ಒಲಿಂಪಿಕ್ಸ್ ಗೆ ತೆರಳಲು ಕಲ್ಮಾಡಿಗೆ ಅನುಮತಿ

ಜುಲೈ 27 ರಿಂದ ಆಗಸ್ಟ್ 12ರ ತನಕ ನಡೆಯುವ ವಿಶ್ವದ ಜನಪ್ರಿಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಸುರೇಶ್ ಕಲ್ಮಾಡಿ ಅವರು ಕೋರ್ಟ್ ಅನುಮತಿ ಕೋರಿದ್ದರು. ಶುಕ್ರವಾರ ಕಲ್ಮಾಡಿ ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾ. ತಲ್ವಂತ್ ಸಿಂಗ್ ಅವರು ಕಲ್ಮಾಡಿಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ 10 ಲಕ್ಷ ರುಪಾಯಿ ಬಾಂಡ್ ಹಾಗೂ ಅಷ್ಟೇ ಮೊತ್ತದ ಭದ್ರತೆ ನೀಡಲು ಸೂಚಿಸಿದ್ದಾರೆ.
ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಷನ್(IAAF) ನ ಸದಸ್ಯರಾಗಿರುವ ಕಲ್ಮಾಡಿ ಅವರು ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಹಾಜರಿರುವುದಾಗಿ ಭರವಸೆ ನೀಡಿದ್ದಾರೆ. ಬಹುಕೋಟಿ ಕಾಮನ್ ವೆಲ್ತ್ ಗೇಮ್ಸ್ ಹಗರಣದ ಪ್ರಮುಖ ಆರೋಪಿಯಾಗಿರುವ ಕಲ್ಮಾಡಿ ಅವರು ಒಲಿಂಪಿಕ್ಸ್ ಗೆ ತೆರಳುವುದರ ಬಗ್ಗೆ ಕ್ರೀಡಾ ಸಚಿವ ಅಜಯ್ ಮಾಕೆನ್ ಅವರು ಅಕ್ಷೇಪವ್ಯಕ್ತಪಡಿಸಿದ್ದರು.
ಬಹುಕೋಟಿ ಕಾಮನ್ ವೆಲ್ತ್ ಕ್ರೀಡಾಕೂಟ ಹಗರಣದ ಆರೋಪಿ ಸಂಸದ ಸುರೇಶ್ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಜನವರಿ 19, 2012 ರಂದು ಜಾಮೀನು ಮಂಜೂರು ಮಾಡಿತ್ತು.
ಭ್ರಷ್ಟಾಚಾರದ ಆರೋಪದ ಮೇಲೆ ಸುರೇಶ್ ಅವರನ್ನು ಬಂಧಿಸಲಾಗಿತ್ತು. ಕಾಮನ್ ವೆಲ್ತ್ ಗೇಮ್ಸ್ ಆಯೋಜಕ ಸಮಿತಿಯ ಅಧ್ಯಕ್ಷರಾಗಿದ್ದ ಕಲ್ಮಾಡಿ ಅವ್ಯವಹಾರದಲ್ಲಿ ಪಾಲ್ಗೊಂಡಿದ್ದ ಬಗ್ಗೆ ಆರೋಪಗಳು ಕೇಳಿ ಬಂದಿತ್ತು.
ಕಾಂಗ್ರೆಸ್ ಸಂಸದ ಸುರೇಶ್ ಕಲ್ಮಾಡಿ ಸುಮಾರು 10 ತಿಂಗಳುಗಳ ಕಾಲ ತಿಹಾರ್ ಜೈಲಿನಲ್ಲಿ ಕಾಲ ಕಳೆದಿದ್ದರು. 5 ಲಕ್ಷ ಶ್ಯೂರಿಟಿ ನೀಡಿದ ಮೇಲೆ ಕಲ್ಮಾಡಿ ಜೈಲಿನಿಂದ ಹೊರ ಬಿದ್ದಿದ್ದರು.
ಪುಣೆ ಮಾಜಿ ಸಂಸದ ಮತ್ತು ಒಲಿಂಪಿಕ್ಸ್ ಸಮಿತಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಬುದ್ಧಿಮಾಂದ್ಯತೆ ರೋಗದಿಂದ ಬಳಲುತ್ತಿರುವುದನ್ನು ವೈದ್ಯರು ಖಚಿತಪಡಿಸಿದ್ದರು.
67 ವರ್ಷದ ಸುರೇಶ್ ಕಲ್ಮಾಡಿ ಅವರಿಗೆ ಮರೆವಿನ ರೋಗ ಪ್ರಾಥಮಿಕ ಹಂತದಲ್ಲಿದ್ದು, ಮುಂದೆ ಅವರು ತಮ್ಮ ಸ್ಮರಣ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಅವರ ವ್ಯಕ್ತಿತ್ವ ಕೂಡಾ ಆಗಾಗ ಬದಲಾಗುತ್ತಿದೆ.
ಕಲ್ಮಾಡಿ ಅವರ ಈ ರೋಗ ಕಾಮನ್ ವೆಲ್ತ್ ಹಗರಣದ ವಿಚಾರಣೆ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ನಾರಾಯಣ್ ಜಯಪ್ರಕಾಶ್ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications