ಇನ್ಫೋಸಿಸ್ ಮೊದಲ ತ್ರೈಮಾಸಿಕ ನಿರೀಕ್ಷೆ ಟುಸ್

ಬೆಂಗಳೂರು, ಜು.11: ದೇಶದ ಎರಡನೆ ಅತಿದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಇನ್ಫೋಸಿಸ್ ಗುರುವಾರ( ಜು.13)ರಂದು ತನ್ನ ಮೊದಲ ತ್ರೈಮಾಸಿಕ ವರದಿಯನ್ನು ಪ್ರಕಟಿಸಿದೆ.
ಜೂನ್ ತ್ರೈಮಾಸಿಕದಲ್ಲಿ 2,290 ಕೋಟಿ ನಿವ್ವಳ ಲಾಭ ಮಾಡಿದೆಯಾದರೂ ನಿರೀಕ್ಷಿತ ಮಟ್ಟಕ್ಕೇ ಏರಿಲ್ಲ.
2483 ಕೋಟಿ ರು ಲಾಭದ ನಿರೀಕ್ಷೆ ಟುಸ್ ಆಗಿದೆ. ಒಟ್ಟು ಆದಾಯ 9,616 ಕೋಟಿ ರು ಬಂದಿದೆ. 9,715.2 ಕೋಟಿ ರು ನಿರೀಕ್ಷೆ ಹೊಂದಲಾಗಿತ್ತು. ಒಟ್ಟು ಮಾರಾಟದಲ್ಲಿ ಜನವರಿ ಹಾಗೂ ಮಾರ್ಚ್ ತ್ರೈಮಾಸಿಕದಲ್ಲಿ 2316 ಲಾಭದೊಂದಿಗೆ 8,852 ಕೋಟಿ ರು ಆದಾಯ ಬಂದಿದೆ.
2012-13ರ ಮೊದಲ ತ್ರೈಮಾಸಿಕದಲ್ಲಿ ಪ್ರತಿ ಷೇರಿನ ಆದಾಯ 40.06 ರು. ಈ ಅವಧಿಯಲ್ಲಿ ಇನ್ಫೋಸಿಸ್ ಸಂಸ್ಥೆ ಸುಮಾರು 51 ಗ್ರಾಹಕರನ್ನು ಸೆಳೆದುಕೊಂಡಿದೆ. ಸಂಸ್ಥೆಯ ಒಟ್ಟಾರೆ ಉದ್ಯೋಗಿಗಳ ಸಂಖ್ಯೆ 9,236(1,157 ಹೆಚ್ಚುವರಿ ಸೇರ್ಪಡೆ)
ಅಮೆರಿಕ ವೀಸಾ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಇನ್ಫೋಸಿಸ್ 1752 ಮಿಲಿಯನ್ ಡಾಲರ್ ಆದಾಯ ಗಳಿಸಿದ್ದು, ನಿರೀಕ್ಷೆಗಿಂತ ಕಡಿಮೆ ಇದೆ. ಕಳೆದ ತ್ರೈಮಾಸಿಕದಲ್ಲಿ 1771 ಮಿಲಿಯನ್ ಡಾಲರ್ ಆದಾಯ ಬಂದಿತ್ತು. ಅಮೆರಿಕದಿಂದ ಸಾಕಷ್ಟು ಆದಾಯ ಹೊಂದಿರುವ ಇನ್ಪೋಸಿಸ್ ಸಂಸ್ಥೆ ಇದು ತಲೆ ನೋವಾಗಿ ಪರಿಣಮಿಸಿದೆ.
ಬ್ಯಾಂಕ್ ಆಫ್ ಅಮೆರಿಕ, ಬಿಟಿ ಗ್ರೂಪ್ ಹಾಗೂ ಗ್ಲಾಕ್ಸೋ ಸ್ಮಿತ್ ಕ್ಲೈನ್ ನಂಥ ಸಂಸ್ಥೆಗಳನ್ನು ಕ್ಲೈಂಟ್ ಆಗಿ ಹೊಂದಿರುವ ಇನ್ಫೋಸಿಸ್ ಸಂಸ್ಥೆ ಷೇರುಗಳು ತ್ರೈಮಾಸಿಕ ವರದಿ ಪ್ರಕಟವಾದ ನಂತರ 2,219 ರು ನಂತೆ 10.2 ರಷ್ಟು ಇಳಿಕೆ ಕಂಡಿದೆ. ನಿಫ್ಟಿಯಲ್ಲೂ 1.3 ಕುಸಿತ ಕಂಡಿದೆ.
'Infosys 3.0 ಭವಿಷ್ಯದ ಸಂಸ್ಥೆ ರಚನೆಯಲ್ಲಿ ಎಲ್ಲರೂ ಮಗ್ನರಾಗಿದ್ದಾರೆ. ತ್ರೈಮಾಸಿಕದಲ್ಲಿ ನಮಗೆ ಹಿನ್ನೆಡೆಯಾಗಿಲ್ಲ. ಜಾಗರಿಕ ಆರ್ಥಿಕ ಪರಿಸ್ಥಿತಿಯಿಂದ ಬೃಹತ್ ಐಟಿ ಉದ್ಯಮಕ್ಕೆ ಕೊಂಚ ಪೆಟ್ಟಾಗಿದೆ. ಇದರಲ್ಲಿ ಇನ್ಫೋಸಿಸ್ ಕೂಡಾ ಹೊರತಲ್ಲ' ಎಂದು ಇನ್ಫೋಸಿಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶಿಬುಲಾಲ್ ಹೇಳಿದ್ದಾರೆ.
ಇನ್ಫೋಸಿಸ್ ಕಳೆದ ವರ್ಷ ಕಂಪನಿ ತನ್ನ ಉದ್ಯೋಗಿಗಳಿಗೆ ಶೇ. 10-12ರಷ್ಟು hike ನೀಡಿತ್ತು. ಆದರೆ, ಈ ಬಾರಿಯ ವೇತನ ಕಡಿತವನ್ನು ಸಮರ್ಥಿಸಿಕೊಂಡಿದ್ದ ಹಿರಿಯ ಉಪಾಧ್ಯಕ್ಷೆ ಹಾಗೂ HR ಸಮೂಹದ ಮುಖ್ಯಸ್ಥೆ ನಂದಿತಾ ಗುರ್ಜಾರ್, ಉದ್ಯೋಗಿಗಳು ಸಂಸ್ಥೆಯ ನಿರ್ಣಯಕ್ಕೆ ಸಹಕರಿಸುತ್ತಾರೆ ಎಂಬ ಭರವಸೆ ಇದೆ ಎಂದಿದ್ದಾರೆ.
2012-13 ರ ಆರ್ಥಿಕ ವರ್ಷದಲ್ಲಿ ಇನ್ಪೋಸಿಸ್ ಸಂಸ್ಥೆ ಕೇವಲ 35,000 ಟೆಕ್ಕಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಿದೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ 10,000 ನೇಮಕಾತಿ ಕಡಿಮೆಯಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ 45,000 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿತ್ತು.
1,200 ಆನ್ ಸೈಟ್ ಉದ್ಯೋಗಿಗಳು ಹಾಗೂ 35,000 ಅಭ್ಯರ್ಥಿಗಳ ನೇಮಕ ಈ ಆರ್ಥಿಕ ವರ್ಷದ ಗುರಿಯಲ್ಲಿದೆ ಎಂದು ಸಿಇಒ ಎಸ್ ಡಿ ಶಿಬುಲಾಲ್ ಹೇಳಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications