ಬೆಂಗಳೂರಲ್ಲಿ ಬಾಲಕನ ಬಲಿಗೆ ಯತ್ನಿಸಿದ ಪೂಜಾರಿ ಬಂಧನ

ದೇವಸ್ಥಾನವೊಂದರಲ್ಲಿ ಪೂಜೆ ಮಾಡುತ್ತಿದ್ದ ಸುಮತೀಂದ್ರ ರಾವ್ ಎಂಬುವವರೇ ಈಗ ಪೊಲೀಸರ ವಶವಾಗಿರುವ ಪೂಜಾರಿ. ಆ ಕಳ್ಳ ಪೂಜಾರಿಯಿಂತ ಅಪಹರಣಕ್ಕೊಳಗಾಗಿ, ಅದೃಷ್ಟವಶಾತ್ ಪಾರಾಗಿ ಬಂದ ಪುಟ್ಟ 2 ವರ್ಷದ ಮಗುವಿನ ಹೆಸರು ವಿನಯ್.
ಅಜ್ಜಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ವಿನಯ್ನನ್ನು ಕಿತ್ತುಕೊಂಡು ಹೋದ ಸುಮತೀಂದ್ರ ರಾವ್, ಚಂದ್ರನಗರದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಿ, ನಿಧಿಯ ಆಸೆಗಾಗಿ ಬಲಿ ನೀಡಲು ಎಲ್ಲ ಸಿದ್ಧತೆ ನಡೆಸಿದ್ದ. ಮಗುವಿನ ಕತ್ತಿಗೆ ಕೆಂಪು ಬಣ್ಣದ ಬಟ್ಟೆ ಸುತ್ತಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಬಲಿ ನೀಡಲು ತಯಾರಿ ನಡೆಸಿದ್ದ.
ಅಷ್ಟರಲ್ಲಿ ಮಗು ಜೋರಾಗಿ ಅಳಲು ಪ್ರಾರಂಭಿಸಿದೆ. ಮಗುವಿನ ಅಜ್ಜಿಯೂ ಓಡೋಡಿ ಬಂದಿದ್ದಾಳೆ. ಮಗುವಿನ ರಕ್ಷಣೆಗೆ ಧಾವಿಸಿದ ಸಾರ್ವಜನಿಕರು ಸುಮತೀಂದ್ರ ರಾವ್ ಅವರಿಗೆ ಮನೆಯ ಬಾಗಿಲು ತೆರೆಯುವಂತೆ ಕೋರಿದ್ದಾರೆ. ಆತ ಸ್ಪಂದಿಸದಿದ್ದಾಗ ಬಾಗಿಲು ಮುರಿದು ಮನೆ ಒಳಹೊಕ್ಕಿದ್ದಾರೆ. ಇನ್ನೇನು ಬಲಿಯಾಗಬೇಕಿದ್ದ ವಿನಯ್ ಅದೃಷ್ಟವಶಾತ್ ಪಾರಾಗಿದ್ದಾನೆ.
ಸಾರ್ವಜನಿಕರು ಇಷ್ಟಕ್ಕೆ ಬಿಟ್ಟಿಲ್ಲ. ಮಗುವನ್ನು ಬಲಿ ನೀಡಲು ಪ್ರಯತ್ನಿಸುತ್ತಿದ್ದ ಪೂಜಾರಿಯನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆತನೊಂದಿಗೆ ಪೂಜಾರಿಯ ಹೆಂಡತಿಯೂ ಇದ್ದಳು. ಇಬ್ಬರನ್ನೂ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ನೆರೆಹೊರೆಯವರ ಪ್ರಕಾರ, ಸುಮತೀಂದ್ರ ರಾವ್ ಒಬ್ಬ ಸಾತ್ವಿಕ ವ್ಯಕ್ತಿಯೆಂದೇ ಗುರುತಿಸಿದ್ದ. ಅಕ್ಕಪಕ್ಕದಲ್ಲಿದ್ದ ಮಕ್ಕಳಿಗೆ ಚಾಕಲೇಟು, ಬಿಸ್ಕತ್ತುಗಳನ್ನು ಆಗಾಗ ಕೊಡುತ್ತಿದ್ದ. ಆದರೆ, ಈತ ಮಗುವನ್ನು ಅಪಹರಿಸಿ ಬಲಿ ಕೊಡಲು ಯತ್ನಿಸುವ ದುಷ್ಕೃತ್ಯಕ್ಕೆ ಕೈಹಾಕುತ್ತಾನೆ ಎಂದು ಯಾರೂ ಭಾವಿಸಿರಲಿಲ್ಲ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications