ಎಲ್ಲ 224 ಸ್ಥಾನಕ್ಕೂ ಏಕಾಂಗಿಯಾಗಿ ಸ್ಪರ್ಧಿಸುವೆ

'ಯಾವುದೇ ಪಕ್ಷದೊಂದಿಗೂ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ' ಎಂದು ಸ್ಪಷ್ಟಪಡಿಸಿದ ಶ್ರೀರಾಮುಲು ಅವರು ಸೋಮಶೇಖರ ರೆಡ್ಡಿ ಮತ್ತು ಕಂಪ್ಲಿ ಬಾಬು ಮುಂದಿನ ಚುನಾವಣೆಯಲ್ಲಿ ತಮ್ಮ ಹೊಸ ಪಕ್ಷದ ವತಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು. ಇವರಿಬ್ಬರೂ ಪ್ರಸ್ತುತ ಬಿಜೆಪಿಯಲ್ಲಿದ್ದರೂ ಬಂಡಾಯವೆದ್ದು BSR Congressನ ಶ್ರೀರಾಮುಲು ಜತೆ ದೃಢವಾಗಿ ಗುರುತಿಸಿಕೊಂಡಿದ್ದಾರೆ.
'ಮೊದಲಿನಿಂದಲೂ ನಾನು ಜನಾರ್ದನ ರೆಡ್ಡಿ ಅವರ ನಿಷ್ಠ. ಕರುಣಾಕರ ರೆಡ್ಡಿ ಅವರದು ನಿರ್ಬಂಧಿತ ವ್ಯಕ್ತಿ. ಅವರಿನ್ನೂ ಬಿಜೆಪಿಯಲ್ಲಿ ತಮಗೆ ಭವಿಷ್ಯವಿದೆ. ತಾನು ಮತ್ತೊಮ್ಮೆ ಸಚಿವನಾಗುತ್ತೇನೆ ಅಂದುಕೊಂಡಿದ್ದರು. ಆದರೆ ಮೊನ್ನೆ ಅವರಿಗೆ ಭ್ರಮನಿರಸನವಾಗಿರಬೇಕು' ಎಂದು ರಾಮುಲು ಮಾರ್ಮಿಕವಾಗಿ ನುಡಿದರು.
ಜನಾರ್ದನ ರೆಡ್ಡಿ ಸೆಪ್ಟೆಂಬರ್ 5ರಂದು ಸಿಬಿಐ ಪಾಲು ಆಗುತ್ತಿದ್ದಂತೆ KMF ಸೋಮಶೇಖರ ರೆಡ್ಡಿ ಮತ್ತು ಕಂಪ್ಲಿ ಬಾಬು ರೆಡ್ಡಿಯನ್ನು ಜೈಲಿನಿಂದ ಬಿಡಿಸಿಕೊಂಡು ಬರಲು ಹರಸಾಹಸಪಡುತ್ತಿದ್ದಾರೆ. ಮತ್ತು ಶ್ರೀರಾಮುಲು ತಮ್ಮ ಸಂಪೂರ್ಣ ನಿಷ್ಠೆಯನ್ನು ಜನಾ ರೆಡ್ಡಿಗೇ ಮೀಸಲಿಟ್ಟಿದ್ದಾರೆ. ಆದರೆ ಇದೇ ಕರುಣಾಕರ ರೆಡ್ಡಿ ಅವರತ್ತ ತಲೆ ಹಾಕಿಲ್ಲ.
ಈ ಮಧ್ಯೆ, ಕರುಣಾಕರ ರೆಡ್ಡಿ ಅವರು ಯಡಿಯೂರಪ್ಪ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಶೆಟ್ಟರ್ ನೂತನ ಸಂಪುಟ ರಚನೆ ಬಗ್ಗೆ ತೀವ್ರ ಅತೃಪ್ತಿ ವ್ತಕ್ತಪಡಿಸಿರುವ ಕರುಣಾಕರ ತಮ್ಮ ಬೆಂಬಲಿಗರೊಂದಿಗೆ ಸತತ ಮಾತುಕತೆಯಲ್ಲಿ ತೊಡಗಿದ್ದಾರೆ. ಅವರ ಜತೆಗೆ ಲಕ್ಷ್ಮಣ ಸವದಿ, ಸಿಸಿ ಪಾಟೀಲ್, ಬೇಳೂರು ಗೋಪಾಳ ಕೃಷ್ಣ, ಕರಡಿ ಸಂಗಣ್ಣ, ಸುರೇಶ್ ಗೌಡ ಮತ್ತಿತರ ಶಾಸಕರು ಗುರುತಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಕರುಣಾಕರ ರೆಡ್ಡಿ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಶಿನವಾರ ಬೆಳಗ್ಗೆಯೂ ಅತೃಪ್ತರ ಜತೆಗೂಡಿ ಉಪಹಾರ ಸಭೆ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications