ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟೆಕ್ಕಿ ಪವನ್ ಶವಪರೀಕ್ಷೆ?

ತಮ್ಮ ಮಗನ ವಿರುದ್ಧ ಇಲ್ಲಸಲ್ಲದ ಅಪವಾದಗಳನ್ನು ಹೊರಿಸಲಾಗಿದೆ. ಆ ಕಳಂಕ ತೊಡೆದು ಹಾಕಲು ತಮ್ಮ ಪುತ್ರನ ಶವಪರೀಕ್ಷೆಯನ್ನು ಮತ್ತೊಮ್ಮೆ ಬೆಂಗಳೂರಿನಲ್ಲಿ ನಡೆಸಬೇಕು ಎಂದು ಪವನ್ ಕುಮಾರ್ ಅಂಜಯ್ಯ ಮಾತಾಪಿತೃಗಳು ಪಟ್ಟುಹಿಡಿದಿದ್ದಾರೆ. ಇದರೊಂದಿಗೆ ಟೆಕ್ಕಿ ಪವನ್ ದುರಂತ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
Cognizant ಕಂಪನಿಯ ವಕ್ತಾರರ ಪ್ರಕಾರ ನ್ಯೂಜೆರ್ಸಿ ವೈದ್ಯಕೀಯ ಸಂಸ್ಥೆಯಿಂದ ಪವನ್ ಶವವನ್ನು ಅಲ್ಲಿನ ಶವಾಗಾರ ಕೇಂದ್ರಕ್ಕೆ ಹಸ್ತಾಂತರಿಸಲಾಗಿದೆ. ಇದರಿಂದ ಯಾವುದೇ ಕ್ಷಣ ಪವನ್ ಶವವನ್ನು ಭಾರತಕ್ಕೆ ಹೊತ್ತೊಯ್ಯಲು ಅನುವು ಮಾಡಿಕೊಡಲಾಗಿದೆ.
ಶವಾಗಾರ ಕೇಂದ್ರವು ವಿವಿಧ ವಿಮಾನ ಯಾನ ಸಂಸ್ಥೆಗಳನ್ನು ಸಂಪರ್ಕಿಸಿದ್ದು, ಶವವನ್ನು ಭಾರತಕ್ಕೆ ಹಸ್ತಾಂತರಿಸುವ ಏರ್ಪಾಟುಗಳನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ನ್ಯೂಯಾರ್ಕಿನಲ್ಲಿರುವ ಭಾರತದ ಕಾನ್ಸುಲೇಟ್ ಕಚೇರಿಯ ನೆರವನ್ನೂ ಪಡೆಯಲಾಗಿದೆ.
ಈ ಮಧ್ಯೆ, ಪವನ್ ಶವ ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಾಪಸಾಗುತ್ತಿದ್ದಂತೆ ನೇರವಾಗಿ ಪಾವಗಡಕ್ಕೆ ತೆಗೆದುಕೊಂಡುಹೋಗಲಾಗುವುದು ಎಂದು Cognizant ಕಂಪನಿಯ ಹೇಳಿದೆ. ಮತ್ತು ಕಂಪನಿಯ ಈ ಹೇಳಿಕೆಯಿಂದ ಮತ್ತೆ ಪವನ್ ಸಾವಿನ ಪ್ರಕರಣ ಕಗ್ಗಂಟಾಗುವ ಲಕ್ಷಣಗಳಿವೆ.
ಏಕೆಂದರೆ ಟೆಕ್ಕಿ ಪವನ್ ಪೋಷಕರು ಕಂಪನಿಯ ಈ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪವನ್ ದೇಹದ ಮರಣೋತ್ತರ ಪರೀಕ್ಷೆಯನ್ನು ಮತ್ತೊಮ್ಮೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಅಥವಾ ಬೋರಿಂಗ್ ಆಸ್ಪತ್ರೆಯಲ್ಲಿ ನಡೆಸಬೇಕು.
ಮತ್ತು ಈ ಆಸ್ಪತ್ರೆಯು ನೀಡುವ ಶವಪರೀಕ್ಷೆ ವರದಿಯೊಂದಿಗೆ ಅಮೆರಿಕದ ವರದಿಯನ್ನು ತಾಳೆ ಹಾಕಲಾಗುವುದು. ಎಲ್ಲವೂ ಸರಿಯಾಗಿದ್ದರೆ well and good. ಇಲ್ಲವಾದಲ್ಲಿ ಸುತರಾಂ ನಾವು ಪವನ್ ಅಂತ್ಯಕ್ರಿಯೆಗೆ ಅವಕಾಶ ನೀಡುವುದೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications