ಛೇ! ಅಡ್ವಾಣಿಯೂ ಕೈಹಿಡಿಯಲಿಲ್ವೇ ಸದಾನಂದಜೀ?
ಬೆಂಗಳೂರು, ಜುಲೈ 11: ರಾಜ್ಯ ರಾಜಕಾರಣದಲ್ಲಿ ದಿಢೀರನೆ ಅಪಾರ ಬೆಂಬಲಿಗರು ಅದರಲ್ಲೂ ಜಾತೀ ಬಾಂಧವ್ಯದಲ್ಲಿ ಒಕ್ಕಲಿಗರ ಬೆಂಬಲವನ್ನು ದಕ್ಕಿಸಿಕೊಂಡ ಡಿ.ವಿ. ಸದಾನಂದ ಗೌಡರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇಂದು ರಾಜ್ಯಪಾಲರ ಅಂಗಳದಲ್ಲಿ ಕಾಣಿಸಿಕೊಂಡಾಗ ಅವರನ್ನು ಹಿಸ್ ಎಕ್ಸಲೆನ್ಸಿ ರಾಜ್ಯಪಾಲ ಭಾರದ್ವಾಜ್ ಅವರು ಆತ್ಮೀಯವಾಗಿಯೇ ಮಾತನಾಡಿಸಿ ಕಳಿಸಿದ್ದಾರೆ.

ಹಾಗೆ ನೋಡಿದರೆ 'ಮುಖ್ಯಮಂತ್ರಿ ಸದಾನಂದ' ಮತ್ತು ಭಾರದ್ವಾಜ್ ಅವರ ನಡುವೆ ಕಳೆದ 11 ತಿಂಗಳಲ್ಲಿ ಸುಮಧುರ ಬಾಂಧವ್ಯವೇ ಇತ್ತು. ಹೇಳಬೇಕು ಅಂದರೆ ಹಿಸ್ ಎಕ್ಸಲೆನ್ಸಿ ರಾಜ್ಯಪಾಲ ಭಾರದ್ವಾಜ್ ಅವರು ಯಡಿಯೂರಪ್ಪ ಅವರನ್ನು ಗೋಳುಹೊಯ್ದುಕೊಂಡಷ್ಟು ತಮ್ಮ ಜೀವನದಲ್ಲಿ ಬೇರೆ ಯಾರನ್ನೂ ಗೋಳುಹೊಯ್ದುಕೊಂಡಿಲ್ಲ ಎಂದೇ ಹೇಳಬಹುದು. ಇದಕ್ಕೆ ಯಡಿಯೂರಪ್ಪ ಎಷ್ಟು ಕಾರಣೀಭೂತರು ಎಂಬುದು ಬೇರೆ ವಿಷಯವಾದರೂ ಒಬ್ಬ ರಾಜ್ಯಪಾಲರಾಗಿ ರಾಜಭವನದ ಅಂಗಳದಾಚೆಗೂ ಆಟವಾಡಿದರು ಇದೇ ಭಾರದ್ವಾಜರು.
ಅಂದಹಾಗೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ಅವರೊಡಗೂಡಿ ಸದಾನಂದರು ಬೆಳಗ್ಗೆ 12 ಗಂಟೆ ಸುಮಾರಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕೈಗೆ ರಾಜೀನಾಮೆ ಪತ್ರ ನೀಡಿದರು.
ರಾಜೀನಾಮೆಗೂ ಮೊದಲು ವಿಧಾನ ಸೌಧದಲ್ಲಿರುವ ಬಸವೇಶ್ವರ ಪ್ರತಿಮೆಗೆ ಸದಾನಂದರು ಮಾಲಾರ್ಪಣೆ ಮಾಡಿದರು. 2011 ಆಗಸ್ಟ್ 4 ರಂದು ರಾಜ್ಯದ 20ನೆಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸದಾನಂದ ಗೌಡರು ರಾಜ್ಯಕ್ಕೆ ಸುಮಾರು 11 ತಿಂಗಳ ಆಡಳಿತ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications