ಇಂದೋ ಅಥವಾ ನಾಳೆ KMF ರೆಡ್ಡಿ ಬಂಧನ

ನಿಖರವಾಗಿ ಒಂದೊಂದೇ ಸಾಕಕ್ಷ್ಯಗಳನ್ನು ಸಂಗ್ರಹಿಸಿಕೊಂಡು ಬಳ್ಳಾರಿವರೆಗೂ ಬಂದಿರುವ ACB ತಂಡದ ಪಕಡ್ ಬಂಧಿ ಬಲವಾಗಿದ್ದು, ಜಡ್ಜ್ ಪಟ್ಟಾಭಿ ಲಂಚ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿಗಳಾದ KMF ರೆಡ್ಡಿ ಮತ್ತು ಕಂಪ್ಲಿ ಬಾಬು 6 ಮತ್ತು 7ನೆಯವರಾಗಿ ACB ಪಾಲಾಗಲಿದ್ದಾರೆ. ಈ ಮಧ್ಯೆ ಲಂಚ ಪ್ರಕರಣ ಸಿಬಿಐ ತನಿಖೆಗೆ ಮರಳಲಿದೆ.
ವಾಸ್ತವವಾಗಿ ಜಡ್ಜ್ ಪಟ್ಟಾಭಿ ಲಂಚ ಪ್ರಕರಣವನ್ನು ತಾನೇ ನಡೆಸಬೇಕೋ ಅಥವಾ ಸಿಬಿಐ ರಾಜ್ಯ ಸರಕಾರವನ್ನು ಕೋರಿರುವಂತೆ ಮರಳಿ ಸಿಬಿಐಗೇ ತನಿಖೆಗೆ ಒಪ್ಪಿಸಬೇಕೋ ಎಂಬುದು ಇತ್ಯರ್ಥವಾಗದ ಕಾರಣ KMF ರೆಡ್ಡಿ ಮತ್ತು ಕಂಪ್ಲಿ ಬಾಬು ವಿಚಾರಣೆ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಡ್ಜುಗಳಾದ ಪಟ್ಟಾಭಿ, ಚಲಪತಿರಾವ್, ಪ್ರಭಾಕರ ರಾವ್, ಲಕ್ಷ್ಮಿನರಸಿಂಹ ರಾವ್, ಪಟ್ಟಾಭಿ ಪುತ್ರ ರವಿಚಂದ್ರ, ರೌಡಿಶೀಟರ್ ಯಾದಗಿರಿ ರಾವ್ ಈಗಾಗಲೇ ACB ಆತಿಥ್ಯದಲ್ಲಿದ್ದಾರೆ.
ಜನಾರ್ದನ ರೆಡ್ಡಿಯ ಜಾಮೀನಿಗಾಗಿ KMF ಸೋಮಶೇಖರ ರೆಡ್ಡಿ, ಆತನ ಮತ್ತೊಬ್ಬ ಸಂಬಂಧಿ ದಶರಥ ರೆಡ್ಡಿ ಮತ್ತು ಕಂಪ್ಲಿ ಶಾಸಕ ಟಿಎಚ್ ಸುರೇಶ್ ಬಾಬು ತನಗೆ 20 ಕೋಟಿ ರುಪಾಯಿ ಹಣ ನೀಡಿದರು ಎಂದು ಯಾದಗಿರಿ ರಾವ್ ಹೇಳಿಕೆ ನೀಡಿರುವುದು ಇವರುಗೆಲ್ಲ ಮುಳುಗುನೀರು ತಂದಿದೆ. ಯಾದಗಿರಿಯ mobile call details ಮತ್ತು ಸಂದರ್ಭ ಸಾಕ್ಷ್ಯಗಳನ್ನು ಸಂಗ್ರಹಿಸಿರುವ CBI ಮತ್ತು ACB ಪ್ರಕರಣದ ಆಳ-ಅಗಲಗಳನ್ನು ಸಮಸ್ತವಾಗಿ ಜಾಲಾಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications