ವರದಕ್ಷಿಣೆ: Accenture ಟೆಕ್ಕಿಯ ಪತ್ನಿ ಸೌಮ್ಯ ಸಾವು

ಕಾಡುಗೋಡಿ ಬಳಿಯ ಚನ್ನಸಂದ್ರ ನಿವಾಸಿ ವಿಶ್ವನಾಥ್ ಎಂಬುವರ ಪತ್ನಿ ಎಚ್. ಸೌಮ್ಯ (25) ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೋಮವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸೌಮ್ಯ ಅವರು ಬಿಜಾಪುರ ಜೆಡಿಎಸ್ ಅಧ್ಯಕ್ಷ ಹನುಮಂತರಾಯ ಮತ್ತು ಸುಶೀಲ ಅವರ ಪುತ್ರಿ.
ವಿಜಾಪುರದವರೇ ಆದ ವಿಶ್ವನಾಥ್ ಅವರನ್ನು ಸೌಮ್ಯ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಸೌಮ್ಯ ಎಂ.ಟೆಕ್ ಪದವೀಧರೆಯಾಗಿದ್ದರೆ ವಿಶ್ವನಾಥ್ ವೈಟ್ ಫೀಲ್ಡ್ ನಲ್ಲಿರುವ Accenture ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್.
ಬಿಜಾಪುರ ಜೆಡಿಎಸ್ ಅಧ್ಯಕ್ಷರ ಪುತ್ರಿ:
'ಎಂ.ಟೆಕ್ ಪದವೀಧರೆಯಾಗಿದ್ದ ಸೌಮ್ಯ ತಾನೂ ಸಾಫ್ಟ್ವೇರ್ ಇಂಜಿನಿಯರ್ ಆಗಲು ಹಂಬಲಿಸಿದ್ದಳು. ಆದರೆ ಗಂಡನ ಮನೆಯವರು ಅದಕ್ಕೆ ಸಮ್ಮತಿಸಲಿಲ್ಲ. ಅಳಿಯ ವಿಶ್ವನಾಥ್ ಮತ್ತು ಆತನ ಸೋದರ ಸತೀಶ್ ನಮ್ಮ ಮಗಳಿಗೆ ಮಾನಸಿಕವಾಗಿ ಚಿತ್ರ ಹಿಂಸೆ ನೀಡಿ, ಕೊಲೆ ಮಾಡಿದ್ದಾರೆ. ಮದುವೆ ಸಂದರ್ಭದಲ್ಲಿ ಭಾರಿ ಚಿನ್ನ ಮತ್ತು ಹಣವನ್ನು ವರದಕಷಿಣೆಯಾಗಿ ನೀಡಿದ್ದೆವು. ಆದರೂ ಅಳಿಯ ವಿಶ್ವನಾಥ್ ಹೆಚ್ಚಿನ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪೀಡಿಸುತ್ತಿದ್ದನಂತೆ' ಎಂದು ಬಿಜಾಪುರ ಜೆಡಿಎಸ್ ಅಧ್ಯಕ್ಷರಾದ ಹನುಮಂತರಾಯ ಅವರು ದೂರಿದ್ದಾರೆ.
ಏನಾಯಿತೆಂದರೆ: ಸೌಮ್ಯ-ವಿಶ್ವನಾಥ್ ದಂಪತಿಯು ಚನ್ನಸಂದ್ರದ ಹಳೆ ಅಂಚೆ ಕಚೇರಿ ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ವಿಶ್ವನಾಥ್ ತಾಯಿ, ಸೋದರ ಸಹ ಜತೆಯಲ್ಲೇ ವಾಸವಾಗಿದ್ದರು. ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಸೌಮ್ಯ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ವಿಶ್ವನಾಥ್ ಅವರು ರಾತ್ರಿ ಏಳು ಗಂಟೆ ಸುಮಾರಿಗೆ ಮನೆಗೆ ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕಾಡುಗೋಡಿ ಪೊಲೀಸರು ಹೇಳಿದ್ದಾರೆ.
'ಅಳಿಯ ವಿಶ್ವನಾಥ್ ಮತ್ತು ಆತನ ಪೋಷಕರು, ವರದಕ್ಷಿಣೆ ಹಣಕ್ಕಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ, ಅಳಿಯ ಮತ್ತು ಆತನ ಕುಟುಂಬ ಸದಸ್ಯರೇ ಕಾರಣ' ಎಂದು ಹನುಮಂತರಾಯ ಅವರು ದೂರು ಕೊಟ್ಟಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ವಿಶ್ವನಾಥ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ' ಎಂದು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ಸೌಮ್ಯ ಪಾರ್ಥಿವ ಶರೀರವನ್ನು ಹನುಮಂತರಾಯ ಅವರು ಬಿಜಾಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಕಾಡುಗೋಡಿ ಪೊಲೀಸರು ವಿಶ್ವನಾಥ್ ಮತ್ತು ಸತೀಶನನ್ನು ಬಂಧಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications