ಒಲಿಂಪಿಕ್ಸ್ ಗೆ ತೆರಳಲು ಕಲ್ಮಾಡಿಗೆ ಅನುಮತಿ

ಜುಲೈ 27 ರಿಂದ ಆಗಸ್ಟ್ 12ರ ತನಕ ನಡೆಯುವ ವಿಶ್ವದ ಜನಪ್ರಿಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಸುರೇಶ್ ಕಲ್ಮಾಡಿ ಅವರು ಕೋರ್ಟ್ ಅನುಮತಿ ಕೋರಿದ್ದರು. ಶುಕ್ರವಾರ ಕಲ್ಮಾಡಿ ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾ. ತಲ್ವಂತ್ ಸಿಂಗ್ ಅವರು ಕಲ್ಮಾಡಿಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ 10 ಲಕ್ಷ ರುಪಾಯಿ ಬಾಂಡ್ ಹಾಗೂ ಅಷ್ಟೇ ಮೊತ್ತದ ಭದ್ರತೆ ನೀಡಲು ಸೂಚಿಸಿದ್ದಾರೆ.
ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಷನ್(IAAF) ನ ಸದಸ್ಯರಾಗಿರುವ ಕಲ್ಮಾಡಿ ಅವರು ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಹಾಜರಿರುವುದಾಗಿ ಭರವಸೆ ನೀಡಿದ್ದಾರೆ. ಬಹುಕೋಟಿ ಕಾಮನ್ ವೆಲ್ತ್ ಗೇಮ್ಸ್ ಹಗರಣದ ಪ್ರಮುಖ ಆರೋಪಿಯಾಗಿರುವ ಕಲ್ಮಾಡಿ ಅವರು ಒಲಿಂಪಿಕ್ಸ್ ಗೆ ತೆರಳುವುದರ ಬಗ್ಗೆ ಕ್ರೀಡಾ ಸಚಿವ ಅಜಯ್ ಮಾಕೆನ್ ಅವರು ಅಕ್ಷೇಪವ್ಯಕ್ತಪಡಿಸಿದ್ದರು.
ಬಹುಕೋಟಿ ಕಾಮನ್ ವೆಲ್ತ್ ಕ್ರೀಡಾಕೂಟ ಹಗರಣದ ಆರೋಪಿ ಸಂಸದ ಸುರೇಶ್ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಜನವರಿ 19, 2012 ರಂದು ಜಾಮೀನು ಮಂಜೂರು ಮಾಡಿತ್ತು.
ಭ್ರಷ್ಟಾಚಾರದ ಆರೋಪದ ಮೇಲೆ ಸುರೇಶ್ ಅವರನ್ನು ಬಂಧಿಸಲಾಗಿತ್ತು. ಕಾಮನ್ ವೆಲ್ತ್ ಗೇಮ್ಸ್ ಆಯೋಜಕ ಸಮಿತಿಯ ಅಧ್ಯಕ್ಷರಾಗಿದ್ದ ಕಲ್ಮಾಡಿ ಅವ್ಯವಹಾರದಲ್ಲಿ ಪಾಲ್ಗೊಂಡಿದ್ದ ಬಗ್ಗೆ ಆರೋಪಗಳು ಕೇಳಿ ಬಂದಿತ್ತು.
ಕಾಂಗ್ರೆಸ್ ಸಂಸದ ಸುರೇಶ್ ಕಲ್ಮಾಡಿ ಸುಮಾರು 10 ತಿಂಗಳುಗಳ ಕಾಲ ತಿಹಾರ್ ಜೈಲಿನಲ್ಲಿ ಕಾಲ ಕಳೆದಿದ್ದರು. 5 ಲಕ್ಷ ಶ್ಯೂರಿಟಿ ನೀಡಿದ ಮೇಲೆ ಕಲ್ಮಾಡಿ ಜೈಲಿನಿಂದ ಹೊರ ಬಿದ್ದಿದ್ದರು.
ಪುಣೆ ಮಾಜಿ ಸಂಸದ ಮತ್ತು ಒಲಿಂಪಿಕ್ಸ್ ಸಮಿತಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಬುದ್ಧಿಮಾಂದ್ಯತೆ ರೋಗದಿಂದ ಬಳಲುತ್ತಿರುವುದನ್ನು ವೈದ್ಯರು ಖಚಿತಪಡಿಸಿದ್ದರು.
67 ವರ್ಷದ ಸುರೇಶ್ ಕಲ್ಮಾಡಿ ಅವರಿಗೆ ಮರೆವಿನ ರೋಗ ಪ್ರಾಥಮಿಕ ಹಂತದಲ್ಲಿದ್ದು, ಮುಂದೆ ಅವರು ತಮ್ಮ ಸ್ಮರಣ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಅವರ ವ್ಯಕ್ತಿತ್ವ ಕೂಡಾ ಆಗಾಗ ಬದಲಾಗುತ್ತಿದೆ.
ಕಲ್ಮಾಡಿ ಅವರ ಈ ರೋಗ ಕಾಮನ್ ವೆಲ್ತ್ ಹಗರಣದ ವಿಚಾರಣೆ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ನಾರಾಯಣ್ ಜಯಪ್ರಕಾಶ್ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications