ಜಗದೀಶ್ ಶೆಟ್ಟರ್ ಪ್ರಮಾಣ ಸ್ವೀಕಾರ; ಹೊಸಬರ ವಿವರ
ಬೆಂಗಳೂರು, ಜುಲೈ 12: ರಾಜ್ಯದ 21ನೆಯ ಮುಖ್ಯಮಂತ್ರಿಯಾಗಿ ಜಗದೀಶ್ ಶೆಟ್ಟರ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೇವರ ಹೆಸರಿನಲ್ಲಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಭಾರದ್ವಾಜ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಹೊಸದಾಗಿ ಸೇರ್ಪಡೆಯಾದ 11 ಮಂದಿ:
ಸುನಿಲ್ ವಲ್ಯಾಪುರೆ
ಅಪ್ಪಚ್ಚು ರಂಜನ್
ಬಿಜೆ ಪುಟ್ಟಸ್ವಾಮಿ
ಕೋಟಾ ಶ್ರೀನಿವಾಸ ಪೂಜಾರಿ
ಕಳಕಪ್ಪ ಬಂಡಿ
ಆನಂದ ಸಿಂಗ್
ಅರವಿಂದ ಲಿಂಬಾವಳಿ
ಎಸ್ ಕೆ ಬೆಳ್ಳುಬ್ಬಿ
ಸಿಟಿ ರವಿ
ಜೀವರಾಜ್
ಸೊಗಡು ಶಿವಣ್ಣ
20 ಮಂದಿ ಹಳಬರು:
ಉಮೇಶ್ ಕತ್ತಿ, ಗೋವಿಂದ ಕಾರಜೋಳ, ಸುರೇಶ್ ಕುಮಾರ್, ಬೊಮ್ಮಾಯಿ, ಉದಾಸಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ರೇಣುಕಾಚಾರ್ಯ, ಸಿ.ಪಿ. ಯೋಗೀಶ್ವರ್, ಬಿ.ಎನ್. ಬಚ್ಚೇಗೌಡ, ಮುರುಗೇಶ್ ನಿರಾಣಿ, ರೇವೂನಾಯಕ ಬೆಳಮಗಿ, ಆನಂದ ಆಸ್ನೋಟಿಕರ್, ಎಸ್.ಎ. ರಾಮದಾಸ್, ಎ.ನಾರಾಯಣ ಸ್ವಾಮಿ, ರವೀಂದ್ರನಾಥ್, ಬಾಲಚಂದ್ರ ಜಾರಕಿಹೊಳಿ, ರಾಜೂಗೌಡ, ವರ್ತೂರು ಪ್ರಕಾಶ್.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಂತ ಕುಮಾರ್, ಜಗದೀಶ್ ಶೆಟ್ಟರ್ ಅವರ ಕುಟುಂಬ ವರ್ಗ, ಹಿರಿಯ ರಾಜಕೀಯ ನಾಯಕರು, ಅಧಿಕಾರಿಗಳು, ಮತ್ತು ಅಪಾರ ಬೆಂಬಲಿಗರು ರಾಜಭವನದಲ್ಲಿ ಹಾಜರಿದ್ದರು. ನಿಕಟಪೂರ್ವ ಮುಖ್ಯಮಂತ್ರಿ ಸದಾನಂದ ಗೌಡ, ಬಿಜೆಪಿಯ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮುಖ್ಯಮಂತ್ರಿ ಸೇರಿದಂತೆ ನೂತನ ಸಚಿವರ ಅಭಿಮಾನಿಗಳು ರಾಜಭವನದ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮ್ಮ ನೆಚ್ಚಿನ ಸಚಿವರಿಗೆ ಜಯಘೋಷ ಹಾಕುತ್ತಿದ್ದ ಅಭಿಮಾನಿಗಳನ್ನು ತಹಬಂದಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಗೆ ಮಾನ್ಯತೆ ಸಿಕ್ಕಿಲ್ಲವೆಂದು ಕರಡಿ ಸಂಗಣ್ಣ ಮತ್ತು ಗಂಗಾವತಿ ಶಾಸಕ ಪರಣ್ಣ ಮನನವಳ್ಳಿ ಅವರು ಶೆಟ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications