ಮೈಸೂರಿನಲ್ಲಿ ನಾಗಲಕ್ಷ್ಮಿ ಅವರಿಂದ 'ಹರಿಯ ಕಾಣಿಕೆ'
ಮೈಸೂರು, ಜು. 17 : ತಾವು ಸ್ವತಃ ಲೇಖಕರಾಗಿದ್ದುದಲ್ಲದೆ ವಿಶ್ವದಾದ್ಯಂತ ಅಸಂಖ್ಯ ಉದಯೋನ್ಮುಖ ಲೇಖಕರನ್ನು ಹುರಿದುಂಬಿಸಿ ಬೆಳೆಸಿದ ಖ್ಯಾತ ಲೇಖಕ, ಕವಿ, ವಿಮರ್ಶಕ ದಿ. ಶಿಕಾರಿಪುರ ಹರಿಹರೇಶ್ವರ (1936 - July 22, 2010) ಅವರು ಅಗಲಿ ಜುಲೈ 22ನೇ ತಾರೀಖಿಗೆ ಎರಡು ವರ್ಷಗಳಾಗುತ್ತವೆ.

ಈ ಸಂದರ್ಭದಲ್ಲಿ ಅವರ ಎರಡನೇ ವರ್ಷದ ಸವಿನೆನಪಿನಲ್ಲಿ ಹರಿಯವರು ಬರೆದಿರುವ ಸಮಗ್ರ ಪ್ರಬಂಧಗಳನ್ನು ಅವರ ಪತ್ನಿ ನಾಗಲಕ್ಷ್ಮಿ ಹರಿಹರೇಶ್ವರ ಅವರು ಸಂಪಾದಿಸಿ 'ಹರಿಯ ಕಾಣಿಕೆ' ಎಂಬ ಶೀರ್ಷಿಕೆಯಡಿಯಲ್ಲಿ ಸುಮಾರು ಒಂದು ಸಾವಿರದ ಐದುನೂರು ಪುಟಗಳ ಎರಡು ಬೃಹತ್ ಸಂಪುಟಗಳನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕೃತಿಗಳನ್ನು ಲೋಕಾರ್ಪಣೆಯನ್ನು ಪ್ರೊ| ಎನ್.ಎಸ್. ತಾರಾನಾಥ್, ಕನ್ನಡ ಅಧ್ಯಯನ ಕೇಂದ್ರ, ಮೈಸೂರು ಹಾಗೂ ಗ್ರಂಥಾವಲೋಕನವನ್ನು ಪ್ರೊ| ಕೆ. ಅನಂತರಾಮು ನಿವೃತ್ತ ಕನ್ನಡ ಪ್ರಾಧ್ಯಾಪಕ, ಮೈಸೂರು ವಿಶ್ವವಿದ್ಯಾನಿಲಯ ಇವರು ನಡೆಸಿಕೊಡಲಿದ್ದಾರೆ. ಹಾಗೇನೆ ಹರಿಯವರಿಗೆ ಯಕ್ಷಗಾನ ಎಂದರೆ ತುಂಬಾ ಪ್ರೀತಿ. ಅವರ ಆಸೆ ನೆರವೇರಿಸುವ ನಿಟ್ಟಿನಲ್ಲಿ ಕೇಂದ್ರದ ಯಕ್ಷಗುರು ಮಲ್ಪೆ ಪ್ರದೀಪ ವಿ. ಸಾಮಗ ರವರ ನಿರ್ದೇಶನದಲ್ಲಿ ಕರಾವಳಿ ಕಲಾವಿದರಿಂದ 'ಪಾಶುಪತಾಸ್ತ್ರ' ಯಕ್ಷಗಾನವನ್ನು ಏರ್ಪಡಿಸಲಾಗಿದೆ.
ಜುಲೈ 22ನೇ ತಾರೀಖು ಭಾನುವಾರ, ಬೆಳಿಗ್ಗೆ 10.30ಕ್ಕೆ ಶಾರದಾವಿಲಾಸ ಕಾಲೇಜು ಶತಮಾನೋತ್ಸವ ಭವನ, ಕೃಷ್ಣಮೂರ್ತಿ ಪುರಂ, ಬಲ್ಲಾಳ್ ವೃತ್ತದ ಬಳಿ, ಮೈಸೂರು ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತಾವುಗಳು ದಯವಿಟ್ಟು ಬರಬೇಕಾಗಿ ತಮ್ಮಲ್ಲಿ ಕೋರುತ್ತೇನೆ ಎಂದು ನಾಗಲಕ್ಷ್ಮಿ ಹರಿಹರೇಶ್ವರ ಅವರು ಆಹ್ವಾನ ನೀಡಿದ್ದಾರೆ.
ಅಧ್ಯಕ್ಷತೆ ಮತ್ತು ಕೃತಿಗಳ ಲೋಕಾರ್ಪಣೆ : ಪ್ರೊ. ಎನ್.ಎಸ್. ತಾರಾನಾಥ್, ಕನ್ನಡ ಅಧ್ಯಯನ ಕೇಂದ್ರ, ಮೈಸೂರು
ಗ್ರಂಥಾವಲೋಕನ : ಪ್ರೊ. ಕೆ. ಅನಂತರಾಮು, ನಿವೃತ್ತ ಕನ್ನಡ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ.
ದಿನಾಂಕ, ಸಮಯ : ಜು.22, ಭಾನುವಾರ, ಬೆಳಿಗ್ಗೆ 10.30ಕ್ಕೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications