ರೆಡ್ಡಿ ಬೇಲ್ ಡೀಲ್: ಹತ್ತಲ್ಲ ಇಪ್ಪತ್ತು ಕೋಟಿಯದ್ದು

ಈ ಮಧ್ಯೆ, ACBಯು ಮತ್ತೊಬ್ಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಇದೇ ಲಂಚ ಪ್ರಕರಣದಲ್ಲಿ ಮಂಗಳವಾರ ಬಂಧಿಸಿದೆ. ಸೂರ್ಯಪ್ರಕಾಶ ಬಾಬು ಬಂಧಿತ ಉದ್ಯಮಿ. ಜಾಮೀನು ಲಂಚ ಸಂದಾಯದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಇದುವರೆಗೆ ಐವರನ್ನು ಬಂಧಿಸಿದಂತಾಗಿದೆ.
ಜನಾರ್ದನ ರೆಡ್ಡಿಯ ಜಾಮೀನಿಗಾಗಿ KMF ಸೋಮಶೇಖರ ರೆಡ್ಡಿ ಮತ್ತು ಆತನ ಮತ್ತೊಬ್ಬ ಸಂಬಂಧಿ ದಶರಥ ರೆಡ್ಡಿ ಇಬ್ಬರೂ ನನಗೆ 20 ಕೋಟಿ ರುಪಾಯಿ ಹಣ ನೀಡಿದರು ಎಂದು ಯಾದಗಿರಿ ರಾವ್ ಹೇಳಿಕೆ ನೀಡಿದ್ದಾನೆ.
ನನಗೆ ಅನೇಕ ಅಡ್ವೊಕೇಟುಗಳು ಮತ್ತು ಪೊಲೀಸ್ ಅಧಿಕಾರಿಗಳ ಪರಿಚಯವಿದೆ. ಡಿಎಸ್ ಪಿ ಸರ್ವೇಶ್ವರ ರೆಡ್ಡಿಯ ಜಾಮೀನು ವಿಷಯದಲ್ಲೂ ನಾನು ಮಧ್ಯಸ್ಥಿಕೆ ವಹಿಸಿದೆ. ಆದ್ದರಿಂದ ಜನಾರ್ದನ ರೆಡ್ಡಿಗೂ ಜಾಮೀನು ಕೊಡಿಸು ಎಂದು ಸೋಮಶೇಖರ ರೆಡ್ಡಿ ಹೇಳಿದಾಗ ನಾನು ಸಲೀಸಾಗಿ ಒಪ್ಪಿಕೊಂಡೆ ಎಂದು ಯಾದಗಿರಿ ರಾವ್ ತಪ್ಪೊಪ್ಪಿಗೆ ನೀಡಿದ್ದಾನೆ.
ಸರ್ವೇಶ್ವರ ರೆಡ್ಡಿಗೆ ಜಾಮೀನು ದೊರಕಿಸಲು ಕೇವಲ 10 ಲಕ್ಷ ರು. ತೆಗೆದುಕೊಂಡಿದ್ದೆ. ನಿವೃತ್ತ ಜಡ್ಜ್ ಚಲಪತಿ ರಾವ್ ಮಧ್ಯಸ್ಥಿಕೆಯಲ್ಲಿ ಜಡ್ಜ್ ಪಟ್ಟಾಭಿಗೆ 10 ಲಕ್ಷ ತಲುಪಿಸಿ, ಜಾಮೀನು ಲಭ್ಯವಾಗುವಂತೆ ನೋಡಿಕೊಂಡೆ.
ಆದರೆ ಜನಾರ್ದನ ರೆಡ್ಡಿ ಪ್ರಕರಣದಲ್ಲಿ KMF ಸೋಮಶೇಖರ ರೆಡ್ಡಿ ಒಡ್ಡಿದ್ದ ಷರತ್ತುಗಳು ಹೆಚ್ಚಾಗಿದ್ದವು ಮತ್ತು ಅಪಾಯಕಾರಿಯಾಗಿದ್ದವು. ಆದ್ದರಿಂದ ಡೀಲನ್ನು 20 ಕೋಟಿಗೆ ಏರಿಸಿದೆ ಎಂಬ ಸತ್ಯವನ್ನು ಯಾದಗಿರಿ ಬಹಿರಂಗಪಡಿಸಿದ್ದಾನೆ.
ಜಡ್ಜ್ ಪಟ್ಟಾಭಿ ಅವರು ಜನಾರ್ದನ ರೆಡ್ಡಿಗೆ ಜಾಮೀನು ನೀಡುವ ವೇಳೆಗೆ 10 ಕೋಟಿ ಸಂದಾಯ ಮಾಡಿದ KMF ಸೋಮಶೇಖರ ಹೈಕೋರ್ಟಿನಲ್ಲೂ ಜಾಮೀನು ಊರ್ಜಿತವಾದರೆ ಮತ್ತೆ 10 ಕೋಟಿ ರು. ನೀಡುವುದುದಾಗಿ ಹೇಳಿದ್ದರು ಎಂದು ಯಾದಗಿರಿ ಬಾಯ್ಬಿಟ್ಟಿದ್ದಾನೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications