ಟೆಕ್ಕಿ ಪವನ್ ದೇಹಕ್ಕೆ ಕೊನೆಗೂ ಅಂತ್ಯಸಂಸ್ಕಾರ

ಬುಧವಾರ ಮುಂಜಾನೆ 3.30ರ ಸುಮಾರಿಗೆ ಇಂಡಿಯನ್ ಏರ್ ಲೈನ್ಸ್ ವಿಮಾನದಲ್ಲಿ ಅಮೆರಿಕದ ನ್ಯೂಜೆರ್ಸಿಯಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪವನ್ ಶವ ತರಲಾಯಿತು. ನಂತರ ಆರ್ ಟಿ ನಗರದ ಆನಂದ ನಗರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾಗಿತ್ತು. ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.
ಕಳೆಬರಹ ಕಂಡು ಪವನ್ ತಾಯಿ ರಂಗರತ್ನಮ್ಮ ಹಾಗೂ ಅಕ್ಕ ಗುಣಶೀಲರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಜಿ ಸಚಿವ ಎ. ಕೃಷ್ಣಪ್ಪ, ಸ್ಥಳೀಯ ಮುಖಂಡರು, ಬಂಧುಗಳು, ಪವನ್ ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ನೆರೆ ಹೊರೆಯವರು ಅಂತಿಮ ದರ್ಶನ ಪಡೆದರು.
ನ್ಯೂಜೆರ್ಸಿಯ ಆರೋಗ್ಯ ಇಲಾಖೆ ನೀಡಿರುವ ಮರಣ ಪ್ರಮಾಣದಲ್ಲಿ ಪವನ್ ಸಾವಿಗೆ ಖಚಿತ ಕಾರಣ ನಮೂದಿಸಿಲ್ಲ. ಪವನ್ ಸಾವಿಗೆ ಕಾರಣವೇನು ? ಎಂಬ ಕಲಂನಲ್ಲಿ ಮುಂದಿನ ಅಧ್ಯಯನಕ್ಕಾಗಿ ಕಾಯಲಾಗುತ್ತಿದೆ ಎಂದು ಹೇಳಲಾಗಿದೆ. ಅಲ್ಲದೆ, ಯಾವ ರೀತಿ ಮೃತಪಟ್ಟಿದ್ದಾನೆ ಎಂಬ ಕಲಂನಲ್ಲಿ ತನಿಖೆ ಬಾಕಿಯಿದೆ ಎಂದು ಹೇಳಲಾಗಿದೆ. ಇದರಿಂದ ಪವನ್ ಮೃತಪಟ್ಟು 22 ದಿನಗಳಾದರೂ ಆತನ ಸಾವಿಗೆ ಕಾರಣ ಏನೆಂಬು ಖಚಿತ ನಿರ್ಧಾರಕ್ಕೆ ಬರುವಲ್ಲಿ ಅಮೆರಿಕಾ ಪೊಲೀಸರು ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ಈ ಮಧ್ಯೆ ಪವನ್ ಬರೆದಿರುವ ಮೂರು ಪುಟಗಳ ಮರಣ ಮುನ್ನ ಬರೆದ ಪತ್ರವನ್ನು (ಡೆತ್ನೋಟ್) ಕಳುಹಿಸಲು ಕನಿಷ್ಠ 14 ರಿಂದ 18 ವಾರಗಳ ಕಾಲಾವಕಾಶ ನೀಡಬೇಕೆಂದು ಅಮೆರಿಕಾ ಅಧಿಕಾರಿಗಳು ಕೋರಿದ್ದಾರೆ. ಯಾವುದೇ ದಾಖಲೆಗಳು ನೀಡಿಲ್ಲ. ಪವನ್ ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ. ಪವನ್ ಮರಣ ಮುನ್ನ ಬರೆದ ಪತ್ರ ಅಮೆರಿಕಾ ಪೊಲೀಸರು ಕಳುಹಿಸುವವರೆಗೂ ಕಾಯುತ್ತೇವೆ. ಇಲ್ಲವಾದರೆ, ಕಾನೂನು ಹೋರಾಟ ನಡೆಸಲಾಗುವುದು ಎಂದು ಪವನ್ ತಂದೆ ಪಿ.ಆಂಜಯ್ಯ ತಿಳಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications