಈ ಮಹಾನ್ ನಾಯಕರು ಭಾಗಿಯಾಗಿರುವುದಂತೂ ನಿಜ.
* ಯಡಿಯೂರಪ್ಪ : 3000 ಕೋಟಿ ರು ಅಕ್ರಮ ಗಣಿಗಾರಿಕೆ ಮತ್ತು ಡಿ ನೋಟಿಫಿಕೇಷನ್ ಪ್ರಕರಣ
* ಎಂಪಿ ರೇಣುಕಾಚಾರ್ಯ: 1800 ಕೋಟಿ ರು ಅಬಕಾರಿ ಇಲಾಖೆ ಭ್ರಷ್ಟಾಚಾರ
* ಕರುಣಾಕರ ರೆಡ್ಡಿ: 2000 ಕೋಟಿ ಗಣಿ ಹಗರಣ
* ಸಿಎಂ ಉದಾಸಿ: 300 ಕೋಟಿ ಲೋಕೋಪಯೋಗಿ ಇಲಾಖೆ ಹಗರಣ
* ಜಗದೀಶ್ ಶೆಟ್ಟರ್ : 350 ಕೋಟಿ ಗ್ರಾಮೀಣಾಭಿವೃದ್ಧಿ ಮತ್ತು ನೀರು ಸರಬರಾಜು
* ಶೋಭಾ ಕರಂದ್ಲಾಜೆ: 400 ಕೋಟಿ ರು ಕೊಡಗಿನ ಕಾಫಿ ಎಸ್ಟೇಟ್ ಹಗರಣ
* ಮುರುಗೇಶ್ ನಿರಾಣಿ : 1200 ಕೋಟಿ ರು ಸಕ್ಕರೆ ಕಾರ್ಖಾನೆ ಲೈಸನ್ಸ್ ಹಾಗೂ ಕೈಗಾರಿಕಾ ಭೂ ಹಗರಣ
* ವಿ ಸೋಮಣ್ಣ: 900 ಕೋಟಿ ರು ವಸತಿ, ಬಿಡಿಎ ನಿವೇಶನ ಹಾಗೂ ಕಬ್ಬಿಣ ಅದಿರು ಹಗರಣ
* ಬಸವರಾಜ್ ಬೊಮ್ಮಾಯಿ: 600 ಕೋಟಿ ಭದ್ರಾ ಮೇಲ್ಡಂಡೆ ಯೋಜನೆ, ಲೋಕೋಪಯೋಗಿ ಇಲಾಖೆ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications