ಉಪರಾಷ್ಟ್ರಪತಿ ಹುದ್ದೆಗೆ ಕಾಂಗ್ರೆಸ್ ಅಭ್ಯರ್ಥಿ ಅನ್ಸಾರಿ

ಪ್ರಧಾನಿ ಮನಮೋಹನ್ ಸಿಂಗ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಿ ಮನೆಯಲ್ಲಿ ಯುಪಿಎ ಅಂಗಪಕ್ಷಗಳು ಸಭೆ ಸೇರಿ ಅನ್ಸಾರಿ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ತಮ್ಮ ತಮ್ಮ ಅನುಮತಿ ಸೂಚಿಸಿದೆ.
ತೃಣಮೂಲ ಕಾಂಗ್ರೆಸ್ ಮಾತ್ರ ಅನ್ಸಾರಿ ಮರು ಆಯ್ಕೆಗೆ ವಿರೋಧ ಪಕ್ಷ ಪಡಿಸಿದೆ. ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಭಾನುವಾರ ( ಜು 15) ತಮ್ಮ ಅಂತಿಮ ನಿಲುವು ಪ್ರಕಟಿಸಲಿದ್ದಾರೆ. ಟಿಎಂಸಿ ಗೋಪಾಲಕೃಷ್ಣ ಗಾಂಧಿ ಅಥವಾ ಕೃಷ್ಣ ಬೋಸ್ ಅವರನ್ನು ಕಣಕ್ಕಿಳಿಸಬೇಕೆಂದು ಒತ್ತಾಯಿಸಿತ್ತು.
ಎನ್ಸಿಪಿಯ ಶರದ್ ಪವಾರ್ ಸಭೆಯಲ್ಲಿ ಭಾಗವಹಿಸದಿದ್ದರೂ ಪಕ್ಷ ಅನ್ಸಾರಿ ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
75 ವರ್ಷದ ಅನ್ಸಾರಿ ಈ ಹಿಂದೆ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಕೂಡಾ ಸೇವೆ ಸಲ್ಲಿಸಿದ್ದರು. ಉಪರಾಷ್ಟ್ರಪತಿ ಹುದ್ದೆಗೆ 2007ರಲ್ಲಿ ನಡೆದ ಚುನಾವಣೆಯಲ್ಲಿ ಅನ್ಸಾರಿ NDA ಮೈತ್ರಿಕೂಟದ ನಜ್ಮಾ ಹೆಪ್ತುಲ್ಲಾ ಅವರನ್ನು ಸೋಲಿಸಿ ಆಯ್ಕೆಯಾಗಿದ್ದರು.
ಪ್ರಧಾನಿ ಸಿಂಗ್ ಆಡ್ವಾಣಿ, ಸುಷ್ಮಾ ಸ್ವರಾಜ್ ಅವರ ಜೊತೆ ಮಾತುಕತೆ ನಡೆಸಿ ಅನ್ಸಾರಿ ಅವರನ್ನು ಬೆಂಬಲಿಸುವಂತೆ ಕೋರಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಸ್ಪರ್ಧೆಯಲ್ಲಿ ಗೆಲ್ಲಲು 396 ವೋಟಿನ ಅವಶ್ಯಕತೆಯಿದ್ದು ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲವಿಲ್ಲದಿದ್ದರೂ ಅನ್ಸಾರಿ ಅವರಿಗೆ 444 ವೋಟು ಅನಾಯಾಸವಾಗಿ ಲಭಿಸಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications