ಮಿಲನದ ನಂತರ ಮೂತ್ರ ಕುಡಿಯುವಂತೆ ಒತ್ತಾಯ

"ನನ್ನ ಪತಿ ನನಗೆ ಕೊಡುತ್ತಿದ್ದ ಸಾಕಷ್ಟು ಕಿರುಕುಳಗಳಲ್ಲಿ ಮೂತ್ರ ಕುಡಿಯುವಂತೆ ಹೇರುತ್ತಿದ್ದ ಒತ್ತಾಯವೂ ಒಂದು. ಹೊಡೆಯುವುದು, ಬಯ್ಯುವುದು, ಹಿಂಸಿಸುವುದಲ್ಲದೇ 25 ಲಕ್ಷ ರು. ಗಳನ್ನು ನನ್ನ ತವರುಮನೆಯಿಂದ ತರುವಂತೆ ನನಗೆ ಕಾಡುತ್ತಿದ್ದರು. ರಾತ್ರಿ ನನಗೆ ನಿದ್ರಿಸಲು ಬಿಡದೇ ಅನಗತ್ಯವಾಗಿ ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದರು" ಎಂದು ತಮ್ಮ ದೂರಿನಲ್ಲಿ ಸ್ವಪ್ನಾ ಆರೋಪಿಸಿದ್ದಾರೆ.
"ನಮ್ಮ ಮದುವೆಯ ವೇಳೆಯಲ್ಲಿ ನಮ್ಮ ಮನೆಯವರು 1 ಕೆ ಜಿ ಬಂಗಾರ ಹಾಗು 5 ಕೆ ಜಿ ಬೆಳ್ಳಿ ಯನ್ನು ಕೊಟ್ಟಿದ್ದರು. ಈಗ ಕ್ಲಿನಿಕ್ ತೆರೆಯಲು ಹಣ ತರುವಂತೆ ಗಂಡ ಪೀಡಿಸುತ್ತಿದ್ದಾನೆ" ಎಂದು ಸ್ವಪ್ನಾ ದೂರಿದ್ದಾರೆ. ಇದೀಗ ಕಾರ್ಕಳದ ಬೇರೊಬ್ಬ ಹುಡುಗಿಯನ್ನು ಮದುವೆಮಾಡಿಕೊಳ್ಳಲು ಅವರು ಹೊಂಚುಹಾಕುತ್ತಿದ್ದಾರೆ. ಹೀಗಾಗಿ ನಾನು ಅನಿವಾರ್ಯವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಬೇಕಾಗಿದೆ" ಎಂದಿದ್ದಾರೆ.
ಇನ್ನೂ ಒಂದು ಆಶ್ಚರ್ಯದ ಸಂಗತಿ ಎಂದರೆ, ಆಕಾಶ್ ಸಹೋದರ ಅನಿಲ್ ಕೂಡ ತನ್ನ ಹೆಂಡತಿಗೆ ಇದೇ ರೀತಿ ವರದಕ್ಷಿಣೆ ಕಿರುಕುಳ ಹಾಗೂ ಹಿಂಸೆ ನೀಡಿ ನಂತರ ವಿಚ್ಛೇದನ ನೀಡಿದ್ದರು. ಈ ಚಾಳಿಯನ್ನು ಆಕಾಶ್ ಅನುಸರಿಸುತ್ತಿದ್ದು ಅವರ ಮನಯವರೆಲ್ಲರೂ ಇದನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಈ ಪ್ರಕರಣದ ನಂತರ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಆರೋಪಿ ಆಕಾಶ್ ರಾಜ್ ಅವರನ್ನು ಪುತ್ತೂರಿನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಪೊಲೀಸರು ಮುಂದಿನ ವಿಚಾರಣೆ ನಡೆಸಲಿದ್ದಾರೆ. ಪತ್ನಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಆಕಾಶ್ ರಾಜ್ ನನ್ನು ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಆತನನ್ನು ವಶಕ್ಕೆ ತೆಗೆದುಕೊಳ್ಳಲು ನ್ಯಾಯಾಧೀಶರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications